ಕೆಜಿಎಫ್ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ಕೆಜಿಎಫ್' ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ, ಯಶ್ ಅಭಿಮಾನಿಗಳಿಗೆ ನಿರಾಶೆ

ದೇಶಾದ್ಯಂತ ನಾಳೆ ತೆರೆಕಾಣಬೇಕಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಬಹು ನಿರೀಕ್ಷಿತ 'ಕೆಜಿಎಫ್' ಬಿಡುಗಡೆಗೆ ಕೋರ್ಟ್.....

ಬೆಂಗಳೂರು: ದೇಶಾದ್ಯಂತ ನಾಳೆ ತೆರೆಕಾಣಬೇಕಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಬಹು ನಿರೀಕ್ಷಿತ 'ಕೆಜಿಎಫ್' ಬಿಡುಗಡೆಗೆ ಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದರಿಂದ 'ಕೆಜಿಎಫ್'ಗಾಗಿ ಕಾಯುತ್ತಿದ್ದ ಯಶ್ ಅಭಿಮಾನಿಗಳಿಗೆ ತೀವ್ರ ನಿರಾಶೆಯಾಗಿದೆ.
'ಕೆಜಿಎಫ್' ರೌಡಿ ತಂಗಂ ಜೀವನಾಧರಿತ ಸಿನಿಮಾ ಆಗಿದೆ ಎಂದು ಆರೋಪಿಸಿ ವೆಂಕಟೇಶ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ 10ನೇ ಸಿಟಿ ಸಿವಿಲ್ ಕೋರ್ಟ್, 2019, ಜನವರಿ 7ರ ವರೆಗೆ ಚಿತ್ರ ಬಿಡುಗಡೆಗೆ ತಡೆಯಾಜ್ಞೆ ನೀಡಿದೆ.
ತಂಗಂ ಎಂಬ ಕುಖ್ಯಾತ ರೌಡಿಯ ಜೀವನಾಧಾರಿತ ಕತೆಯನ್ನೇ 'ಕೆ.ಜಿ.ಎಫ್​' ಸಿನಿಮಾದಲ್ಲಿ ಚಿತ್ರಿಸಲಾಗಿದೆ. ಆದರೆ ಈ ಹಿಂದೆಯೇ ತಂಗಂ ಜೀವನಾಧಾರಿತ ಕತೆಯನ್ನು ಚಿತ್ರೀಕರಿಸಲು ವೆಂಕಟೇಶ್​ ಅವರು ಹಕ್ಕು ಪಡೆದಿದ್ದರು. ಈಗ ವೆಂಕಟೇಶ್​ ಅವರ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ ಮಧ್ಯಂತರ ತಡೆ ನೀಡಿದೆ.
ಟ್ರಯಲ್ ಮೂಲಕ ಭಾರಿ ಸುದ್ದಿ ಮಾಡಿದ್ದ ಭರವಸೆ ಮೂಡಿಸಿದ್ದ ಕೆಜಿಎಫ್​ ಚಿತ್ರ ಸುಮಾರು 40 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದು, ಕನ್ನಡ ಸೇರಿದಂತೆ ಇತರೆ ಐದು ಭಾಷೆಗಳಲ್ಲಿ ವಿಶ್ವದಾದ್ಯಂತ ಶುಕ್ರವಾರ ಬಿಡುಗಡೆಯಾಗಬೇಕಿತ್ತು.
ರಾಜ್ಯದಲ್ಲಿ 340ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೆಜಿಎಫ್ ಬಿಡುಗಡೆಗೆ ಸಿದ್ಧವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT