ತೋತಾಪುರಿ ಚಿತ್ರ ತಂಡ 
ಸಿನಿಮಾ ಸುದ್ದಿ

'ತೋತಾಪುರಿ' ಯಲ್ಲಿ ಶಕೀಲಾ ಭಾನು ಪಾತ್ರದಲ್ಲಿ ಅದಿತಿ ಪ್ರಭುದೇವ

ಧೈರ್ಯಂ ಮೂಲಕ ಪಾದಾರ್ಪಣೆ ಮಾಡಿದ ನಾಯಕಿ ಅದಿತಿ ತೋತಾಪುರಿ'ಯಲ್ಲಿ ಮುಸ್ಲಿಂ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ....

ಬೆಂಗಳೂರು:  ಜಗ್ಗೇಶ್‌ ಅಭಿನಯದ, ವಿಜಯ ಪ್ರಸಾದ್‌ ನಿರ್ದೇಶನದ "ತೋತಾಪುರಿ' ಚಿತ್ರ ಆರಂಭವಾಗಿರುವ ಬಗ್ಗೆ ನಿಮಗೆ ಗೊತ್ತೇ ಇದೆ. ಈಗಾಗಲೇ ಸುಮಾರು 25 ದಿನಗಳ ಕಾಲ ಬನ್ನೂರಿನಲ್ಲಿ ಚಿತ್ರೀಕರಣ ನಡೆದಿದೆ.
ಧೈರ್ಯಂ ಮೂಲಕ ಪಾದಾರ್ಪಣೆ ಮಾಡಿದ  ನಾಯಕಿ ಅದಿತಿ "ತೋತಾಪುರಿ'ಯಲ್ಲಿ ಮುಸ್ಲಿಂ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಶಕೀಲಾ ಭಾನು ಎಂಬ ಪಾತ್ರದಲ್ಲಿ ನಟಿಸುತ್ತಿದ್ದು, ಪಾತ್ರ ಸಖತ್‌ ಬೋಲ್ಡ್‌ ಆಗಿದೆಯಂತೆ. ಈಗಾಗಲೇ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಅದಿತಿ, ಸಹಜವಾಗಿಯೇ ಸಿನಿಮಾ ಬಗ್ಗೆ  ಎಕ್ಸೈಟ್‌ ಆಗಿದ್ದಾರೆ. ಇನ್ನು ಚಿತ್ರದಲ್ಲಿ ಜಗ್ಗೇಶ್‌ ಅವರ ಪಾತ್ರ ಹಾಗೂ ಗೆಟಪ್‌ ಕೂಡಾ ಭಿನ್ನವಾಗಿದ್ದು, ಮತ್ತೂಂದು ಯಶಸ್ಸು ಗಳಿಸುವ ನಿರೀಕ್ಷೆಯಲ್ಲಿದೆ ಚಿತ್ರತಂಡ. ಈ ಚಿತ್ರವನ್ನು ಕೆ.ಎ.ಸುರೇಶ್‌ ನಿರ್ಮಿಸುತ್ತಿದ್ದಾರೆ. 
ನಿರ್ದೇಶಕ ವಿಜಯಪ್ರಸಾದ್‌ ಸಿನಿಮಾ. ವಿಜಯ ಪ್ರಸಾದ್‌ ಅವರ ಸಿನಿಮಾಗಳನ್ನು ನೋಡಿದರೆ ಅಲ್ಲಿ ನಾಯಕಿಗೆ ಸಾಕಷ್ಟು ವಿಭಿನ್ನ ಹಾಗೂ ಬೋಲ್ಡ್‌ ಪಾತ್ರಗಳನ್ನು ನೀಡುತ್ತಾ ಬಂದಿದ್ದಾರೆ. ಮುಸ್ಲಿಂ ಹುಡುಗಿಯ ಪಾತ್ರದಲ್ಲಿ ನಟಿಸಿರುವ ಅದಿತಿ ನಮಾಜ್ ಮಾಡುವುದು ಹಾಗೂ ಅವರ ಶೈಲಿಯಲ್ಲಿ ಕನ್ನಡ ಮಾತನಾಡುವುದನ್ನು ಪ್ರಾಕ್ಟೀಸ್ ಮಾಡುತ್ತಿದ್ದಾರಂತೆ, ಸೆಟ್ ಗೆ ಬರುವ ಮುನ್ನ ಎರಡು ದಿನ ಪ್ರಾಕ್ಟೀಸ್ ಮಾಡಿದ್ದಾಗಿ ಅದಿತಿ ಹೇಳಿದ್ದಾರೆ.
ಈ ಪಾತ್ರಕ್ಕಾಗಿ ಸುಮಾರು ಒಂದೂವರೆ ತಿಂಗಳಲ್ಲ ಅದಿತಿ ಆರು ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರೆ, ಇನ್ನೂ ಚಿರಂಜೀವಿ ಸರ್ಜಾ ನಟನೆಯ ಸಿಂಗ ಚಿತ್ರಕ್ಕೂ ಅದಿತಿ ನಾಯಕಿಯಾಗಿದ್ದು ಆರೋಗ್ಯವಂತ ಹಳ್ಳಿ ಹುಡುಗಿ ಪಾತ್ರಕ್ಕಾಗಿ ಈ ತೂಕ ಹೆಚ್ಚಳ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ,
ಇನ್ನೂ ತೋತಾಪುರಿಯಲ್ಲಿ ಭೈರವ ಗೀತ ನಾಯಕ ಧನಂಜಯ ಕೂಡ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ, ಸಿನಿಮಾದಲ್ಲಿ ಸುಮನ್ ರಂಗನಾಥ್ ಕೂಡ ನಟಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT