ಅದಿತಿ ಪ್ರಭುದೇವ 
ಸಿನಿಮಾ ಸುದ್ದಿ

ಸುನಿಯವರ 'ಬಜಾರ್'ಗೆ ಅದಿತಿ ಪ್ರಭುದೇವ ಎಂಟ್ರಿ!

ಇದು ನನಗೆ 2018ರ ಹೊಸ ವರ್ಷದಲ್ಲಿ ದೇವರು ಕೊಟ್ಟ ಉಡುಗೊರೆ ಎನ್ನುತ್ತಾರೆ ನಟಿ ಅದಿತಿ ಪ್ರಭುದೇವ್...

ಇದು ನನಗೆ 2018ರ ಹೊಸ ವರ್ಷದಲ್ಲಿ ದೇವರು ಕೊಟ್ಟ ಉಡುಗೊರೆ ಎನ್ನುತ್ತಾರೆ ನಟಿ ಅದಿತಿ ಪ್ರಭುದೇವ್. ಸುನಿ ನಿರ್ದೇಶನದ ಬಜಾರ್ ಚಿತ್ರದಲ್ಲಿ ತಮಗೆ ಸಿಕ್ಕಿರುವ ಪಾತ್ರಕ್ಕೆ ನಟಿ ಅದಿತಿ ತೀವ್ರ ಖುಷಿಯಲ್ಲಿದ್ದಾರೆ. 
ಈಗಾಗಲೇ ಗಣೇಶ್-ರಶ್ಮಿಕಾ ಅಭಿನಯದ ಚಮಕ್ ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ನಿರ್ದೇಶಕ ಸುನಿಯವರ ಮುಂದಿನ ಚಿತ್ರ ಬಜಾರ್ ಆಗಿದ್ದು ಅದರಲ್ಲಿ ಹೊಸ ನಟ ಧನ್ವೀರ್ ಗೌಡ ಅಭಿನಯಿಸುತ್ತಿದ್ದಾರೆ. ಇಲ್ಲಿ ನಾಯಕ ಪಾರಿವಾಳ ರೇಸಿಂಗ್ ಮತ್ತು ಜೂಜು ಆಡುವ ಚಟ ಹೊಂದಿದ್ದು ಆತನಿಗೆ ನಾಯಕಿಯಾಗಿ ಅದಿತಿ ಅಭಿನಯಿಸುತ್ತಿದ್ದಾರೆ.
ಅದಿತಿ ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನಾಗಕನ್ನಿಕೆ ಧಾರವಾಹಿಯಿಂದ ಜನಪ್ರಿಯರಾಗಿದ್ದಾರೆ. ಅಲ್ಲಿಂದ ಬೆಳ್ಳಿತೆರೆಗೆ ಬಂದ ಅದಿತಿ ಕೃಷ್ಣ ಅಜಯ್ ರಾವ್ ಅಭಿನಯದ ಶಿವ ತೇಜಸ್ ಧೈರ್ಯಂನಲ್ಲಿ ಅಭಿನಯಿಸಿದರು.
ನನ್ನನ್ನು ಹಲವು ಚಿತ್ರ ನಿರ್ಮಾಪಕರು ಸಂಪರ್ಕಿಸಿದರು. ಆದರೆ ತಿಂಗಳ 27 ದಿನಗಳು ಧಾರವಾಹಿ ಶೂಟಿಂಗ್ ನಲ್ಲಿ ಇದ್ದ ಕಾರಣ ಸಿನಿಮಾಗಳಲ್ಲಿ ನಟಿಸಲು ಸಾಧ್ಯವಾಗಲಿಲ್ಲ. ಇದೀಗ ಧಾರವಾಹಿಯಲ್ಲಿ ನನ್ನ ಭಾಗದ ಚಿತ್ರೀಕರಣ ಮುಗಿಯುವ ಹಂತ ಬಂದಿದೆ. ಇಂತಹ ಸಂದರ್ಭದಲ್ಲಿ ನನ್ನ ಗಮನವನ್ನು ಸಿನಿಮಾಗಳಿಗೆ ಬದಲಾಯಿಸುವುದು ಒಳ್ಳೆಯದು ಎಂದು ನಾನು ಭಾವಿಸುತ್ತೇನೆ ಎನ್ನುವ ಅದಿತಿ ಬಜಾರ್ ಚಿತ್ರ ಒಪ್ಪಿಕೊಳ್ಳುವ ಮೊದಲು 22 ಚಿತ್ರಗಳ ಸ್ಕ್ರಿಪ್ಟ್ ಕೇಳಿದ್ದರಂತೆ. ಇಷ್ಟು ದಿನ ಉತ್ತಮ ಚಿತ್ರಕ್ಕಾಗಿ ಕಾಯುತ್ತಿದ್ದೆ. ಸುನಿಯವರು ಕೇಳಿಕೊಂಡಾಗ ಖುಷಿಯಿಂದ ಒಪ್ಪಿಕೊಂಡೆ ಎನ್ನುತ್ತಾರೆ.
ದಾವಣಗೆರೆ ಮೂಲದ ಅದಿತಿ ಕನ್ನಡ ಭಾಷೆ ಮೇಲೆ ಹಿಡಿತ ಹೊಂದಿದ್ದಾರೆ. ಬಜಾರ್ ಚಿತ್ರದಲ್ಲಿ ಪಕ್ಕದ ಮನೆಯ ಹುಡುಗಿಯ ಪಾತ್ರ ಸಿಕ್ಕಿದೆ. ಕನ್ನಡ ಭಾಷೆ ಗೊತ್ತಿರುವುದು ನನಗೆ ವರದಾನವಾಗಿದೆ. ಸಂಕ್ರಾಂತಿ ಹೊತ್ತಿಗೆ ಚಿತ್ರದ ಶೂಟಿಂಗ್ ಆರಂಭವಾಗಲಿದೆ. ರವಿ ಬಸ್ರೂರು ಅವರ ಸಂಗೀತ, ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಲೂಚಿಸ್ತಾನದಲ್ಲಿ ಉಗ್ರರ ವಿರುದ್ಧ ಭಾರಿ ಕಾರ್ಯಾಚರಣೆ: 145 ಭಯೋತ್ಪಾದಕರ ಹತ್ಯೆಗೈದಿದ್ದೇವೆಂದ ಪಾಕಿಸ್ತಾನ, ಭಾರತ-ಆಫ್ಘನ್ ವಿರುದ್ಧ ಗಂಭೀರ ಆರೋಪ

ಅಂಡಮಾನ್-ನಿಕೋಬಾರ್ ದ್ವೀಪ, ಕಾಶ್ಮೀರದಲ್ಲಿ ಅವಳಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಸಾವು ಪ್ರಕರಣ: SIT ತನಿಖೆ ಆರಂಭ

ಬೆಂಗಳೂರು: ಮೂರು ದಿನಗಳಿಂದ ಕಾಣೆಯಾಗಿದ್ದ ಬಾಲಕ BWSSB ಸಂಪ್ ನಲ್ಲಿ ಪತ್ತೆ!

9 ವರ್ಷಗಳ ಪ್ರೀತಿ ಮದುವೆಯಾದ ಎರಡೇ ತಿಂಗಳಿಗೆ ಅಂತ್ಯ: ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತ್ನಿ ಬಂಧನ!

SCROLL FOR NEXT