ಅನುಪಮ್ ಖೇರ್, ನಾಸಿರುದ್ದೀನ್ ಶಾ 
ಸಿನಿಮಾ ಸುದ್ದಿ

ಇನ್ನೇಷ್ಟು ಹೆಚ್ಚಿನ ಸ್ವಾತಂತ್ರದ ಅಗತ್ಯವಿದೆ: ನಾಸಿರುದ್ದೀನ್ ಶಾಗೆ ಅನುಪಮ್ ಖೇರ್ ಪ್ರಶ್ನೆ

ಉತ್ತರ ಪ್ರದೇಶದ ಬುಲೆಂದ ಶಹರ್ ಹಿಂಸಾಚಾರ ಕುರಿತಂತೆ ಬಾಲಿವುಡ್ ನಟ ನಾಸಿರುದ್ದೀನ್ ಶಾ ನೀಡಿರುವ ಹೇಳಿಕೆಯಲ್ಲಿ ಯಾವುದೇ ಅರ್ಥವಿಲ್ಲಾ, ಅದು ಸತ್ಯವಲ್ಲ ಎಂದು ಬಾಲಿವುಡ್ ನಟ ಅನುಪಮ್ ಖೇರ್ ಹೇಳಿದ್ದಾರೆ.

ಮುಂಬೈ: ಉತ್ತರ ಪ್ರದೇಶದ ಬುಲೆಂದ ಶಹರ್  ಹಿಂಸಾಚಾರ ಕುರಿತಂತೆ ಬಾಲಿವುಡ್ ನಟ ನಾಸಿರುದ್ದೀನ್ ಶಾ ನೀಡಿರುವ ಹೇಳಿಕೆಯಲ್ಲಿ ಯಾವುದೇ ಅರ್ಥವಿಲ್ಲಾ, ಅದು ಸತ್ಯವಲ್ಲ ಎಂದು  ಬಾಲಿವುಡ್ ನಟ ಅನುಪಮ್ ಖೇರ್ ಹೇಳಿದ್ದಾರೆ.

ದೇಶದಲ್ಲಿನ ಹೆಚ್ಚಿನ ರೀತಿಯ ಸ್ವಾತಂತ್ರವಿದ್ದರೂ ಸೇನೆ ಬಗ್ಗೆ ಅವಮಾನಿಸಿದ್ದೀರಿ, ವಾಯುಪಡೆ ಮುಖ್ಯಸ್ಥರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದೀರಿ ಅಲ್ಲದೇ ಸೈನಿಕರಿಗೆ ಕಲ್ಲು ತೂರಿದ್ದೀರಿ . ಹಾಗಾದರೆ ನಿಮ್ಮಗೆ ಇನ್ನೇಷ್ಟು ಹೆಚ್ಚಿನ ಸ್ವಾತಂತ್ರದ ಅಗತ್ಯವಿದೆ ಎಂದು ಅನುಪಮ್ ಖೇರ್ ಪ್ರಶ್ನಿಸಿದ್ದಾರೆ.

ಬಾಲಿವುಡ್ ಖ್ಯಾತ ನಟರಾಗಿರುವ ನಾಸಿರುದ್ದೀನ್ ಶಾ ಬುಲೆಂದ ಶಹರ್ ಹಿಂಸಾಚಾರ ಕುರಿತಂತೆ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಹಿಂಸಾಚಾರದಲ್ಲಿನ ಪೊಲೀಸರ ಸಾವಿಗಿಂತಲೂ ಗೋವು ಹತ್ಯೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಭಾರತದಲ್ಲಿ ನನ್ನ ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಕಾಡುತ್ತಿದೆ ಎಂದು ನಾಸಿರುದ್ದೀನ್ ಶಾ  ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT