ಆರೋಹಿ ನಾರಾಯಣ್ 
ಸಿನಿಮಾ ಸುದ್ದಿ

ಆಕಾಶ್ ಶ್ರೀವತ್ಸ ಚಿತ್ರಕ್ಕಾಗಿ ಆರೋಹಿ ನಾರಾಯಣ್ ಮನೋವೈದ್ಯೆ!

ಆಕಾಶ್ ಶ್ರೀವತ್ಸ ತನ್ನ ಮುಂದಿನ ಚಿತ್ರ ನಿರ್ದೇಶನದಲ್ಲಿ ಸಕ್ರಿಯರಾಗಿದ್ದಾರೆ. ರಮೇಶ್ ಅರವಿಂದ್ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರದ ಬಗ್ಗೆ ಹಿಂದೊಮ್ಮೆ ಪತ್ರಿಕೆ ವರದಿ ಮಾಡಿತ್ತು.

ಬೆಂಗಳೂರು: ಆಕಾಶ್ ಶ್ರೀವತ್ಸ ತನ್ನ ಮುಂದಿನ ಚಿತ್ರ ನಿರ್ದೇಶನದಲ್ಲಿ ಸಕ್ರಿಯರಾಗಿದ್ದಾರೆ. ರಮೇಶ್ ಅರವಿಂದ್ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರದ ಬಗ್ಗೆ ಹಿಂದೊಮ್ಮೆ ಪತ್ರಿಕೆ ವರದಿ ಮಾಡಿತ್ತು. ಅಲ್ಲದೆ ಈ ಚಿತ್ರದಲ್ಲಿ ಎರಡು ಮಹಿಳಾ ಪಾತ್ರಗಳು ಮುಖ್ಯ ಭೂಮಿಕೆಯಲ್ಲಿರಲಿದೆ ಎನ್ನುವುದು ಸಹ ವರದಿಯಾಗಿತ್ತು.
ಆ ಎರಡು ಪಾತ್ರಗಳಲ್ಲಿ ಒಬ್ಬರು ರಂಗಿತರಂಗ ಖ್ಯಾತಿಯ ರಾಧಿಕಾ ಚೇತನ್ ಎನ್ನುವುದು ಹಳೇಸುದ್ದಿ ಈಗ ಸಿಕ್ಕಿರುವ ಮಾಹಿತಿಯಂತೆ ನಿರ್ದೇಶಕರು ಚಿತ್ರದ ಇನ್ನೊಂದು ಮುಖ್ಯ ಪಾತ್ರಕ್ಕಾಗಿ ಆರೋಹಿ ನಾರಾಯಣ್ ಅವರನ್ನು ಆಯ್ಕೆ ಮಾಡಿದಾರೆ.
"ದೃಶ್ಯ" ಚಿತ್ರದ ಮೂಲಕ ನಟನಾ ವೃತ್ತಿಗೆ ಪಾದಾರ್ಪಣೆ ಮಾಡಿದ್ದ ಆರೋಹಿ ನಾರಾಯಣ್ ಇದಾಗಲೇ "ಭೀಮಸೇನ ನಳ ಮಹಾರಾಜ" ಚಿತ್ರದಲ್ಲಿ ಅಭಿನಯಿಸಿದ್ದು ಚಿತ್ರ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ.
ಆಕಾಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರದಲ್ಲಿ ಆರೋಹಿ ಇದೇ ಮೊದಲ ಬಾರಿಗೆ ರಮೇಶ್ ಹಾಗೂ ರಾಧಿಕಾ ಅವರೊಡನೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.ರಾಧಿಕಾ ಈ ಚಿತ್ರದಲ್ಲಿ ವಕೀಲಲ್ಗಿ ಹಾಗೂ ರಮೇಶ್ ಅರವಿಂದ್ ಪತ್ನಿಯಾಗಿ ಕಾಣಿಸಿದರೆ ಆರೋಹಿ ಮನೋವೈದ್ಯಳ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇನ್ನೂ ಹೆಸರಿಡದ ಈ ಚಿತ್ರಕ್ಕೆ ಆಕಾಶ್ ಹಾಗೂ ಅಭಿಜಿತ್ ವೈಆರ್ ಕಥೆ ಬರೆದಿದ್ದು ಜುದಾ ಸ್ಯಾಂಡಿ ಸಂಗೀತವಿದೆ.
ಸಸ್ಪೆನ್ಸ್ ಥ್ರಿಲ್ಲರ್ ಕಥಾನಕವಾಗಿರುವ ಈ ಚಿತ್ರದಲ್ಲಿ ರಮೇಶ್ ಅರವಿಂದ್ ಸಹ ವಿಭಿನ್ನ ಗೆಟಪ್ ನಲ್ಲಿ ಕಾಣಿಸಲಿದ್ದು ಮುಖ್ಯ ಪಾತ್ರಗಳ ಆಯ್ಕೆ ಮುಗಿದ ಬಳಿಕ ಜನವರಿಯಿಂದ ಚಿತ್ರತಂಡ ಲೊಕೇಷನ್ ಗಳ ಹುಡುಕಾಟದಲ್ಲಿ ತೊಡಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT