ಸಂಗೀತಾ ಭಟ್ 
ಸಿನಿಮಾ ಸುದ್ದಿ

ವಾರಾಂತ್ಯದಲ್ಲಿ ಬ್ಯುಸಿಯಾಗಿರುವ ಸಂಗೀತಾ ಭಟ್

ಸಿನಿಮಾಗಳನ್ನು ಒಪ್ಪಿಕೊಳ್ಳುವ ಸಂದರ್ಭದಲ್ಲಿ ಅದುವರೆಗೆ ಅಷ್ಟೊಂದು ನಿಯಮ ಹಾಕಿಕೊಂಡಿರಲಿಲ್ಲ ನಟಿ...

ಸಿನಿಮಾಗಳನ್ನು ಒಪ್ಪಿಕೊಳ್ಳುವ ಸಂದರ್ಭದಲ್ಲಿ ಅದುವರೆಗೆ ಅಷ್ಟೊಂದು ನಿಯಮ ಹಾಕಿಕೊಂಡಿರಲಿಲ್ಲ ನಟಿ ಸಂಗೀತಾ ಭಟ್. ಇದೀಗ ನಿರ್ದೇಶಕ ಅಶ್ವತ್ ಸ್ಯಾಮುವೆಲ್ ನಿರ್ದೇಶನದ ಅಳಿದು ಉಳಿದವರು ಚಿತ್ರದ ಶೂಟಿಂಗ್ ನಲ್ಲಿ ತೊಡಗಿಕೊಂಡಿರುವ ಸಂಗೀತಾ ಭಟ್ ತಮ್ಮ ಮುಂದಿನ ಚಿತ್ರದಲ್ಲಿ ಶೂಟಿಂಗ್ ಗೆ ವಾರಾಂತ್ಯದಲ್ಲಿ ಮಾತ್ರ ದಿನಾಂಕಗಳನ್ನು ನೀಡಬೇಕಾಗಿದೆ.
ಏಕೆ ಹೀಗೆ ಎಂದು ಕೇಳಿದಾಗ ಸಂಗೀತ ಭಟ್ ಅದಕ್ಕೆ ನಿರ್ದೇಶಕ ವೇಣುಗೋಪಾಲ್ ಕೆ ಕಾರಣ ಎನ್ನುತ್ತಾರೆ. ವೃತ್ತಿಯಲ್ಲಿ ಐಟಿ ಉದ್ಯೋಗಿಯಾಗಿರುವ ವೇಣುಗೋಪಾಲ್ ಸಿನಿಮಾ ಮೇಲಿನ ಪ್ರೀತಿಯಿಂದಾಗಿ ಕೆಲವು ಕಲಾವಿದರನ್ನು ಒಗ್ಗೂಡಿಸಿ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಇಲ್ಲಿ ಕಥೆ ತುಂಬಾ ಭಿನ್ನವಾಗಿದೆ ಎನ್ನುತ್ತಾರೆ ಸಂಗೀತಾ ಭಟ್.
ಈ ಚಿತ್ರದಲ್ಲಿ ಗಾರ್ಮೆಂಟ್ ಕೆಲಸದವರಾಗಿ ಸಂಗೀತಾ ಅಭಿನಯಿಸುತ್ತಿದ್ದು, ಈಕೆ ಕೆಳ ಮಧ್ಯಮ ವರ್ಗದಿಂದ ಬಂದವಳಾಗಿರುತ್ತಾಳೆ. ನನಗೆ ಈ ಪಾತ್ರ ತುಂಬಾ ಇಷ್ಟವಾಗಿ ವಾರಾಂತ್ಯದಲ್ಲಿಯಾದರೂ ಪರವಾಗಿಲ್ಲವೆಂದು ದಿನಾಂಕಗಳನ್ನು ನೀಡಿದೆ ಎನ್ನುತ್ತಾರೆ ಸಂಗೀತಾ.
ಫೆಬ್ರವರಿ ಮೊದಲ ವಾರದವರೆಗೆ ವಾರಾಂತ್ಯಗಳಲ್ಲಿ ಚಿತ್ರದ ಶೂಟಿಂಗ್ ನಡೆಯಲಿದೆ. ಹುಲಿರಾಯ ಖ್ಯಾತಿಯ ಬಾಲು ನಾಗೇಂದ್ರ ಕೂಡ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಕೊಲೆಯ ರಹಸ್ಯದ ಕಥೆಯನ್ನು ಚಿತ್ರ ಹೊಂದಿದ್ದು ಇದರಲ್ಲಿ ಪ್ರೀತಿ, ಪ್ರೇಮ ಕೂಡ ಇರುತ್ತದೆ. ನಾಯಕಿ ಪ್ರಧಾನ ಚಿತ್ರವಿದು. ಬಾಲು ಅವರು ನನಗೆ ನಾಯಕರಾಗಿ ಅಭಿನಯಿಸುತ್ತಿದ್ದಾರೆ ಎಂದು ಸಂಗೀತಾ ಭಟ್ ವಿವರಣೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಕಾರ್ಯನಿರ್ವಾಹಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಾರ್ವಜನಿಕವಾಗಿ ನನ್ನನ್ನು ಬಂಧಿಸಿ ಅವಮಾನಿಸುವ ಅಗತ್ಯವಿಲ್ಲ: ಪವನ್ ಖೇರಾ, ತೀರ್ಪು ಕಾಯ್ದಿರಿಸಿದ ಸುಪ್ರೀಂ

ಪ. ಬಂಗಾಳದ 77 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ದೂರು: ಚುನಾವಣಾ ಆಯೋಗದಿಂದ ಪರಿಶೀಲನೆ!

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ; Video

ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡಗಳ ಕ್ಷಮತೆ ಪರಿಶೀಲನೆಗೆ ನಿರ್ದೇಶನ; ಭಾರೀ ಮಳೆ ನಿರೀಕ್ಷೆ ಇರಲಿಲ್ಲ, ಇದ್ದಕ್ಕಿದ್ದಂತೆ ಜೋರಾಗಿ ಬಂತು: ಪರಮೇಶ್ವರ್

SCROLL FOR NEXT