ದುನಿಯಾ ವಿಜಯ್ 
ಸಿನಿಮಾ ಸುದ್ದಿ

ಗಣರಾಜ್ಯೋತ್ಸವಕ್ಕೆ ಕನಕನ ಆಟ ಶುರು, 400 ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಬಿಡುಗಡೆಗೆ ಸಿದ್ದತೆ

ದುನಿಯಾ ವಿಜಯ್ ನಟನೆಯ ಆರ್.ಚಂದ್ರು ನಿರ್ದೇಶನದ ಬಹು ನಿರೀಕ್ಷಿತ ಚಿತ್ರ 'ಕನಕ' ಇದೇ ಗಣರಾಜ್ಯೋತ್ಸವಕ್ಕೆ ತೆರೆಗೆ ಬರಲು ಸಿದ್ದವಾಗಿದೆ.

ಬೆಂಗಳೂರು: ದುನಿಯಾ ವಿಜಯ್ ನಟನೆಯ ಆರ್.ಚಂದ್ರು ನಿರ್ದೇಶನದ ಬಹು ನಿರೀಕ್ಷಿತ ಚಿತ್ರ 'ಕನಕ' ಇದೇ ಗಣರಾಜ್ಯೋತ್ಸವಕ್ಕೆ ತೆರೆಗೆ ಬರಲು ಸಿದ್ದವಾಗಿದೆ. ಗಣರಾಜ್ಯದಿನ, ಶನಿವಾರ, ಭಾನುವಾರ ಸೇರಿ ಸುದೀರ್ಘ ವಾರಾಂತ್ಯದ ಕಾರಣ ಚಿತ್ರತಂಡವು ಜ.26ಕ್ಕೆ ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಿದೆ. ಕನಕ ರಾಜ್ಯಾದ್ಯಂತ ಸುಮಾರು 400  ಚಿತ್ರಮಂದಿರಗಳಲ್ಲಿ ಏಕಕಾಲಾದಲ್ಲಿ ಬಿಡುಗಡೆ ಕಾಣಲಿದೆ.
"ಕರ್ನಾಟಕದ ಎಲ್ಲಾ ಭಾಗಗಳಿಗೂ ಚಿತ್ರವು ತಲುಪುವಂತೆ ನಾವು ಕೆಲಸ ನಾಡುತ್ತಿದ್ದೇವೆ" ಎಂದು ನಿರ್ದೇಶಕರು ಹೇಳಿದ್ದಾರೆ. 
ಇದೇ ವೇಳೆ ಚಿತ್ರವು ಬಿಡುಗಡೆಗೆ ಸಿದ್ದವಾಗಿರುವ ಹಿನ್ನೆಲೆಯಲ್ಲಿ ಚಿತ್ರದಲ್ಲಿ ರೂಪಿಕಾ ಅವರ ಪಾತ್ರದ ಬಗೆಗೆ ನಿರ್ದೇಶಕರು ವಿವರಣೆ ನೀಡಿದ್ದಾರೆ. "ಚಿತ್ರದಲ್ಲಿ ಆಕೆಯದು ನೆಗೆಟಿವ್ ಶೇಡ್ ಇರುವ ಪಾತ್ರವಾಗಿದ್ದು ಆಕೆ ಒಬ್ಬ ನಾಯಕಿ ಎನ್ನುವುದಕ್ಕಿಂತಲೂ ಒಳ್ಳೆಯ ಕಲಾವಿದೆ ಎನ್ನುವುದು ಮುಖ್ಯ, ನಾನು ಅವರ ಅಭಿನಯವನ್ನು ಗಮನಿಸಿದ್ದೇನೆ. ಈ ಪಾತ್ರಕ್ಕೆ ಅವರು ಸರಿಯಾದ ಆಯ್ಕೆ ಎಂದು ನನಗೆ ನಂಬಿಕೆ ಇತ್ತು. "ನಿರ್ದೇಶಕ ಚಂದ್ರು ಹೇಳಿದರು.
ನೆಗೆಟಿವ್ ಪಾತ್ರದಲ್ಲಿ ರೂಪಿಕಾ ಕಾಣಿಸಿಕೊಳ್ಳುತ್ತಿರುವುದಕ್ಕೆ ಕಾರಣವಿದ್ದು ಆಕೆಯ ಪಾತ್ರದಲ್ಲಿ ರೂಪಾಂತರದ ಕಥೆ ಇದೆ. ಇದು ಚಿತ್ರದ ಪ್ರಮುಖ ಟ್ವಿಸ್ಟ್ ಸಹ ಆಗಿದೆ ಎಂದು ನಿರ್ದೇಶಕರಖೇಳಿದ್ದಾರೆ.
ಚಂದ್ರು ಸ್ವಂತ ನಿರ್ಮಾಣ ಸಂಸ್ಥೆಯಡಿಯಲ್ಲಿ ಬರುತ್ತಿರುವ ಮೂರನೇ ಚಿತ್ರವಾದ ಕನಕದಲ್ಲಿ ಹರಿಪ್ರಿಯ ಹಾಗೂ ಮಾನ್ವಿತಾ ಹರೀಶ್ ಮುಖ್ಯ ಪಾತ್ರಗಳಲ್ಲಿ ಖಾಣಿಸಿಕೊಲ್ಳುತ್ತಿದ್ದಾರೆ.ಕೆಪಿ ನಂಜುಂಡಿ, ಸಾಧು ಕೋಕಿಲಾ, ರವಿಶಂಕರ್ ಹಾಗೂ ಬುಲೆಟ್ ಪ್ರಕಾಶ್ ಚಿತ್ರದಲ್ಲಿ ಅಭಿನಯಿಸಿದ್ದಾರೆ.ನವೀನ್ ಸಜ್ಜು ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ ಈ ಚಿತ್ರಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT