ರಿಶಬ್ ಶೆಟ್ಟಿ(ಒಳ ಚಿತ್ರದಲ್ಲಿ ನಿರ್ದೇಶಕ ಜಯತೀರ್ಥ) 
ಸಿನಿಮಾ ಸುದ್ದಿ

ಜಯತೀರ್ಥ ನಿರ್ದೇಶನದ 'ಬೆಲ್ ಬಾಟಮ್'ಗೆ ರಿಶಬ್ ಶೆಟ್ಟಿ ನಾಯಕ?

ಹೊಸಬರನ್ನು ಇಟ್ಟುಕೊಂಡು ತಯಾರಿಸುತ್ತಿರುವ ವೆನಿಲ್ಲಾ ಚಿತ್ರದ ಚಿತ್ರೀಕರಣವನ್ನು ಮುಗಿಸಿರುವ ....

ಹೊಸಬರನ್ನು ಇಟ್ಟುಕೊಂಡು ತಯಾರಿಸುತ್ತಿರುವ ವೆನಿಲ್ಲಾ ಚಿತ್ರದ ಚಿತ್ರೀಕರಣವನ್ನು ಮುಗಿಸಿರುವ ನಿರ್ದೇಶಕ ಜಯತೀರ್ಥ ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದಾರೆ.
ಈ ಮಧ್ಯೆ ಸಮಯವನ್ನು ಹಾಳು ಮಾಡದೆ ತಮ್ಮ ಮುಂದಿನ ಪ್ರಾಜೆಕ್ಟ್ ಗೆ ಸಹ ಕೈ ಹಾಕುತ್ತಿದ್ದಾರೆ. ಅದರ ಬಗ್ಗೆ ನಿರ್ಮಾಪಕ ಸಂತೋಷ್ ಕುಮಾರ್ ಜೊತೆ ಸಾಮಾಜಿಕ ಮಾಧ್ಯಮದಲ್ಲಿ ಚಿತ್ರದ ಪೋಸ್ಟರ್ ಹಾಕಿ ಶೀರ್ಷಿಕೆಯನ್ನು ಊಹೆ ಮಾಡಬಹುದೇ ಎಂದು ಕೇಳಿದ್ದಾರೆ. ಈ ಮೂಲಕ ಚಿತ್ರದ ಬಗ್ಗೆ ಕುತೂಹಲ ಮೂಡಿಸಿದ್ದಾರೆ.
ಚಿತ್ರದಲ್ಲಿ ನಿರ್ದೇಶಕ ರಿಶಬ್ ಶೆಟ್ಟಿಯವರನ್ನು ನಾಯಕರಾಗಿ ಪರಿಚಯಿಸಲಾಗುತ್ತಿದ್ದು, ಅಜನೀಶ್ ಲೋಕನಾಥ್ ಅವರ ಸಂಗೀತವಿದೆ.
ಇಲ್ಲಿ ವೀಕ್ಷಕರಿಗೆ ಸಿನಿಮಾ ಶೀರ್ಷಿಕೆಯೇನೆಂದು ಊಹೆ ಮಾಡಲು ಹೇಳಲಾಗಿದ್ದರೂ ಕೂಡ ಚಿತ್ರಕ್ಕೆ ಬೆಲ್ ಬಾಟಮ್ ಎಂದು ನಿರ್ದೇಶಕರು ಹೆಸರಿಟ್ಟಿದ್ದಾರೆ ಎಂದು ನಮಗೆ ಮೂಲಗಳಿಂದ ಮಾಹಿತಿ ಸಿಕ್ಕಿದೆ.
ನಿರ್ದೇಶಕ ಜಯತೀರ್ಥ ಅವರು ಚಿತ್ರೀಕರಣ ಸ್ಥಳಗಳ ಹುಡುಕಾಟದಲ್ಲಿ ತೊಡಗಿದ್ದಾರೆ. ರಿಶಬ್ ಶೆಟ್ಟಿಯವರ ಜೊತೆಗೆ ಕರಾವಳಿ ತೀರ ಪ್ರದೇಶಗಳಿಗೆ ಹೋಗಿರುವ ಜಯತೀರ್ಥ ಬೆಂಗಳೂರಿಗೆ ಮರಳಿದ ಬಳಿಕ ಹೆಚ್ಚಿನ ವಿವರ ನೀಡಬಹುದು.
ಇಲ್ಲಿ ರಿಶಬ್ ಶೆಟ್ಟಿ ಪೂರ್ಣ ಪ್ರಮಾಣದ ನಾಯಕನಾಗಿ ಅಭಿನಯಿಸಲಿದ್ದಾರೆ. ರಿಶಬ್ ಶೆಟ್ಟಿಯವರು ಆರಂಭದಲ್ಲಿ ನಟನಾಗಬೇಕೆಂದು ಸ್ಯಾಂಡಲ್ ವುಡ್ ಗೆ ಪ್ರವೇಶಿಸಿದರೂ ಕೂಡ ನಟನೆಗಿಂತ ಮೊದಲು ನಿರ್ದೇಶನದಲ್ಲಿ ಅನುಭವ ಗಳಿಸಿದರೆ ಉತ್ತಮ ಎಂದು ಅವರಿಗೆ ಅನ್ನಿಸಿ ನಿರ್ದೇಶನ ಕೈಗೆತ್ತಿಕೊಂಡರು. ಇದರಿಂದ ರಿಕ್ಕಿ, ಕಿರಿಕ್ ಪಾರ್ಟಿ ಚಿತ್ರಗಳನ್ನು ನಿರ್ದೇಶಿಸಿ ಗೆಲುವು ಕಂಡರಲ್ಲದೆ ಇದೀಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ ಮತ್ತು ಕಥಾ ಸಂಗಮದಂತಹ ಚಿತ್ರಗಳನ್ನು ನಿರ್ದೇಶಿಸಿದ್ದು ಅವಿನ್ನೂ ಬಿಡುಗಡೆಯಾಗಬೇಕಿದೆ. 
ಉಳಿದವರು ಕಂಡಂತೆ ಚಿತ್ರದಲ್ಲಿ ಎರಡನೇ ನಾಯಕನಾಗಿ ರಿಶಬ್ ಶೆಟ್ಟಿ ಅಭಿನಯಿಸಿದ್ದರು. ಇದೀಗ ಜಯತೀರ್ಥ ಅವರ ಬೆಲ್ ಬಾಟಮ್ ನಲ್ಲಿ ನಾಯಕನಾಗಿ ನಟಿಸಲು ಅವರಿಗೆ ಸಂತೋಷವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT