ಯಶ್ 
ಸಿನಿಮಾ ಸುದ್ದಿ

ಅಭಿಮಾನಿಗಳೇ ಆತಂಕ ಬೇಡ, ನಾಳೆ ಕೆಜಿಎಫ್ ಚಿತ್ರ ಪಕ್ಕಾ ರಿಲೀಸ್: ನಿರ್ಮಾಪಕ ವಿಜಯ್ ಕಿರಗಂದೂರು

ದೇಶಾದ್ಯಂತ ನಾಳೆ ಭರ್ಜರಿಯಾಗಿ ತೆರೆಗಪ್ಪಳಿಸಲಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರಕ್ಕೆ ಕೋರ್ಟ್ ಮಧ್ಯತರ ತಡೆಯಾಜ್ಞೆ ನೀಡಿದ್ದು ಚಿತ್ರತಂಡಕ್ಕೆ...

ಬೆಂಗಳೂರು: ದೇಶಾದ್ಯಂತ ನಾಳೆ ಭರ್ಜರಿಯಾಗಿ ತೆರೆಗಪ್ಪಳಿಸಲಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರಕ್ಕೆ ಕೋರ್ಟ್ ಮಧ್ಯತರ ತಡೆಯಾಜ್ಞೆ ನೀಡಿದ್ದು ಚಿತ್ರತಂಡಕ್ಕೆ ಕಂಟಕವಾಗಿತ್ತು. ಆದರೆ ಇದೀಗ ನಿರ್ಮಾಪಕ ವಿಜಯ್ ಕಿರಗಂದೂರು ನಾಳೆ ಎಂದಿನಂತೆ ಚಿತ್ರ ಬಿಡುಗಡೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. 
ವಿಜಯ್ ಕಿರಂಗದೂರು ಅವರು ವಾಟ್ಸ್ ಆ್ಯಪ್ ವಿಡಿಯೋ ಮಾಡಿದ್ದು ಅದರಲ್ಲಿ ನಾಳೆ ಎಂದಿನಂತೆ ಚಿತ್ರ ಬಿಡುಗಡೆಯಾಗಲಿದೆ. ವದಂತಿಗಳಿಗೆ ಅಭಿಮಾನಿಗಳು ಕಿಡಿಗೋಡುವ ಅವಶ್ಯಕತೆ ಇಲ್ಲ. ಚಿತ್ರದ ಟಿಕೇಟ್ ಖರೀದಿಸಿರುವ ಅಭಿಮಾನಿಗಳು ನಿರ್ಭಿತವಾಗಿ ನಾಳೆ ಚಿತ್ರವನ್ನು ನೋಡಬಹುದು ಎಂದು ಹೇಳಿದ್ದಾರೆ. 
ಇನ್ನು ಕೆಜಿಎಫ್ ಚಿತ್ರದ ಬಿಡುಗಡೆಗೆ ಬೆಂಗಳೂರಿನ 10ನೇ ಸಿಟಿ ಸಿವಿಲ್ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ ನಂತರ ರಾಕಿಂಗ್ ಸ್ಟಾರ್ ಯಶ್ ಟ್ವೀಟ್ ಮಾಡಿ ಸಿನಿಪ್ರಿಯರು ತಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಸಿನಿಮಾ ನೋಡಲು ಟಿಕೆಟ್ ಬುಕ್ ಮಾಡಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ. 
ಒಟ್ಟಿನಲ್ಲಿ ದೇಶಾದ್ಯಂತ ತೀವ್ರ ಕುತೂಲಹ ಹುಟ್ಟಿಸಿದ್ದ ಕನ್ನಡದ ಚಿತ್ರವೊಂದಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿದ್ದು ಚಿತ್ರತಂಡಕ್ಕೆ ಕೊಂಚ ಹಿನ್ನಡೆಯಾಗಿತ್ತು. ಆದರೆ ಇದೀಗ ಚಿತ್ರತಂಡ ನಾಳೆ ಚಿತ್ರ ಬಿಡುಗಡೆಯಾಗುತ್ತಿದೆ. ಎಂದಿನಂತೆ ಅಭಿಮಾನಿಗಳು ಚಿತ್ರವನ್ನು ವೀಕ್ಷಿಸಬಹುದು ಎಂದು ಹೇಳಿದ್ದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT