ಬಾಲಿವುಡ್ ನಟ ಸಲ್ಮಾನ್ ಖಾನ್ 
ಸಿನಿಮಾ ಸುದ್ದಿ

ಸಲ್ಮಾನ್ ಖಾನ್'ಗೆ ಜೀವ ಬೆದರಿಕೆ ಕರೆ: ಶೂಟಿಂಗ್ ಸ್ಥಳದಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ

ಕೃಷ್ಣಮೃಗ ಹತ್ಯೆ ಪ್ರಕರಣ ಸಂಬಂಧ ವಿಚಾರಣೆಗಾಗಿ ಇತ್ತೀಚೆಗಷ್ಟೇ ರಾಜಸ್ತಾನದ ನ್ಯಾಯಾಲಯಕ್ಕೆ ಹಾಜರಾದ ವೇಳೆ ನ್ಯಾಯಾಲಯದ ಆವರಣದಲ್ಲೇ ರೌಡಿಯೊಬ್ಬ ಜೀವ ಬೆದರಿಕೆ ಹಾಕಿದ್ದ ಬೆನ್ನಲ್ಲೇ, ಸಲ್ಮಾನ್...

ಮುಂಬೈ: ಕೃಷ್ಣಮೃಗ ಹತ್ಯೆ ಪ್ರಕರಣ ಸಂಬಂಧ ವಿಚಾರಣೆಗಾಗಿ ಇತ್ತೀಚೆಗಷ್ಟೇ ರಾಜಸ್ತಾನದ ನ್ಯಾಯಾಲಯಕ್ಕೆ ಹಾಜರಾದ ವೇಳೆ ನ್ಯಾಯಾಲಯದ ಆವರಣದಲ್ಲೇ ರೌಡಿಯೊಬ್ಬ ಜೀವ ಬೆದರಿಕೆ ಹಾಕಿದ್ದ ಬೆನ್ನಲ್ಲೇ, ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಹುಡುಕಿಕೊಂಡು ರೇಸ್-3 ಚಿತ್ರದ ಚಿತ್ರೀಕರಣದ ಸ್ಥಳಕ್ಕೆ ಕೆಲ ಅನಾಮಧೇಯ ವ್ಯಕ್ತಿಗಳು ಬಂದು ಹತ್ಯೆಗೆ ಸಂಚು ರೂಪಿಸಿದ್ದರು ಎಂದು ವರದಿಗಳು ತಿಳಿಸಿವೆ. 
ಹತ್ಯೆ ಸಂಚು ರೂಪಿಸಿದ್ದ ಹಿನ್ನಲೆಯಲ್ಲಿ ಚಿತ್ರೀಕರಣದ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು, ಚಿತ್ರೀಕರಣವನ್ನು ಮುಂದಕ್ಕೆ ಹಾಕುವಂತೆ ತಿಳಿಸಿದ್ದಾರೆ. ಪೊಲೀಸರ ನಿರ್ದೇಶನದ ಮೇರೆಗೆ ನಿರ್ಮಾಪಕ ರಮೇಶ್ ತೌರಾನಿಯವರು ಚಿತ್ರೀಕರಣವನ್ನು ಮುಂಡಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ, ಸಲ್ಮಾನ್ ಅವರನ್ನು ತಮ್ಮ ಭದ್ರತೆಯಲ್ಲೇ ಮುಂಬೈನ ಬಾಂದ್ರಾ ನಿವಾಸಕ್ಕೆ ಕರೆದೊಯ್ದಿರುವ ಪೊಲೀಸರು ಸಲ್ಮಾನ್ ಅವರ ನಿವಾಸಕ್ಕೆ ಭದ್ರತೆ ಕಲ್ಪಿಸಿದ್ದಾರೆಂದು ಹೇಳಳಾಗುತ್ತಿದೆ. 
ಆದರೆ, ಈ ವರದಿಗಳನ್ನು ತಳ್ಳಿಹಾಕಿರುವ ಪೊಲೀಸರು, ಇಂತಹ ಯಾವುದೇ ರೀತಿಯ ಘಟನೆಗಳು ನಡೆದಿಲ್ಲ. ಈ ಬಗ್ಗೆ ಯಾವುದೇ ರೀತಿಯ ದೂರುಗಳು ದಾಖಲಾಗಿಲ್ಲ. ನಾವು ಯಾವುದೇ ಚಿತ್ರೀಕರಣವನ್ನು ನಿಲ್ಲಿಸುವಂತೆ ಸೂಚಿಸಿಲ್ಲ ಎಂದು ಉಪ ಪೊಲೀಸ್ ಆಯುಕ್ತ ವಿನಯ್ ರಾಥೋಡ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT