ಜಯಶ್ರೀ ಆರಾಧ್ಯ 
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ಗೆ ಮಾರಿಮುತ್ತು ಮೊಮ್ಮಗಳ ಎಂಟ್ರಿ

ಉಪೇಂದ್ರ ಸಿನಿಮಾ ಮೂಲಕ ಮಾರಿಮುತ್ತು ಎಂದು ಪ್ರಸಿದ್ದವಾಗಿದ್ದ ಸರೋಜಮ್ಮ ಅವರ ಮೊಮ್ಮಗಳು ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ..

ಬೆಂಗಳೂರು: ಉಪೇಂದ್ರ ಸಿನಿಮಾ ಮೂಲಕ ಮಾರಿಮುತ್ತು  ಎಂದು ಪ್ರಸಿದ್ದವಾಗಿದ್ದ ಸರೋಜಮ್ಮ ಅವರ ಮೊಮ್ಮಗಳು ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. 
ಉಪೇಂದ್ರ ಸಿನಿಮಾ ನಂತರ ಹಲವು ಚಿತ್ರಗಳಲ್ಲಿ ನಟಿಸಿದ್ದ ಸರೋಜಮ್ಮ ಕೆಲ ವರ್ಷಗಳ ಹಿಂದೆ ವಿಧಿವಶರಾದರು. ತಮ್ಮ ಕುಟುಂಬದಿಂದ ಯಾರಾದರೊಬ್ಬರು ಸಿನಿಮಾ ರಂಗಕ್ಕೆ ಬರಬೇಕು ಎಂಬುದು ಅವರ ಕನಸಾಗಿತ್ತು, ಹೀಗಾಗಿ ಅಜ್ಜಿ ಆಸೆಯನ್ನು ಪೂರೈಸಲು ಮೊಮ್ಮಗಳು ಜಯಶ್ರೀ ಸ್ಯಾಂಡಲ್ ವುಡ್ ನಲ್ಲಿ ಅದೃಷ್ಟ ಪರೀಕ್ಷಿಸಲು ಮುಂದಾಗಿದ್ದಾರೆ. 
ಪುಟ್ಟರಾಜು ಲವರ್‌ ಆಫ್‌ ಶಶಿಕಲಾ ಎಂಬ ಸಿನಿಮಾದಲ್ಲಿ ಜಯಶ್ರೀ ಆರಾಧ್ಯ ನಟಿಸುತ್ತಿದ್ದಾರೆ. ಸಹದೇವ್ ನಿರ್ದೇಶನದ ‘ಪುಟ್ಟರಾಜು’ ಶೀರ್ಷಿಕೆಯಡಿ ‘ಲವರ್ ಆಫ್‌ ಶಶಿಕಲಾ’ ಅಡಿಬರಹ ಹೊಂದಿರುವ ಈ ಸಿನಿಮಾದ ಚಿತ್ರೀಕರಣ ಈಗಾಗಲೇ ಮುಕ್ಕಾಲು ಭಾಗದಷ್ಟು ಮುಗಿದಿದೆ. 
ಚಿಕ್ಕಮಗಳೂರು ಮೂಲದ ಅಮಿತ್‌ಗೆ ಇದು ಮೊದಲ ಚಿತ್ರ. ‘ನನಗೆ ಸಿನಿಮಾ ಬಗ್ಗೆ ಏನೂ ಗೊತ್ತಿರಲಿಲ್ಲ. ನಿರ್ದೇಶಕರೇ ತರಬೇತಿ ನೀಡಿದ್ದಾರೆ. ಚಿತ್ರದಲ್ಲಿ ಪ್ರೇಮದ ಜೊತೆಗೆ ಕಾಮಿಡಿಯೂ ಇದೆ. ಇದೊಂದು ನವೀರಾದ ಪ್ರೇಮ ಕಥಾನಕ’ ಎಂದರು.
ಸಿನಿಮಾದಲ್ಲಿ 10ನೇ ತರಗತಿ ಬಾಲಕಿಯ ಪಾತ್ರದಲ್ಲಿ ನಟಿಸಿದ್ದನೆ, ಇದು ನನ್ನ ವಯಸ್ಸಿಗೆ ಸೂಕ್ತವಾದ ಪಾತ್ರವಾಗಿತದೆ ಎಂದು ಹೇಳಿದ್ದಾರೆ,ಪುಟ್ಟರಾಜು ಲವರ್‌ ಆಫ್‌ ಶಶಿಕಲಾ ಸಿನಿಮಾ ತುಮಕೂರಿನಲ್ಲಿ ನಡೆದ ಸತ್ಯ ಘಟನೆಯನ್ನು ಆಧರಿಸಿ ತಯಾರಾಗುತ್ತಿರುವ ಸಿನಿಮಾವಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

SCROLL FOR NEXT