ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಶೀಘ್ರದಲ್ಲೆ ಚೀನಾ ಥಿಯೇಟರ್ ಗಳಿಗೂ ಅಪ್ಪಳಿಸಲಿದೆ 'ಕೆಜಿಎಫ್'; ನಿರ್ಮಾಪಕ ವಿಜಯ್ ಕಿರಗಂದೂರ್

ಈ ಹಿಂದೆ ಅಮೀರ್ ಖಾನ್ ಅಭಿನಯದ ದಂಗಲ್ ಚಿತ್ರ ಚೀನಾದಲ್ಲಿ ಬಿಡುಗಡೆಯಾಗಿ ಭಾರಿ ಸೌಂಡ್ ಮಾಡಿತ್ತು. ಇದೀಗ ಅದೇ ಹಾದಿಯಲ್ಲಿ ಕನ್ನಡದ ಕೆಜಿಎಫ್ ಕೂಡ ಸಾಗುವ ಕುರಿತು ಮಾಹಿತಿ ಲಭ್ಯವಾಗಿದೆ.

ಬೆಂಗಳೂರು: ಈ ಹಿಂದೆ ಅಮೀರ್ ಖಾನ್ ಅಭಿನಯದ ದಂಗಲ್ ಚಿತ್ರ ಚೀನಾದಲ್ಲಿ ಬಿಡುಗಡೆಯಾಗಿ ಭಾರಿ ಸೌಂಡ್ ಮಾಡಿತ್ತು. ಇದೀಗ ಅದೇ ಹಾದಿಯಲ್ಲಿ ಕನ್ನಡದ ಕೆಜಿಎಫ್ ಕೂಡ ಸಾಗುವ ಕುರಿತು ಮಾಹಿತಿ ಲಭ್ಯವಾಗಿದೆ.
ಹೌದು.. ಕಳೆದ ವಾರ ತೆರೆಕಂಡು ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಕನ್ನಡದ ಕೆಜಿಎಫ್ ಚಿತ್ರ ಇದೀಗ ಚೀನಾದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಸ್ವತಃ ನಚಿತ್ರ ನಿರ್ಮಾಪಕ ವಿಜಯ್ ಕಿರಗಂದೂರ್ ಅವರು ಮಾಹಿತಿ ನೀಡಿದ್ದು, ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ಚೀನಾದಲ್ಲಿ ಚಿತ್ರ ಬಿಡುಗಡೆ ಸಂಬಂಧ ಮಾತುಕತೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
'ಚೀನಾದಲ್ಲಿ ಚಿತ್ರ ಬಿಡುಗಡೆ ಸಂಬಂಧ ಮಾತುಕತೆ ನಡೆಯುತ್ತಿದೆ. ಆಲೋಚನೆ ಇದೆ. ಚೀನಾದಲ್ಲಿ ಸಿನಿಮಾ ಬಿಡುಗಡೆ ಮಾಡಬೇಕಾದರೆ ಒಂದು ಸಮಸ್ಯೆ ಇದೆ. ಅಲ್ಲಿನ ಸರ್ಕಾರ ಈ ಸಿನಿಮಾ ನೋಡಿ ಅನುಮತಿ ನೀಡಬೇಕು. ಸರ್ಕಾರ ಒಪ್ಪಿದರೆ ಮಾತ್ರ ಕೆಜಿಎಫ್‌ ಚೀನಾದಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಪ್ರಯತ್ನ ನಡೆದಿದೆ. ಎಲ್ಲವೂ ಅಂದುಕೊಂಡಂತೆ ಆದರೆ 'ಕೆಜಿಎಫ್‌' ಚೀನಾದಲ್ಲಿ ಬಿಡುಗಡೆಯಾಗುವುದು ನಿಶ್ಚಿತ ಎಂದು ಹೇಳಿದ್ದಾರೆ.
ಇನ್ನು ಬಿಡುಗಡೆಯಾದ  ದಿನಗಳ ಬಳಿಕವೂ ಕೆಜಿಎಫ್ ಚಿತ್ರ ಗಳಿಕೆಯಲ್ಲಿ ಹಿಂದೆ ಬಿದ್ದಿಲ್ಲ. ಬದಲಿಗೆ ಇನ್ನೂ ಹೆಚ್ಚಿನ ಪ್ರಮಾಣದ ಸ್ಕ್ರೀನ್ ಗಳು ದೊರೆಯುತ್ತಿದ್ದು, ತಮಿಳಿನಲ್ಲಿ ಮತ್ತು ತೆಲುಗಿನಲ್ಲಿ ಸ್ಕ್ರೀನ್ ಗಳ ಸಂಖ್ಯೆಯಲ್ಲಿ ಮೂರು ಪಟ್ಟು ಹೆಚ್ಚಳವಾಗಿದೆ. ಅಂತೆಯೇ ಹಿಂದಿಯಲ್ಲೂ ಕೂಡ ಕೆಜಿಎಫ್ ಸ್ಕ್ರೀನ್ ಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಏರಿಕೆ ಕಂಡಿದ್ದು, ಕೆಜಿಎಫ್ ನೊಂದಿಗೆ ಬಿಡುಗಡೆಯಾದ ಜೀರೋ ಚಿತ್ರದ ಸ್ಕ್ರೀನ್ ಗಳ ಸಂಖ್ಯೆಯಲ್ಲಿ ಕುಸಿತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

SCROLL FOR NEXT