ಕಮಲ್ ಹಾಸನ್ ಮತ್ತು ನಟ ರಜನಿಕಾಂತ್ 
ಸಿನಿಮಾ ಸುದ್ದಿ

ನಮ್ಮ ಹಾದಿ, ಶೈಲಿ ಬೇರೆಯೇ ಇರಬಹುದು ಆದರೆ, ನಮ್ಮ ಗುರಿ ಒಂದೇ: ಕಮಲ್ ಹಾಸನ್ ಕುರಿತು ರಜನಿಕಾಂತ್

ನಮ್ಮ ಹಾದಿ ಹಾಗೂ ಶೈಲಿ ಬೇರೆಯಾಗಿರಬಹುದು. ಆದರೆ, ನಮ್ಮಿಬ್ಬರ ಗುರಿ ಒಂದೇ ಆಗಿದೆ. ಆದು ಜನರಿಗೆ ಒಳ್ಳೆಯದು ಮಾಡಬೇಕೆಂಬುದು ಎಂದು ಹೊಸ ಪಕ್ಷ ಸ್ಥಾಪನೆ ಮಾಡಿರುವ ಕಮಲ್ ಹಾಸನ್ ಕುರಿತು ನಟ ರಜನಿಕಾಂತ್ ಅವರು ಶುಕ್ರವಾರ ಹೇಳಿದ್ದಾರೆ...

ಚೆನ್ನೈ: ನಮ್ಮ ಹಾದಿ ಹಾಗೂ ಶೈಲಿ ಬೇರೆಯಾಗಿರಬಹುದು. ಆದರೆ, ನಮ್ಮಿಬ್ಬರ ಗುರಿ ಒಂದೇ ಆಗಿದೆ. ಆದು ಜನರಿಗೆ ಒಳ್ಳೆಯದು ಮಾಡಬೇಕೆಂಬುದು ಎಂದು ಹೊಸ ಪಕ್ಷ ಸ್ಥಾಪನೆ ಮಾಡಿರುವ ಕಮಲ್ ಹಾಸನ್ ಕುರಿತು ನಟ ರಜನಿಕಾಂತ್ ಅವರು ಶುಕ್ರವಾರ ಹೇಳಿದ್ದಾರೆ. 
ಕಮಲ್ ಹಾಸನ್ ಅವರ ಹೊಸ ಪಕ್ಷ ಸ್ಥಾಪನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಮಲ್ ಹಾಸನ್ ಅವರು ನಡೆಸಿದ್ದ ಸಾರ್ವಜನಿಕ ಸಭೆಯನ್ನು ನೋಡಿದೆ. ಬಹಳ ಚೆನ್ನಾಗಿತ್ತು. ನಮ್ಮಿಬ್ಬರ ಹಾದಿ ಹಾಗೂ ಶೈಲಿ ಬೇರೆಯಾಗಿರಬಹುದು. ಆದರೆ, ಇಬ್ಬರ ಗುರಿ ಒಂದೇ ಆಗಿದೆ. ಅದು ಜನರಿಗೆ ಒಳಿತನ್ನು ಮಾಡಬೇಕೆಂಬುದು ಎಂದು ಹೇಳಿದ್ದಾರೆ.
ಇದೇ ವೇಳೆ ಕಮಲ್ ಹಾಸನ್ ಅವರನ್ನು ಹೊಗಳಿರುವ ಅವರು, ಕಮಲ್ ಹಾಸನ್ ಅವರು ಸಾಮರ್ಥ್ಯವಿದ್ದು, ಜನರ ವಿಶ್ವಾಸವನ್ನು ಅವರು ಗೆಲ್ಲಲಿದ್ದಾರೆಂದು ತಿಳಿಸಿದ್ದಾರೆ. 
ಬಳಿಕ ಕಾವೇರಿ ವಿವಾದ ಸಂಬಂಧ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಕುರಿತು ತಮಿಳುನಾಡು ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಯನ್ನು ರಜನಿಕಾಂತ್ ಅವರು ಸ್ವಾಗತಿಸಿದ್ದಾರೆ. 
ಫೆ.1 ರಂದು ನಟ ಕಮಲ್ ಹಾಸನ್ ಅವರು ತಮ್ಮ ಹೊಸ ಪಕ್ಷವನ್ನು ಘೋಷಣೆ ಮಾಡಿದ್ದರು, ಮಕ್ಕಳ ನಿಧಿ ಮಯಂ(ಜನರ ನ್ಯಾಯ ಕೇಂದ್ರ) ಎಂಬ ಪಕ್ಷದ ಹೆಸರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ಘೋಷಣೆ ಮಾಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT