ನಟ ಉಪೇಂದ್ರ 
ಸಿನಿಮಾ ಸುದ್ದಿ

ಕಾಶಿನಾಥ್ ನನ್ನ ಗುರು, ಮಾರ್ಗದರ್ಶಕ: ನಟ ಉಪೇಂದ್ರ

ಇಂದು ನಾನು ಇರುವುದು ಕಾಶಿನಾಥ್ ಅವರಿಂದಲೇ, ಕಾಶಿನಾಥ್ ನನ್ನ ಗುರು, ಮಾರ್ಗದರ್ಶಕ ಎಂದು ನಟ ಉಪೇಂದ್ರ ಅವರು ಗುರುವಾರ ಹೇಳಿದ್ದಾರೆ...

ಬೆಂಗಳೂರು: ಇಂದು ನಾನು ಇರುವುದು ಕಾಶಿನಾಥ್ ಅವರಿಂದಲೇ, ಕಾಶಿನಾಥ್ ನನ್ನ ಗುರು, ಮಾರ್ಗದರ್ಶಕ ಎಂದು ನಟ ಉಪೇಂದ್ರ ಅವರು ಗುರುವಾರ ಹೇಳಿದ್ದಾರೆ. 
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾಶಿನಾಥ್ ಅವರು ನಿನ್ನೆಯಷ್ಟೇ ಇಹಲೋಕ ತ್ಯಜಿಸಿದ್ದರು. ಕಾಶಿನಾಥ್ ಅವರ ಅಗಲಿಕೆ ಕುರಿತಂತೆ ಮಾಧ್ಯಮಗಳ ಜೊತೆ ಮಾತನಾಡಿದ ಉಪೇಂದ್ರ ಅವರು ತೀವ್ರವಾಗಿ ಭಾವುಕರಾದರು. 
ಇಷ್ಟು ಬೇಗ ನಮ್ಮೆಲ್ಲರನ್ನೂ ಬಿಟ್ಟು ಹೋಗುತ್ತಾರೆಂದು ಅಂದುಕೊಂಡಿರಲಿಲ್ಲ. ಇಂದು ನಾನಿರುವುದು ಅವರಿಂದಲೇ. ಕಾಶಿನಾಥ್ ನನ್ನ ಗುರು, ಮಾರ್ಗದರ್ಶಕ. ಇಂದು ಚಿತ್ರರಂಗದಲ್ಲಿ ನಾನು ಏನಾದರೂ ಸಾಧನೆ ಮಾಡಿದ್ದೇನೆ ಎಂದರೆ ಅದು ಅವರಿಂದಲೇ. ನನ್ನ ಎಲ್ಲಾ ಸಾಧನೆಗಳ ಹಿಂದೆ ಕಾಶಿನಾಥ್ ಇದ್ದಾರೆಂದು ಹೇಳಿದ್ದಾರೆ. 
ಬಳಿಕ ಚಿತ್ರರಂಗ ಆರಂಭಿಕ ದಿನಗಳನ್ನು ನೆನೆದ ಉಪೇಂದ್ರ ಅವರು, ಕಾಶಿನಾಥ್ ಅವರ ಮೊದಲ ಬಾರಿ ಭೇಟಿದಾಗ, ನಾನು ಬರೆದಿದ್ದನ್ನೆಲ್ಲವನ್ನೂ ತೆಗೆದುಕೊಂಡು ಹೋಗಿದ್ದೆ. ಅದನ್ನು ನೋಡಿದ ಕಾಶಿನಾಥ್ ಅವರು ಮರುದಿನ ಬರುವಂತೆ ತಿಳಿಸಿದ್ದರು. ಮತ್ತೆ ಅವರನ್ನು ಭೇಟಿಯಾದಾಗ ನನ್ನೊಂದಿಗೆ ಕೈಜೋಡಿಸಿ ಸಹಾಯ ಮಾಡುವಂತೆ ತಿಳಿಸಿದರು. ಆ ಬಳಿಕ ನಾನು ಸಹಾಯಕ ನಿರ್ದೇಶಕನಾಗಿ ಚಿತ್ರರಂಗದಲ್ಲಿ ನನ್ನ ಪ್ರಯಾಣವನ್ನು ಆರಂಭಿಸಿದ್ದೆ. 
ಕಾಲೇಜಿನಲ್ಲಿದ್ದಾಗಲೇ ಕಾಶಿನಾಥ್ ಅವರೊಂದಿಗೆ ಕೆಲಸ ಮಾಡುವ ಅವಕಾಶ ನನಗೆ ದೊರಕಿತ್ತು. ಕಾಶಿನಾಥ್ ಅವರ ಚಿತ್ರದಲ್ಲಿ ನಟನೆ ಮಾಡುವುದಕ್ಕೂ ಮೊದಲು ನನಗೆ ಎಲ್ಲಾ ರೀತಿಯ ಕಲೆಗಳನ್ನು ಹೇಳಿಕೊಟ್ಟಿದ್ದರು. ಅವರ ಯೋಜನೆಯ ರೀತಿ ಮತ್ತು ವೈಜ್ಞಾನಿಕ ವಿಧಾನಗಳು ಪ್ರಮುಖ ಗುಣಲಕ್ಷಣಗಳಾಗಿದ್ದವು. ಇಬ್ಬರೂ ಒಂದೇ ರೀತಿಯ ಆಲೋಚನೆ ಮಾಡುತ್ತಿದ್ದರಿಂದ ನಮ್ಮಿಬ್ಬರ ಸಮನ್ವಯತೆ ಉತ್ತಮವಾಗಿತ್ತು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT