ಹಿರಿಯ ನಟ ಚಂದ್ರಶೇಖರ್ 
ಸಿನಿಮಾ ಸುದ್ದಿ

ಎಡಕಲ್ಲು ಗುಡ್ಡದ ಮೇಲೆ ಖ್ಯಾತಿಯ ನಟ ಚಂದ್ರಶೇಖರ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಮತ್ತೊಬ್ಬ ಹಿರಿಯ ತಾರೆ ಕಣ್ಮರೆಯಾಗಿದ್ದಾರೆ. ಎಡ ಕಲ್ಲು ಗುಡ್ಡದ ಮೇಲೆ ಚಿತ್ರ ಖ್ಯಾತಿಯ ಚಂದ್ರಶೇಖರ್​ ಅವರು ಹೃದಯಾಘಾತದಿಂದ ...

ಬೆಂಗಳೂರು: ಸ್ಯಾಂಡಲ್ ವುಡ್ ನ ಮತ್ತೊಬ್ಬ ಹಿರಿಯ ತಾರೆ ಕಣ್ಮರೆಯಾಗಿದ್ದಾರೆ. ಎಡ ಕಲ್ಲು ಗುಡ್ಡದ ಮೇಲೆ ಚಿತ್ರ ಖ್ಯಾತಿಯ ಚಂದ್ರಶೇಖರ್​ ಅವರು ಹೃದಯಾಘಾತದಿಂದ ಕೆನಡಾದಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೆನಡಾದ ಒಟ್ಟಾವಾದ ನಿವಾಸದಲ್ಲಿ ಬೆಳಗಿನ ಜಾವ ನಿಧನರಾಗಿದ್ದಾರೆ. ಕಾಲಿನಲ್ಲಿ ರಕ್ತ ಹೆಪ್ಪುಗಟ್ಟಿ, ಕ್ರಮೇಣ ಆ ಸಮಸ್ಯೆ ಹೆಚ್ಚಾಗಿತ್ತು. ಚಂದ್ರಶೇಖರ್​ ಅವರು ಪತ್ನಿ ಶೀಲಾ ಮತ್ತು ಮಗಳು ತಾನಿಯಾರನ್ನ ಅಗಲಿದ್ದಾರೆ.
ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದ ಚಂದ್ರಶೇಖರ್ ಅನೇಕ ಕನ್ನಡ ಚಿತ್ರರಂಗದಲ್ಲಿ ನಾಯಕ ಹಾಗೂ ಖಳನಾಯಕನ ಪಾತ್ರಗಳಲ್ಲಿ ಮಿಂಚಿದರು. 
ಬಾಲ ನಟರಾಗಿ ಚಿತ್ರರಂಗ ಪ್ರವೇಶಿಸಿದ ಅವರು ಪಡುವಾರಲ್ಲಿ ಪಾಂಡವರು, ವಂಶವೃಕ್ಷ, ರಾಜ ನನ್ನ ರಾಜ, ಶಿವಲಿಂಗ, ಅಸ್ತಿತ್ವ, ರೋಸ್, ಕಾರಂಜಿ, ಜೀವ, ಪೂರ್ವಾಪರ, ಮಳೆ ಬಂತು ಮಳೆ, ಮಾನಸ ಸರೋವರ ಸೇರಿದಂತೆ 40 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಚಂದ್ರಶೇಖರ್ ಅತೀ ಹೆಚ್ಚು ಖ್ಯಾತಿ ಗಳಿಸಿದ್ದು ಪುಟ್ಟಣ್ಣ ಕಣಗಾಲ್ ನಿರ್ದೇಶನದ ಎಡಕಲ್ಲು ಗುಡ್ಡದ ಮೇಲೆ ಚಿತ್ರದಿಂದ. ಡಾ. ರಾಜ್​ಕುಮಾರ್​ರಂತಹ ಅವರ ಜೊತೆ ರಾಜ ನನ್ನ ರಾಜ ಚಿತ್ರದಲ್ಲಿ ಚಂದ್ರಶೇಖರ್​ ನಟಿಸಿದ್ದರು.
ಕಳೆದ ವಾರ ತೆರೆ ಕಂಡ 3 ಗಂಟೆ 30 ದಿನ 30 ಸೆಕೆಂಡ್ ಅವರು ನಟಿಸಿದ ಕೊನೆಯ ಸಿನಿಮಾ. 10 ದಿನಗಳ ಹಿಂದಷ್ಟೇ ಸಿನಿಮಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಬಳಿಕ ಬೆಂಗಳೂರಿನಿಂದ ಕೆನಡಾಗೆ ತೆರಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT