ತಮ್ಮ ತರಬೇತುದಾರ ಜೀತ್ ದೇವಯ್ಯ ಜೊತೆ ನಟ ಸುದೀಪ್ 
ಸಿನಿಮಾ ಸುದ್ದಿ

'ಪೈಲ್ವಾನ'ನಲ್ಲಿ ಸುದೀಪ್ ಸಿಕ್ಸ್ ಪ್ಯಾಕ್ ಜೊತೆ ಇನ್ನಷ್ಟು ಒಳ್ಳೆಯ ಅಂಶಗಳಿವೆ: ನಿರ್ದೇಶಕ ಕೃಷ್ಣ

ಪ್ರೇಮ್ ನಿರ್ದೇಶನದ ದ ವಿಲನ್ ಚಿತ್ರದ ಚಿತ್ರೀಕರಣವನ್ನು ಬಹುತೇಕ ಮುಗಿಸಿರುವ ನಟ ಸುದೀಪ್ ....

ಪ್ರೇಮ್ ನಿರ್ದೇಶನದ ದ ವಿಲನ್ ಚಿತ್ರದ ಚಿತ್ರೀಕರಣವನ್ನು ಬಹುತೇಕ ಮುಗಿಸಿರುವ ನಟ ಸುದೀಪ್ ತಮ್ಮ ಮುಂಬರುವ ಚಿತ್ರ ಪೈಲ್ವಾನಗೆ ಅಣಿಯಾಗುತ್ತಿದ್ದಾರೆ. ಬಾಕ್ಸಿಂಗ್ ಮತ್ತು ರೆಸ್ಲಿಂಗ್ ವಿಷಯ ಕುರಿತಾದ ಕಥೆ ಇರುವ ಚಿತ್ರವನ್ನು ಎಸ್.ಕೃಷ್ಣ ನಿರ್ದೇಶಿಸುತ್ತಿದ್ದಾರೆ.
ಬ್ಯಾಟ್ಮಿಂಟನ್, ಕ್ರಿಕೆಟ್, ಆಬ್ಸ್ ಇತ್ಯಾದಿ ಕ್ರೀಡೆಗೆ ಸಂಬಂಧಿಸಿದ ಆಟಗಳಲ್ಲಿ ಮೊದಲಿನಿಂದಲೂ ಆಸಕ್ತಿ ಹೊಂದಿರುವ ನಟ ಸುದೀಪ್ ಇದುವರೆಗೆ ಜಿಮ್ ಗೆ ಹೋಗಿ ದೇಹ ದಂಡಿಸಿದವರಲ್ಲ. ಇದೇ ಮೊದಲ ಬಾರಿಗೆ ಜಿಮ್ ಗೆ ಹೋಗಿ ತರಬೇತುದಾರರಿಂದ ತರಬೇತಿಯನ್ನು ಪಡೆದುಕೊಳ್ಳುತ್ತಿದ್ದಾರೆ. 
ಕಳೆದ ಕೆಲ ವಾರಗಳಿಂದ ಸುದೀಪ್ ಗೆ ಜೀತ್ ದೇವಯ್ಯ ಎಂಬುವವರು ತರಬೇತಿ ನೀಡುತ್ತಿದ್ದಾರೆ. ಇನ್ನು ಒಂದೆರಡು ಮೂರು ವಾರಗಳಲ್ಲಿ ಅವರು ದೇಹವನ್ನು ಸಿನಿಮಾಕ್ಕೆ ತಕ್ಕಂತೆ ಮಾಡಿಕೊಳ್ಳಲಿದ್ದಾರೆ. ಮಾರ್ಚ್ ಕೊನೆ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ಚಿತ್ರದ ಶೂಟಿಂಗ್ ಪ್ರಾರಂಭಿಸುವ ಯೋಜನೆಯಲ್ಲಿದ್ದೇವೆ ಎನ್ನುತ್ತಾರೆ ನಿರ್ದೇಶಕರು.
ಆದರೆ ಪೈಲ್ವಾನ ಕೇವಲ ಸಿಕ್ಸ್ ಪ್ಯಾಕ್ ಗೆ ಮಾತ್ರ ಸಂಬಂಧಪಟ್ಟದ್ದಲ್ಲವಂತೆ. ಬಾಕ್ಸರ್  ಮತ್ತು ರೆಸ್ಲರ್ ಪಾತ್ರಕ್ಕೆ ಹೊಂದಿಕೆಯಾಗಲು ಸುದೀಪ್ ಜಿಮ್ ಗೆ ಹೋಗಿ ತರಬೇತಿ ಪಡೆಯುತ್ತಿದ್ದಾರೆ. ಸುದೀಪ್ ತಮ್ಮ ತರಬೇತುದಾರರ ಜೊತೆ ಇದೇ ವಾರ ಥೈಲ್ಯಾಂಡ್ ಗೆ ಹೋಗಲಿದ್ದಾರಂತೆ. ಅಲ್ಲಿನ ಕುಗ್ರಾಮವೊಂದರಲ್ಲಿ ಬಾಕ್ಸಿಂಗ್ ಮತ್ತು ರೆಸ್ಲಿಂಗ್ ಗೆ ಸಂಬಂಧಪಟ್ಸಾಂಟ  ಸಾಂಪ್ರದಾಯಿಕ ತರಬೇತಿ ಪಡೆದು ಬರಲಿದ್ದಾರಂತೆ.
ಆರ್ ಆರ್ ಆರ್ ಮೋಶನ್ ಪಿಕ್ಚರ್ಸ್ ನಡಿ ತಯಾರಾಗುತ್ತಿರುವ ಪೈಲ್ವಾನ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಮತ್ತು ಕರುಣಾಕರ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT