ಬಾದಾಮಿ: ಸ್ಯಾಂಡಲ್ವುಡ್ ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರದ ಚಿತ್ರೀಕರಣಕ್ಕೆ ಸಂಕಷ್ಟ ಎದುರಾಗಿದೆ.
ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಹೊಂದಿರುವ ಐತಿಹಾಸಿಕ ಕೇಂದ್ರ ಮಹಾಕೂಟದಲ್ಲಿ ಚಿತ್ರದ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿತ್ತು. ಮಹಾಕೂಟೇಶ್ವರ ದೇವಾಲಯದ ಪಕ್ಕದಲ್ಲಿಯೇ ಇರುವ ಪುಷ್ಕರಣಿಯಲ್ಲಿ ಬೃಹತ್ ಸೆಟ್ ನಿರ್ಮಾಣ ಮಾಡಿ ಚಿತ್ರೀಕರಣ ನಡೆಸಲಾಗುತ್ತಿತ್ತು. ಪುಷ್ಕರಣಿಯಲ್ಲಿ ಸೆಟ್ ಆಗಿರುವುದರಿಂದ ನೀರಿನ ಸೆಲೆಗೆ ಕುತ್ತುಂಟಾಗುತ್ತದೆ ಎಂದು ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ಸ್ಥಳೀಯರ ತೀವ್ರ ವಿರೋಧದ ನಡುವೆ ಪುರಾತತ್ವ ಇಲಾಖೆ ಮಹಾಕೊಟೇಶ್ವರದಲ್ಲಿ ಚಿತ್ರದ ಚಿತ್ರೀಕರಣ ನಡೆಸದಂತೆ ಚಿತ್ರತಂಡಕ್ಕೆ ಸೂಚನೆ ನೀಡುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ.