ಕನ್ನಡ ಚಿತ್ರರಂಗ ಖ್ಯಾತ ಹಿರಿಯ ನಟ ಹಾಗೂ ನಿರ್ದೇಶಕ ಕಾಶಿನಾಥ್ (ಸಂಗ್ರಹ ಚಿತ್ರ)
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಹಾಗೂ ನಿರ್ದೇಶಕ ಕಾಶಿನಾಥ್ ಅವರು ಗುರುವಾರ ವಿಧಿವಶರಾಗಿದ್ದಾರೆ.
ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಕಾಶಿನಾಥ್ ಅವರು ಕಳೆದೆರಡು ದಿನಗಳಿಂದ ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಕಾಶಿನಾಥ್ ಅವರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ತಮ್ಮ ಅಮೋಘ ಅನುಭವದ ಮೂಲಕ ಕನ್ನಡ ಚಿತ್ರರಸಿಕರಿಗೆ ಕಾಶಿನಾಥ್ ಅವರು ಹತ್ತಿರವಾಗಿದ್ದರು. ಕನ್ನಡ ಚಿತ್ರರಂಗದ ಪ್ರತಿಭಾನ್ವಿಟ ನಟ ಹಾಗೂ ನಿರ್ದೇಶಕರಾಗಿರುವ ಕಾಶಿನಾಥ್ ಅವರು, ಕುಂದಾಪುರ ಸಮೀಪದ ಕೋಟೇಶ್ವರದ ಮಧ್ಯಮ ವರ್ಗದ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ್ದರು.
ಉಪೇಂದ್ರ, ಮನೋಹರ್, ಸುನಿಲ್ ಕುಮಾರ್ ದೇಸಾಯಿ ಮುಂತಾದ ಹೆಸರಾಂತ ನಿರ್ದೇಶಕರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ್ದ ಕಾಶಿನಾಥ್ ಅವರು ತಮ್ಮ ನಟನೆ, ನಿರ್ದೇಶನ, ಸಂಗೀತ ನಿರ್ದೇಶನ ಹಾಗೂ ಚಿತ್ರ ನಿರ್ಮಾಣದಲ್ಲಿ ಕೈಚಳಕ ತೋರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅನಂತನ ಅವಾಂತರ, ಅನುಭವ, ಹೆಂಡತಿ ಎಂದರೆ ಹೇಗಿರಬೇಕು ಇತ್ಯಾದಿ ಚಿತ್ರಗಳು ಕಾಶಿನಾಥ್ ಅವರ ಪ್ರಮುಖ ಚಿತ್ರಗಳಾಗಿದ್ದು, ಮಂಗಳೂರು ಮಂಜುನಾಥ ಚಿತ್ರದ ಸಂಭಾಷಣೆಗಳು ಬಹಳ ಜನಪ್ರಿಯತೆಯನ್ನು ಗಳಿಸಿತ್ತು.11 ಕನ್ನಡ, 1 ಹಿಂದಿ ಹಾಗೂ 1 ತೆಲುಗು ಚಿತ್ರ ನಿರ್ಮಾಣ ಮಾಡಿದ್ದರು. 80ರ ದಶಕದ ಸ್ಯಾಂಡಲ್ವುಡ್ನ ಜನಪ್ರಿಯ ನಟ ಹಾಗೂ ನಿರ್ದೇಶಕರಾಗಿದ್ದರು. ಇತ್ತೀಚಿನ ಚೌಕ ಸಿನಿಮಾ ಕಾಶಿನಾಥ್ ಅವರ ಕೊನೆಯ ಸಿನಿಮಾ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos