ಗಡ್ಡಪ್ಪ 
ಸಿನಿಮಾ ಸುದ್ದಿ

ಅನಾರೋಗ್ಯ, ಹಾಸಿಗೆ ಹಿಡಿದ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಮಂಡ್ಯ ತಾಲೂಕಿನ ನೊದೇ ಕೊಪ್ಪಲು ಗ್ರಾಮದ ಚನ್ನೇಗೌಡ ತಿಥಿ ಸಿನಿಮಾ ಮೂಲಕ ಗಡ್ಡಪ್ಪ ಹೆಸರಿನಿಂದ ಪ್ರಸಿದ್ಧಿ ಪಡೆದಿದ್ದಾರೆ.

ಮಂಡ್ಯ:  ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ.  ಮಂಡ್ಯ ತಾಲೂಕಿನ ನೊದೇ ಕೊಪ್ಪಲು ಗ್ರಾಮದ ಚನ್ನೇಗೌಡ  ತಿಥಿ ಸಿನಿಮಾ ಮೂಲಕ ಗಡ್ಡಪ್ಪ ಹೆಸರಿನಿಂದ ಪ್ರಸಿದ್ಧಿ ಪಡೆದಿದ್ದಾರೆ.  

2016ರಲ್ಲಿ ಪ್ರದೀಪ್ ರೆಡ್ಡಿ ನಿರ್ಮಿಸಿ, ರಾಮ್ ರೆಡ್ಡಿ ನಿರ್ದೇಶಿಸಿದ ತಿಥಿ ಚಿತ್ರದಲ್ಲಿ  ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡ ಚೆನ್ನೇಗೌಡರ ಸಹಜ ಅಭಿನಯ ಜನರಿಗೆ ಇಷ್ಟವಾಗಿತ್ತು. ಆನಂತರ ಕನ್ನಡ ಚಿತ್ರರಂಗದಲ್ಲಿ ಆಕರ್ಷಣೆಯ ವ್ಯಕ್ತಿಯಾದರಲ್ಲದೇ, ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದರು.

ತಿಥಿ ನಂತರ ಗಡ್ಡಪ್ಪ ಅಭಿನಯದ ಯಾವ  ಚಿತ್ರವೂ ಗೆಲುವು ಕಾಣಲಿಲ್ಲ, ಅವರ ಬಡತನವು ಕೊನೆಯಾಗಲಿಲ್ಲ. ಮೊದಲು ಹಳ್ಳಿಯಲ್ಲಿಯೇ ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಗಟ್ಟಿಮುಟ್ಟಾಗಿದ್ದ ಚನ್ನೆಗೌಡ , ಈಗ  ಪಾರ್ಶ್ವವಾಯುವಿಗೆ ತುತ್ತಾಗಿ ಅನಾರೋಗ್ಯಕ್ಕೊಳಗಾಗಿ ಹಾಸಿಗೆ ಹಿಡಿದಿದ್ದಾರೆ. ಡಿಸೆಂಬರ್ 24 ರಿಂದ ಮಾತನಾಡುತಿಲ್ಲ.  

ಗಡ್ಡಪ್ಪ ಚೆನ್ನಾಗಿದ್ದಾಗ ಬಳಸಿಕೊಂಡ  ಚಿತ್ರರಂಗ ಈಗ ಅವರು ಅನಾರೋಗ್ಯಕ್ಕೀಡಾದಾಗ ಇತ್ತ ತಿರುಗಿಯೂ ನೋಡುತ್ತಿಲ್ಲ. ಹೃದಯ ರೋಗಕ್ಕೆ ಮಂಡ್ಯದಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದೆವು. ಈಗ ನರರೋಗಕ್ಕೆ ಮೈಸೂರು ಆಸ್ಪತ್ರೆಗೆ ತೋರಿಸುತ್ತಿದ್ದೇವೆ. ಆದರೆ, ಕೈಯಲ್ಲಿ ಹಣವಿಲ್ಲ ಚಿತ್ರರಂಗದವರು ಅಪ್ಪನಿಗೆ ಸಹಾಯ ಮಾಡಬೇಕಾಗಿದೆ ಎಂದು ಗಡ್ಡಪ್ಪ ಅವರ ಪುತ್ರಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT