ಮಂಡ್ಯ ರಮೇಶ್ 
ಸಿನಿಮಾ ಸುದ್ದಿ

ಮೈಸೂರು: ನಟ ಮಂಡ್ಯ ರಮೇಶ್ ಕಾರು ಅಪಘಾತ, ಅಪಾಯದಿಂದ ಪಾರು

ನಟ ಮಂಡ್ಯ ರಮೇಶ್ ಪ್ರಯಾಣಿಸುತ್ತಿದ್ದ ಕಾರು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಅಪಘಾತಕ್ಕೀಡಾಗಿದೆ.

ಶ್ರೀರಂಗಪಟ್ಟಣ: ನಟ ಮಂಡ್ಯ ರಮೇಶ್ ಪ್ರಯಾಣಿಸುತ್ತಿದ್ದ ಕಾರು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಅಪಘಾತಕ್ಕೀಡಾಗಿದೆ. ಶ್ರೀರಂಗಪಟ್ಟಣದ ಲೋಕಪಾವನಿ ಸೇತುವೆ ಬಳಿ ರಾ.ಹೆ-275ರಲ್ಲಿ ಅಪಘಾತ ಸಂಭವಿಸಿದ್ದು ನಟ ಅಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿದ್ದ 'ಮಜಾ ಟಾಕೀಸ್' ಶೂಟಿಂಗ್ ಮುಗಿಸಿಕೊಂಡು ಬರುವ ವೇಳೆ ಮುಂಜಾನೆ 7.10ರ ಸುಮಾರಿಗೆ ಕಾರು ಅಪಘಾತಕ್ಕೆ ಈಡಾಗಿದೆ. ಮಂಡ್ಯ ರಮೇಶ್ ತಾವೇ ಕಾರ್ ಚಾಲನೆ ಮಾಡಿಕೊಂಡು ಮೈಸೂರಿಗೆ ವಾಪಾಸಾಗುತ್ತಿದ್ದರು. ಆಗ ಎದುರಿನಿಂದ ಬಂದ ಲಾರಿಗೆ ಕಾರ್ ಡಿಕ್ಕಿ ಆಗುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಅಪ್ಪಳಿಸಿದೆ.
ಘಟನೆಯಲ್ಲಿ ಕಾರಿನ ಮುಂಭಾಗ ಹಾನಿಗೊಂಡಿದ್ದು ಅದೃಷ್ಟವಶಾತ್ ನಟ ಮಂಡ್ಯ ರಮೇಶ್ ಗೆ  ಯಾವ ಅಪಾಯವೂ ಆಗಿಲ್ಲ. ಅಪಘಾತ ಸಂಬಂಧ ಯಾವ ದೂರು ದಾಖಲಿಸಲಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT