ಅಮ್ಮಚಿ ಎಂಬ ನೆನಪು ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ 
ಸಿನಿಮಾ ಸುದ್ದಿ

ನಾಯಕನ ನಂತರ ವಿಲನ್ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ

ಒಂದು ಮೊಟ್ಟೆಯ ಕಥೆ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಖ್ಯಾತಿ ಗಳಿಸಿರುವ ರಾಜ್ ಬಿ ಶೆಟ್ಟಿ ಇನ್ನು ಕೆಲ ....

ಒಂದು ಮೊಟ್ಟೆಯ ಕಥೆ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಖ್ಯಾತಿ ಗಳಿಸಿರುವ ರಾಜ್ ಬಿ ಶೆಟ್ಟಿ ಇನ್ನು ಕೆಲ ಸಮಯಗಳವರೆಗೆ ನಟನೆಯತ್ತ ಗಮನಹರಿಸಲು ಮುಂದಾಗಿದ್ದಾರೆ. ಆಸಕ್ತಿಕರವಾದ ಸವಾಲಿನ ಪಾತ್ರಗಳನ್ನು ಒಪ್ಪಿಕೊಳ್ಳಲು ರಾಜ್ ಶೆಟ್ಟಿಯವರು ನಿರ್ಧರಿಸಿದ್ದಾರೆ.
ಅವರ ಮುಂದಿನ ಸಿನಿಮಾದ ಶೀರ್ಷಿಕೆ ಬಹಳ ಆಕರ್ಷಕವಾಗಿದೆ. ಅದರ ಹೆಸರು ಅಮ್ಮಚಿ ಎಂಬ ನೆನಪು. ತಮ್ಮ ಕಹಿ ನೆನಪುಗಳನ್ನು ನೆಗೆಟಿವ್ ಪಾತ್ರದ ಮೂಲಕ ತೋರಿಸಲು ರಾಜ್ ಬಿ ಶೆಟ್ಟಿ ಮುಂದಾಗಿದ್ದಾರೆ.
ಮಹಿಳಾ ಸಶಕ್ತೀಕರಣದ ಬಗ್ಗೆ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ರಂಗಭೂಮಿ ಹಿನ್ನೆಲೆ ಕಲಾವಿದರು ಬಹಳ ಮಂದಿ ಇದ್ದಾರೆ. ಪ್ರಕಾಶ್ ಪಿ ಶೆಟ್ಟಿ ಮತ್ತು ಅವರ ತಂಡ ಚಿತ್ರಕ್ಕೆ ಬಂಡವಾಳ ಹೂಡಿದೆ. ಪ್ರಕಾಶ್ ಅವರ ಪತ್ನಿ ಚಂಪಾ ಪಿ ಶೆಟ್ಟಿ ನಾಟಕ ನಿರ್ದೇಶಕಿಯಾಗಿ ಹೆಸರು ಮಾಡಿದವರು. ಕುಂದಾಪುರ ಕನ್ನಡ ಭಾಷೆಯಲ್ಲಿರುವ ಸಿನಿಮಾವನ್ನು ಕನ್ನಡದ ಖ್ಯಾತ ಸಾಹಿತಿ ವೈದೇಹಿಯವರು ಬರೆದ ಮೂರು ಕಿರು ಕಥೆಗಳನ್ನು ಆಧರಿಸಿದ ಅಕ್ಕು ನಾಟಕದಿಂದ ತೆಗೆದುಕೊಳ್ಳಲಾಗಿದೆ.
ಅಕ್ಕು ನಾಟಕವನ್ನು ನಿರ್ದೇಶಿಸಿದ್ದ ಚಂಪಾ ಪಿ ಶೆಟ್ಟಿ ಇದೀಗ ಬೆಳ್ಳಿತೆರೆಗೆ ತರುತ್ತಿದ್ದಾರೆ. ನಾಟಕದಲ್ಲಿ ಗಮನ ಸೆಳೆದಿದ್ದ ಪಾತ್ರವಾಗಿದ್ದ ಅಮ್ಮಾಚಿ ಸಿನಿಮಾದಲ್ಲಿ ಮುಖ್ಯ ಪಾತ್ರವಾಗಲಿದೆ.
ಸಿನಿಮಾದ ಕೆಲವು ಫೋಟೋಗಳು ಸಿಟಿ ಎಕ್ಸ್ ಪ್ರೆಸ್ ಗೆ ಲಭ್ಯವಾಗಿದೆ. ಒಂದು ಮೊಟ್ಟೆಯ ಕಥೆಯಂತೆ ಈ ಚಿತ್ರದಲ್ಲಿ ಕೂಡ ರಾಜ್ ಬಿ ಶೆಟ್ಟಿಯವರದ್ದು ಸರಳ, ಸೀದಾ ಸಾದ ಪಾತ್ರ. ಇಲ್ಲಿ ವಿಲನ್ ಪಾತ್ರವನ್ನು ಅವರು ನಿಭಾಯಿಸುತ್ತಿದ್ದಾರೆ. 
ರಾಜ್ ಶೆಟ್ಟಿಯವರೊಂದಿಗೆ ಚಿತ್ರದಲ್ಲಿ ನಾಲ್ವರು ಮಹಿಳಾ ಪಾತ್ರಧಾರಿಗಳಿದ್ದಾರೆ. ನಟರಾದ ರಾಧಾಕೃಷ್ಣ ಉರಾಲಾ ಅಜ್ಜಿಯ ಪಾತ್ರ ಮಾಡಿದ್ದಾರೆ. ದೀಪಿಕಾ ಆರಾಧ್ಯ, ವೈಜಯಂತಿ ಅಡಿಗ ಮತ್ತು ದಿವ್ಯ ಇತರ ಪ್ರಮುಖ ಪಾತ್ರಧಾರಿಗಳು. 
ಪಂಡಿತ್ ಕಾಶಿನಾಥ್ ಪಟ್ಟರ್ ಅವರ ಸಂಗೀತ, ನವೀನ್ ಕುಮಾರ್ ಛಾಯಾಗ್ರಹಣ, ಹರೀಶ್ ಅವರ ಸಂಕಲನ ಚಿತ್ರಕ್ಕಿದೆ. ಅಮ್ಮಾಚಿ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಇದು ರಾಜ್ ಬಿ ಶೆಟ್ಟಿಯವರ ಎರಡನೇ ಅಧಿಕೃತ ಚಿತ್ರವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT