ನಟ ಅನಿರುದ್ಧ್ 
ಸಿನಿಮಾ ಸುದ್ದಿ

ವಿಷ್ಣು ಹೆಸರಲ್ಲಿ ಫಿಲಂ ಇನ್ಸ್ಟಿಟ್ಯೂಟ್ ಏಕಿಲ್ಲ: ಸರ್ಕಾರದ ವಿರುದ್ಧ ಅನಿರುದ್ಧ್ ಮತ್ತೆ ಗರಂ

ನಟ ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ಅವರ ಅಳಿಯ ಹಾಗೂ ನಟ ಅನಿರುದ್ಧ ಮತ್ತೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ...

ಬೆಂಗಳೂರು: ನಟ ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ಅವರ ಅಳಿಯ ಹಾಗೂ ನಟ ಅನಿರುದ್ಧ ಮತ್ತೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ. 
ವಿಷ್ಣು ಸ್ಮಾರಕ ವಿಚಾರದಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ. ಜೊತೆಗೆ ಹಿರಿಯ ನಟರಾದ ರಾಜ್ ಕುಮಾರ್, ಅಂಬರೀಷ್ ಹೆಸರಿನಲ್ಲಿ ಫಿಲ್ಮ್ ಇನ್ಸ್ಟಿಟ್ಯೂಟ್ ಮಾಡಲಾಗುವುದು ಎಂದು ಹೇಳುವ ಸರ್ಕಾರ, ವಿಷ್ಣುವರ್ಧನ್ ಹೆಸರಿನಲ್ಲಿ ಏಕೆ ಫಿಲ್ಮ್ ಇನ್ಸ್'ಟಿಟ್ಯೂಟ್ ಮಾಡುತ್ತೇನೆಂದು ಹೇಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. 
ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಗ್ಗೆ ನನಗ್ಯಾವ ಕೋಪವೂ ಇಲ್ಲ. ಅವರ ಮೇಲೆ ಭರವಸೆಯಿದೆ. ಹಾಗೆಯೇ ನನ್ನ ಹೇಳಿಕೆ ವೈಯಕ್ತಕವೂ ಆಗಿರಲಿಲ್ಲ. ಆದರೆ, ವಿಷ್ಣು ಸ್ಮಾರಕ ವಿಚಾರವನ್ನು ಅವರು ಗಂಭೀರವಾಗಿ ಪರಿಗಣಿಸಿಲ್ಲ. ಅಂಬರೀಷ್ ಅವರ ಶ್ರದ್ಧಾಂಜಲಿ ಸಭೆಯಲ್ಲೂ ಅವರು ವಿಷ್ಣು ಸ್ಮಾರಕ ವಿಚಾರವನ್ನು ಪ್ರಸ್ತಾಪಿಸಿಲ್ಲ. ಅದೇ ನನಗೆ ನೋವು ತಂದಿದೆ ಎಂದು ತಿಳಿಸಿದರು. 
ಈ ನಡುವೆ ಮೈಸೂರಿನಲ್ಲಿ ಚಿತ್ರ ನಗರಿ ನಿರ್ಮಿಸುವ ಸಂಬಂಧ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಕುಮಾರಸ್ವಾಮಿಯವರು ನಿರಾಕರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT