ವಿಕ್ರಮ್ ರವಿಚಂದ್ರನ್ 
ಸಿನಿಮಾ ಸುದ್ದಿ

ನಿರ್ಮಾಪಕ ಮತ್ತು ನಿರ್ದೇಶಕರ ಕಿತ್ತಾಟದಿಂದ ನನ್ನ ಮೊದಲ ಸಿನಿಮಾ ಸೆಟ್ಟೇರಲಿಲ್ಲ: ವಿಕ್ರಮ್ ಮನೋರಂಜನ್

ಎಲ್ಲವೂ ಅಂದುಕೊಂಡಂತೆ ಆಗಿದ್ದರೇ ಇಷ್ಟೊತ್ತಿಗೆ ವಿಕ್ರಮ್ ರವಿಚಂದ್ರನ್ ಅಭಿನಯದ ನವೆಂಬರ್ ನಲ್ಲಿ ನಾನು ಅವಳು ಸಿನಿಮಾ ರಿಲೀಸ್ ಆಗಬೇಕಿತ್ತು, ಆದರೆ ...

ಬೆಂಗಳೂರು: ಎಲ್ಲವೂ ಅಂದುಕೊಂಡಂತೆ ಆಗಿದ್ದರೇ ಇಷ್ಟೊತ್ತಿಗೆ ವಿಕ್ರಮ್ ರವಿಚಂದ್ರನ್ ಅಭಿನಯದ  ನವೆಂಬರ್ ನಲ್ಲಿ ನಾನು ಅವಳು ಸಿನಿಮಾ ರಿಲೀಸ್ ಆಗಬೇಕಿತ್ತು, ಆದರೆ ನಿರ್ಮಾಪಕ ಮತ್ತು ನಿರ್ದೇಶಕರ ನಡುವಿನ ಮನಸ್ತಾಪದಿಂದಾಗಿ ಸಿನಿಮಾ ಸೆಟ್ಟೇರಲೇ ಇಲ್ಲ.
ಇದರಿಂದ ಪಾಠ ಕಲಿತಿರುವ ವಿಕ್ರಮ್, ಮುಂದಿನ ಸಿನಿಮಾದಲ್ಲಿ ನಟಿಸುವಾಗ ಕೇರ್ ಫುಲ್ ಆಗಿರಲು ನಿರ್ದರಿಸಿದ್ದಾರೆ. ಹಿಂದಿನ ಪ್ರಾಜೆಕ್ಟ್ ನಿಂದ ಸಮಯ ವ್ಯರ್ಥವಾಗಿದೆ, ಹೀಗಾಗಿ ನಾನು ವೃತ್ತಿಯಲ್ಲಿ ಹಿಂದುಳಿದಿದ್ದೇನೆ, ಏಕೆಂದರೇ ನನಗೆ ನನ್ನದೇ ಆದಂತ ದೃಷ್ಟಿಕೋನವಿದೆ, ನಾನು ನಿಧಾನವಾಗಿ ಹೆಜ್ಜೆ ಇಡುತ್ತೇನೆ, 'ನವೆಂಬರ್ ನಲ್ಲಿ'  ಈ ಸಿನಿಮಾದಂತೆ ಅಗುವುದು ನನಗೆ ಇಷ್ಟವಿಲ್ಲ, ನಿರ್ದೇಶಕ ಮತ್ತು ನಿರ್ಮಾಪಕರ ಜಗಳ ನನ್ನ ಮೇಲೆ ಪರಿಣಾಮ ಬೀರಿದೆ ಎಂದು ವಿಕ್ರಮ್ ರವಿಚಂದ್ರನ್ ಹೇಳಿದ್ದಾರೆ.
ಸಹನಾಮೂರ್ತಿ ಅವರ ಜೊತೆ ನಿಮ್ಮ ಚೊಚ್ಚಲ ಸಿನಿಮಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ನಾವು ಈ ಸಂಬಂಧ ಮಾತುಕತೆ ನಡೆಯುತ್ತಿದೆ.ನಾನು ಈ ವಿಷಯವನ್ನು ನನ್ನ ತಂದೆಗೆ ಬಿಟ್ಟಿದ್ದೇನೆ, ಅವರೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. 
ನಾನು ನನ್ನ ತಂದೆಯ ಅತಿ ದೊಡ್ಡ ಅಭಿಮಾನಿ, ನನಗಿಂತ ನನ್ನ ತಂದೆಗೆ ನನ್ನ ವೃತ್ತಿ ಜೀವನದ ಮೇಲೆ ಹೆಚ್ಚಿನ ಆಸಕ್ತಿಯಿದೆ, ಹೀಗಾಗೀ ಅವರೇ ನನ್ನ ಜೀವನದ ಎಲ್ಲಾ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ, ನನ್ನ ಸಹೋದರ ಮನೋರಂಜನ್ ನನಗೆ ಹೆಚ್ಚಿನ ಬೆಂಬಲ ನೀಡುತ್ತಾರೆ, ನನ್ನ ತಂದೆಯ ಹೆಸರನ್ನು ಉಳಿಸಿಕೊಂಡು ಹೋಗಲು ನಾವಿಬ್ಬರು ಪ್ರಯತ್ನ ಪಡುತ್ತೇವೆ ಎಂದು ಹೇಳಿದ್ದಾರೆ.
ನನಗೆ ಸುಳ್ಳು ಹೇಳಲು ಇಷ್ಟವಿಲ್ಲ, ನನಗೆ ಬರುತ್ತಿರುವ ಆಫರ್ ಗಳು ಕಡಿಮೆ ಇವೆ, ಕೆಲವೇ ಕೆಲವು ಮಂದಿಯಿಂದ ನನಗೆ ಆಫರ್ ಬಂದಿದೆ, ಉತ್ತಮ ಕಥೆ ಬಂದರೆ ನಾನು ಒಪ್ಪಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT