ಜಗಪತಿ ಬಾಬು 
ಸಿನಿಮಾ ಸುದ್ದಿ

'ಚಿಲ್ಲಂ'ನಲ್ಲಿ ರಾಘಣ್ಣ ಬದಲಿಗೆ ಜಗಪತಿ ಬಾಬು?

ರವಿಚಂದ್ರನ್ ಪುತ್ರ ಮನೋರಂಜನ್ ನಟನೆಯ ಜೆ ಚಂದ್ರಕಲಾ ನಿರ್ದೇಶನದ ಚಿಲ್ಲಂ ಚಿತ್ರದಲ್ಲಿ ರಾಘವೇಂದ್ರ...

ರವಿಚಂದ್ರನ್ ಪುತ್ರ ಮನೋರಂಜನ್ ನಟನೆಯ ಜೆ ಚಂದ್ರಕಲಾ ನಿರ್ದೇಶನದ ಚಿಲ್ಲಂ ಚಿತ್ರದಲ್ಲಿ ರಾಘವೇಂದ್ರ ರಾಜ್ ಕುಮಾರ್ ನಟಿಸುತ್ತಾರೆ ಎಂದು ಈ ಹಿಂದೆ ಸುದ್ದಿಯಾಗಿತ್ತು. ಆದರೆ ಅವರ ಜಾಗಕ್ಕೀಗ ತೆಲುಗು ಚಿತ್ರರಂಗದ ಖ್ಯಾತ ಕಲಾವಿದ ಜಗಪತಿ ಬಾಬು ಬಂದಿದ್ದಾರೆ.

ಚಿಲ್ಲಂನಲ್ಲಿ ಜಗಪತಿ ಬಾಬು ಅವರದ್ದು ನೆಗೆಟಿವ್ ಪಾತ್ರ. ಈ ಕಾರಣಕ್ಕಾಗಿಯೇ ಅಭಿಮಾನಿಗಳ ಒತ್ತಾಯದ ಮೇರೆಗೆ ರಾಘವೇಂದ್ರ ರಾಜ್ ಕುಮಾರ್ ಹಿಂದೆ ಸರಿದಿದ್ದಾರೆ.

ಹಲವು ವರ್ಷಗಳ ನಂತರ ರಾಘಣ್ಣ ಅವರನ್ನು ಮತ್ತೆ ಅಭಿನಯಕ್ಕೆ ಕರೆತರುತ್ತಿದ್ದೇನೆ ಎಂದು ಖುಷಿಯಾಗಿತ್ತು. ಆದರೆ ಅವರು ನೆಗೆಟಿವ್ ಪಾತ್ರವನ್ನು ಮಾಡಲು ಕೊನೆಗೂ ಇಷ್ಟಪಡಲಿಲ್ಲ. ಹೀಗಾಗಿ ಜಗಪತಿ ಬಾಬು ಅವರನ್ನು ಸಂಪರ್ಕಿಸಿದ್ದು ಮಾತುಕತೆ ಹಂತದಲ್ಲಿದೆ. ಮುಂದೊಂದು ದಿನ ರಾಘಣ್ಣ ಅವರ ಜೊತೆ ಕೆಲಸ ಮಾಡಲು ಅವಕಾಶ ಸಿಗಬಹುದೆಂದು ಭಾವಿಸುತ್ತೇನೆ ಎಂದರು ಚಂದ್ರಕಲಾ.

ಜಗಪತಿ ಬಾಬು ಅವರ ಜೊತೆ ಮೊದಲ ಸುತ್ತಿನ ಮಾತುಕತೆ ಮುಗಿದಿದ್ದು ಸದ್ಯದಲ್ಲಿಯೇ ಹೈದರಾಬಾದಿಗೆ ಹೋಗಿ ಅವರ ಪಾತ್ರದ ಬಗ್ಗೆ ವಿವರಿಸುವೆ ಎನ್ನುತ್ತಾರೆ. ಅವರು ಅಧಿಕೃತವಾಗಿ ಒಪ್ಪಿಗೆ ನೀಡಿದ ನಂತರ ಘೋಷಿಸುವೆ ಎಂದರು.

ಪ್ರಿಯಾಂಕಾ ತಿಮ್ಮೇಶ್ ನಾಯಕಿಯಾಗಿ ನಟಿಸುವ ಚಿಲ್ಲಂನಲ್ಲಿ ದಿವಾಕರ್, ರಾಘವ್ ನಾತ್, ಸಂದೀಪ್ ಮತ್ತು ಭರತ್ ಚಂದ್ರಕಲಾ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ನವೀನ್ ಕುಮಾರ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?