ರಕ್ಷಿತ್-ರಶ್ಮಿಕಾ ನಿಶ್ಚಿತಾರ್ಥಕ್ಕೆ ವರ್ಷ 
ಸಿನಿಮಾ ಸುದ್ದಿ

ರಕ್ಷಿತ್-ರಶ್ಮಿಕಾ ನಿಶ್ಚಿತಾರ್ಥಕ್ಕೆ ವರ್ಷ: ಸಾಮಾಜಿಕ ತಾಣದ ಮೂಲಕ ಭಾವಿ ಪತ್ನಿಗೆ ರಕ್ಷಿತ್ ಪ್ರೇಮ ಪತ್ರ

ಸ್ಯಾಂಡಲ್‍ವುಡ್ ನಟ ರಕ್ಷಿತ್ ಶೆಟ್ಟಿ ಹಾಗೂ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ ನಡೆದು ಇಂದಿಗೆ (ಜುಲೈ 3) ಒಂದು ವರ್ಷ.

ಬೆಂಗಳೂರು: ಸ್ಯಾಂಡಲ್‍ವುಡ್  ನಟ ರಕ್ಷಿತ್ ಶೆಟ್ಟಿ ಹಾಗೂ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ ನಡೆದು ಇಂದಿಗೆ (ಜುಲೈ 3) ಒಂದು ವರ್ಷ. ಈ ಸಂಭ್ರಮವನ್ನು ಹೆಚ್ಚಿಸಲು ನಟ್ ಅರಕ್ಷಿತ್ ತಮ್ಮ ಫೇಸ್ ಬುಕ್ ತಾಣದಲ್ಲಿ ರೊಮ್ಯಾಂಟಿಕ್ ಪತ್ರವೊಂದನ್ನು ಬರೆದಿದ್ದಾರೆ.
ಸಾಮಾಜಿಕ ತಾಣ ಫೇಸ್ ಬುಕ್ ನಲ್ಲಿ ವೀಡಿಯೋ ಒಂದನ್ನು ಅಪ್ ಮಾಡಿರುವ ನಟ ರಕ್ಷಿತ್ ಶೆಟ್ಟಿ "ನಮ್ಮ ನಿಶ್ಚಿತಾರ್ಥವಾಗಿ ಒಂದು ವರ್ಷವಾಯಿತೆ? ನನಗೇನೋ ನಿನ್ನೆಯಷ್ಟೇ ನಮ್ಮ ನಿಶ್ಚಿತಾರ್ಥವಾದಂತಿದೆ.ಏಕೆಂದರೆ ನಿನ್ನ ಸುಂದರವಾದ ಔಟ್ ಫಿಟ್ ಗೆ ಮ್ಯಾಚ್ ಮಾಡಲು ನಾನಿನ್ನೂ ಸರಿಯಾದ ಟೈ ಹುಡುಕುತ್ತಿದ್ದೇನೆ. ಸಧ್ಯ ನಾನು ನಮ್ಮ ನಿಶ್ಚಿತಾರ್ತದ ಫೋಟೋ ಹಾಗೂ ವೀಡಿಯೋಗಳನ್ನು ನೋಡುತ್ತಿದ್ದೇನೆ" ಎಂದು ಹೇಳಿದ್ದಾರೆ.
ಈ ಒಂದು ವರ್ಷದಲ್ಲಿ ನಾನು ನಿನ್ನೊಂದಿಗೆ ಇದ್ದು ಏನೋ ಸಂಪಾದನೆ ಮಾಡಿದ್ದೇನೆ. ನಿನ್ನಿಂದ ನಾನು ಸಾಕಷ್ಟು ವಿಷಯ ಕಲಿತಿದ್ದೇನೆ. ಅಲ್ಲದೆ ನಿನ್ನಿಂದ ದೂರವಿರುವ ಕಾರಣ ನಾನು ಇನ್ನಷ್ಟು ವಿಷಯ ತಿಳಿದುಕೊಳ್ಳುವುದರಲ್ಲಿ ಹಿಂದೆ ಬಿದ್ದಿದ್ದೇನೆ. ನೀನು ನನ್ನ ಜೀವನದಲ್ಲಿ ಪರಿಚಯವಾದ ಅತ್ಯುತ್ತಮ ವ್ಯಕ್ತಿ, ನಾನು ಪ್ರತಿ ದಿನವೂ ನಿನ್ನನ್ನು ಇನ್ನೂ ಹೆಚ್ಚು ಪ್ರೀತಿಸುತ್ತೇನೆ. ನಮ್ಮ ನಿಶ್ಚಿತಾರ್ಥದ ವಾರ್ಷಿಕೋತ್ಸವಕ್ಕೆ ಶುಭಾಶಯ ಎಂದು ರಕ್ಶಿತ್ ಶೆಟ್ಟಿ ತಮ್ಮ ಪೋಸ್ಟ್ ನಲ್ಲಿ ಬರೆದಿದ್ದಾರೆ.
ಸಧ್ಯ ಇಬ್ಬರೂ ನಟರು ತಮ್ಮ ತಮ್ಮ ಪಾಲಿನ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ ಜುಲೈ 3ರಂದು ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಗುರು ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ರಷ್ಮಿಕಾ ಮನೆಯಲ್ಲಿಯೇ ಈ ಕಾರ್ಯಕ್ರಮ ನಡೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT