ಅಲ್ಲು ಅರ್ಜುನ್-ಜೂನಿಯರ್ ಎನ್‍ಟಿಆರ್ 
ಸಿನಿಮಾ ಸುದ್ದಿ

ತೆಲುಗು ಬಿಗ್‌ಬಾಸ್ ನಿರೂಪಕರು ಬದಲಾಗ್ತಾರಾ?

ಮೊದಲ ತೆಲುಗು ಬಿಗ್‌ಬಾಸ್ ರಿಯಾಲಿಟಿ ಶೋ ಯಶಸ್ಸಿನೊಂದಿಗೆ ಮುಕ್ತಾಯಗೊಂಡಿದ್ದು ಇದೀಗ ಬಿಗ್‌ಬಾಸ್ ಸೀಸನ್ 2ನಲ್ಲಿ ಕೆಲ ಬದಲಾವಣೆಗಳು ಆಗುವ ಸಾಧ್ಯತೆ ಇದೆ...

ಮೊದಲ ತೆಲುಗು ಬಿಗ್‌ಬಾಸ್ ರಿಯಾಲಿಟಿ ಶೋ ಯಶಸ್ಸಿನೊಂದಿಗೆ ಮುಕ್ತಾಯಗೊಂಡಿದ್ದು ಇದೀಗ ಬಿಗ್‌ಬಾಸ್ ಸೀಸನ್ 2ನಲ್ಲಿ ಕೆಲ ಬದಲಾವಣೆಗಳು ಆಗುವ ಸಾಧ್ಯತೆ ಇದೆ. 
ತೆಲುಗು ಬಿಗ್‌ಬಾಸ್ ರಿಯಾಲಿಟಿ ಶೋ ನಡೆಸಿಕೊಟ್ಟಿದ್ದ ಜೂನಿಯರ್ ನಂದಮೂರಿ ತಾರಕರಾಮ್ ಬಿಗ್‌ಬಾಸ್ ಸೀಸನ್ 2ನಿಂದ ಹೊರಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಅವರ ಜಾಗಕ್ಕೆ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಬರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. 
ಜುಲೈನಲ್ಲಿ ಬಿಗ್‌ಬಾಸ್ ಸೀಸನ್ 2 ಶುರುವಾಗಲಿದ್ದು ಸಮಯದ ಅಭಾವ ಅಥವಾ ಸಂಭಾವನೆ ವಿಚಾರವಾಗಿ ಜೂನಿಯರ್ ಎನ್ಟಿಆರ್ ನಿರೂಪಣೆಯಿಂದ ಹಿಂದೆ ಸರಿದಿದ್ದಾರಾ ಎಂಬ ಪ್ರಶ್ನೆಗಳು ಮೂಡತೊಡಗಿವೆ. 
ಸದ್ಯದ ಮಾಹಿತಿ ಪ್ರಕಾರ ಜೂನಿಯರ್ ಎನ್ಟಿಆರ್ ತಮ್ಮ ಮುಂಬರುವ ಚಿತ್ರಗಳಲ್ಲಿ ನಿರ್ದೇಶಕರಾದ ತ್ರಿವಿಕ್ರಮ್ ಮತ್ತು ಎಸ್ಎಸ್ ರಾಜಮೌಳಿ ಜತೆ ಕೆಲಸ ಮಾಡಲಿದ್ದಾರೆ. ಜತೆಗೆ ತಮ್ಮ ಕುಟುಂಬಕ್ಕೆ ಸಮಯ ಕೊಡಬೇಕು ಎಂಬ ಉದ್ದೇಶದಿಂದಾಗಿ ಬಿಗ್‌ಬಾಸ್ ರಿಯಾಲಿಟಿ ಶೋನಿಂದ ಹೊರಗುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT