ರಾಘವೇಂದ್ರ ರಾಜ್ ಕುಮಾರ್ ಮತ್ತು ನಿಖಿಲ್ ಮಂಜು 
ಸಿನಿಮಾ ಸುದ್ದಿ

14 ವರ್ಷದ ನಂತರ ಪ್ರಧಾನ ಪಾತ್ರದಲ್ಲಿ ರಾಘವೇಂದ್ರ ರಾಜ್ ಕುಮಾರ್!

ನಟ ರಾಘವೇಂದ್ರ ರಾಜ್ ಕುಮಾರ್ 14 ವರ್ಷಗಳ ನಂತರ ಮತ್ತೆ ಸಿನಿಮಾದಲ್ಲಿ ನಟಿಸಿದ್ದಾರೆ. ಅನಾರೋಗ್ಯ ಕಾರಣ ಬೆಳ್ಳಿ ಪರದೆಯಿಂದ ದೂರ ಸರಿದಿದ್ದ ...

ಬೆಂಗಳೂರು: ನಟ ರಾಘವೇಂದ್ರ ರಾಜ್ ಕುಮಾರ್ 14 ವರ್ಷಗಳ ನಂತರ ಮತ್ತೆ ಸಿನಿಮಾದಲ್ಲಿ ನಟಿಸಿದ್ದಾರೆ. ಅನಾರೋಗ್ಯ ಕಾರಣ ಬೆಳ್ಳಿ ಪರದೆಯಿಂದ ದೂರ ಸರಿದಿದ್ದ ರಾಘಣ್ಣ  ಮತ್ತೆ ಬಣ್ಣ ಹಚ್ಚುತ್ತಿದ್ದಾರೆ, 
ರಾಷ್ಟ್ರ ಪ್ರಶಸ್ತಿ ವಿಜೇತ ನಿಖಿಲ್ ಮಂಜು ನಿರ್ದೇಶನದ 'ಅಮ್ಮನ ಮನೆ' ಚಿತ್ರದಲ್ಲಿ ರಾಘವೇಂದ್ರ ರಾಜ್ ಕುಮಾರ್ ನಟಿಸುತ್ತಿದ್ದಾರೆ. ತಂದೆ ತಾಯಿಯ ಪ್ರೀತಿಯ ಬಗ್ಗೆಯೇ ಹೇಳುವ ಸಿನಿಮಾ ಇದಾಗಿದ್ದು, ಈ ಚಿತ್ರದಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸಲಿದ್ದಾರೆ.
ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯದ ಚಿಲಂ ನಲ್ಲಿ ಖಳನಾಯಕನಾಗಿ ನಟಿಸಿದ್ದಾರೆ. 
ಆಗಸ್ಟ್ 15 ರಂದು ನಟ ರಾಘವೇಂದ್ರ ರಾಜ್ ಕುಮಾರ್ ಅವರ ಹುಟ್ಟು ಹಬ್ಬವಿದ್ದು.ಅಂದೇರ ಸಿನಿಮಾ ಮೂಹೂರ್ತ ನಡೆಯಲಿದೆ,.ಜೊತೆಗೆ ಸಿನಿಮಾ ಬಗ್ಗೆ ಅಂದು ಹೆಚ್ಚಿನ ವಿವರ ನೀಡಲಾಗುತ್ತದೆ ಎಂದು ನಿರ್ದೇಶಕ ನಿಖಿಲ್ ಮಂಜು ಹೇಳಿದ್ದಾರೆ,.
ಇದೊಂದು ಕೌಟುಂಬಿಕ ಸಿನಿಮಾವಾಗಿದ್ದು, ಕೆಲಸ ಮನೆ, ಸಂಸಾರದ ಕುರಿತಾದ ಕಥೆ ಹೊಂದಿಗೆ, ತಮ್ಮ ಕುಟುಂಬಸ್ತರ ಕಥೆ ಇದಾಗಿದೆ, ಇದಲ್ಲದೇ  ಮಂಜು ಐಎಎಸ್‌ ಅಧಿಕಾರಿ ಶಾಲಿನಿ ರಜನೀಶ್‌ ದಂಪತಿ ಬರೆದ "ಐಎಎಸ್‌ ದಂಪತಿ ಕನಸುಗಳು' ಪುಸ್ತಕವನ್ನು ಸಿನಿಮಾ ಮಾಡುತ್ತಿದ್ದಾರೆ.  ಶಾಲಿನಿ ರಜನೀಶ್ ಅವರ ಜೀವನ ಆಧರಿಸಿ ಈ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ ನಿಖಿಲ್‌ ಮಂಜು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT