ಟಗರು ಚಿತ್ರದ ದೃಶ್ಯ 
ಸಿನಿಮಾ ಸುದ್ದಿ

ಖಾಕಿಯಲ್ಲಿ ಮತ್ತೆ ಮಿಂಚಲಿರುವ ಶಿವರಾಜ್ ಕುಮಾರ್

ಶಿವರಾಜ್ ಕುಮಾರ್ ಅವರ ಖಾಕಿ ಖದರ್ ಅವರ ಅಭಿಮಾನಿಗಳಿಗೆ ಮುಂದೆ ....

ಶಿವರಾಜ್ ಕುಮಾರ್ ಅವರ ಖಾಕಿ ಖದರ್ ಅವರ ಅಭಿಮಾನಿಗಳಿಗೆ ಮುಂದೆ ಕೂಡ ಸಿಗುವ ನಿರೀಕ್ಷೆಯಿದೆ. ಟಗರಿನಲ್ಲಿ ಪೊಲೀಸ್ ದಿರಿಸಿನಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಲಿರುವ ಶಿವರಾಜ್ ಕುಮಾರ್ ಅದನ್ನು ಮುಂದುವರಿಸಲು ನಿರ್ಧರಿಸಿದ್ದಾರೆ.
ಶಿವರಾಜ್ ಕುಮಾರ್ ಅವರ ಮುಂದಿನ ಚಿತ್ರ ಸಾಹಸ ನಿರ್ದೇಶಕ ರವಿ ವರ್ಮ ಅವರ ಜೊತೆಗೆ. ಈ ವರ್ಷವೇ ತೆರೆಗೆ ಬರಲಿದ್ದು ಇಲ್ಲಿ ಮತ್ತೊಮ್ಮೆ ಪೊಲೀಸ್ ಅಧಿಕಾರಿ ಪಾತ್ರ ವಹಿಸಲಿದ್ದಾರೆ. 
ರುಸ್ತಂಗೆ ಮುಹೂರ್ತವೊಂದೇ ಬಾಕಿ: ಸಾಹಸ ನಿರ್ದೇಶಕರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರವಿ ವರ್ಮ, ನಿರ್ದೇಶನಕ್ಕೆ ಇದೇ ಮೊದಲ ಬಾರಿಗೆ ಕೈ ಹಾಕುತ್ತಿದ್ದು ಶಿವರಾಜ್ ಕುಮಾರ್ ಅವರ ಚಿತ್ರ ನಿರ್ದೇಶಿಸಲಿದ್ದಾರೆ. ಜಯಣ್ಣ ಕಂಬೈನ್ಸ್ ನಲ್ಲಿ ತಯಾರಾಗಲಿರುವ ಸಿನಿಮಾಕ್ಕೆ ರುಸ್ತುಂ ಎಂದು ಶೀರ್ಷಿಕೆಯಿಟ್ಟಿದ್ದಾರೆ.
ಮುಫ್ತಿ ಚಿತ್ರದ ಯಶಸ್ವಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವರಾಜ್ ಕುಮಾರ್, ದಿ ವಿಲನ್ ಮತ್ತು ಕವಚ ಪ್ರಾಜೆಕ್ಟ್ ಗಳನ್ನು ಮುಗಿಸಿದ ನಂತರ ರವಿ ವರ್ಮ ಅವರ ನಿರ್ದೇಶನದ ರುಸ್ತುಂನಲ್ಲಿ ಭಾಗಿಯಾಗಲಿದ್ದಾರೆ.
ಶಿವರಾಜ್ ಕುಮಾರ್ ಅವರ ದಿನಾಂಕಗಳು ಸಿಕ್ಕಿದ ನಂತರ ರವಿ ವರ್ಮ ಅವರು ಈ ಸುದ್ದಿಯನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ.ಹಲವು ವರ್ಷಗಳಿಂದ ನನ್ನ ಬಳಿ ಚಿತ್ರಕಥೆಯಿತ್ತು. ಇದೀಗ ಮುಹೂರ್ತ ದಿನಾಂಕ ನಿಗದಿಪಡಿಸಿ ಚಿತ್ರೀಕರಣ ಆರಂಭಿಸುವುದೊಂದೇ ಬಾಕಿ. ರವಿ ವರ್ಮ ಅವರು ಪ್ರಸ್ತುತ ದಿ ವಿಲನ್ ಮತ್ತು ತೆಲುಗು ಚಿತ್ರ ಗೋಪಿಚಂದ್ ಅವರ ಸಿನಿಮಾಕ್ಕೆ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT