ಬಾಲಿವುಡ್ ನಟ ಸಲ್ಮಾನ್ ಖಾನ್ 
ಸಿನಿಮಾ ಸುದ್ದಿ

ಸಲ್ಮಾನ್ ಖಾನ್'ಗೆ ಜೀವ ಬೆದರಿಕೆ ಕರೆ: ಶೂಟಿಂಗ್ ಸ್ಥಳದಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ

ಕೃಷ್ಣಮೃಗ ಹತ್ಯೆ ಪ್ರಕರಣ ಸಂಬಂಧ ವಿಚಾರಣೆಗಾಗಿ ಇತ್ತೀಚೆಗಷ್ಟೇ ರಾಜಸ್ತಾನದ ನ್ಯಾಯಾಲಯಕ್ಕೆ ಹಾಜರಾದ ವೇಳೆ ನ್ಯಾಯಾಲಯದ ಆವರಣದಲ್ಲೇ ರೌಡಿಯೊಬ್ಬ ಜೀವ ಬೆದರಿಕೆ ಹಾಕಿದ್ದ ಬೆನ್ನಲ್ಲೇ, ಸಲ್ಮಾನ್...

ಮುಂಬೈ: ಕೃಷ್ಣಮೃಗ ಹತ್ಯೆ ಪ್ರಕರಣ ಸಂಬಂಧ ವಿಚಾರಣೆಗಾಗಿ ಇತ್ತೀಚೆಗಷ್ಟೇ ರಾಜಸ್ತಾನದ ನ್ಯಾಯಾಲಯಕ್ಕೆ ಹಾಜರಾದ ವೇಳೆ ನ್ಯಾಯಾಲಯದ ಆವರಣದಲ್ಲೇ ರೌಡಿಯೊಬ್ಬ ಜೀವ ಬೆದರಿಕೆ ಹಾಕಿದ್ದ ಬೆನ್ನಲ್ಲೇ, ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಹುಡುಕಿಕೊಂಡು ರೇಸ್-3 ಚಿತ್ರದ ಚಿತ್ರೀಕರಣದ ಸ್ಥಳಕ್ಕೆ ಕೆಲ ಅನಾಮಧೇಯ ವ್ಯಕ್ತಿಗಳು ಬಂದು ಹತ್ಯೆಗೆ ಸಂಚು ರೂಪಿಸಿದ್ದರು ಎಂದು ವರದಿಗಳು ತಿಳಿಸಿವೆ. 
ಹತ್ಯೆ ಸಂಚು ರೂಪಿಸಿದ್ದ ಹಿನ್ನಲೆಯಲ್ಲಿ ಚಿತ್ರೀಕರಣದ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು, ಚಿತ್ರೀಕರಣವನ್ನು ಮುಂದಕ್ಕೆ ಹಾಕುವಂತೆ ತಿಳಿಸಿದ್ದಾರೆ. ಪೊಲೀಸರ ನಿರ್ದೇಶನದ ಮೇರೆಗೆ ನಿರ್ಮಾಪಕ ರಮೇಶ್ ತೌರಾನಿಯವರು ಚಿತ್ರೀಕರಣವನ್ನು ಮುಂಡಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ, ಸಲ್ಮಾನ್ ಅವರನ್ನು ತಮ್ಮ ಭದ್ರತೆಯಲ್ಲೇ ಮುಂಬೈನ ಬಾಂದ್ರಾ ನಿವಾಸಕ್ಕೆ ಕರೆದೊಯ್ದಿರುವ ಪೊಲೀಸರು ಸಲ್ಮಾನ್ ಅವರ ನಿವಾಸಕ್ಕೆ ಭದ್ರತೆ ಕಲ್ಪಿಸಿದ್ದಾರೆಂದು ಹೇಳಳಾಗುತ್ತಿದೆ. 
ಆದರೆ, ಈ ವರದಿಗಳನ್ನು ತಳ್ಳಿಹಾಕಿರುವ ಪೊಲೀಸರು, ಇಂತಹ ಯಾವುದೇ ರೀತಿಯ ಘಟನೆಗಳು ನಡೆದಿಲ್ಲ. ಈ ಬಗ್ಗೆ ಯಾವುದೇ ರೀತಿಯ ದೂರುಗಳು ದಾಖಲಾಗಿಲ್ಲ. ನಾವು ಯಾವುದೇ ಚಿತ್ರೀಕರಣವನ್ನು ನಿಲ್ಲಿಸುವಂತೆ ಸೂಚಿಸಿಲ್ಲ ಎಂದು ಉಪ ಪೊಲೀಸ್ ಆಯುಕ್ತ ವಿನಯ್ ರಾಥೋಡ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT