ಎ ಕ್ಲಾಸ್ ಟ್ರೀಟ್ಮೆಂಟ್ ವಿರೋಧಿಸಿ ನಿರ್ದೇಶಕ, ನಿರ್ಮಾಪಕರ ಪ್ರತಿಭಟನೆ! 
ಸಿನಿಮಾ ಸುದ್ದಿ

ಎ ಕ್ಲಾಸ್ ಟ್ರೀಟ್ಮೆಂಟ್ ವಿರೋಧಿಸಿ ನಿರ್ದೇಶಕ, ನಿರ್ಮಾಪಕರ ಪ್ರತಿಭಟನೆ!

ಚಿತ್ರಗಳಿಗೆ ಪ್ರಮಾಣೀಕರಣ ಪ್ರಕ್ರಿಯೆ ವಿಳಂಬವಾಗುತ್ತಿರುವುದನ್ನು ವಿರೋಧಿಸಿ 100 ಕ್ಕೂ ಹೆಚ್ಚು ನಿರ್ದೇಶಕರು, ನಿರ್ಮಾಪಕರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು: ಚಿತ್ರಗಳಿಗೆ ಪ್ರಮಾಣೀಕರಣ ಪ್ರಕ್ರಿಯೆ ವಿಳಂಬವಾಗುತ್ತಿರುವುದನ್ನು ವಿರೋಧಿಸಿ 100 ಕ್ಕೂ ಹೆಚ್ಚು ನಿರ್ದೇಶಕರು, ನಿರ್ಮಾಪಕರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದ್ದಾರೆ. 
ಸೆನ್ಸಾರ್ ಬೋರ್ಡ್ ನಿಂದ ಚಿತ್ರಗಳ ಪ್ರಮಾಣೀಕರ ಪ್ರಕ್ರಿಯೆ ವಿಳಂಬವಾಗುತ್ತಿದೆ, ಅಷ್ಟೇ ಅಲ್ಲದೇ ಚಿತ್ರಗಳಿಗೆ ಎ ಪ್ರಮಾಣಪತ್ರ ನೀಡುತ್ತಿರುವುದರಿಂದ ಸರ್ಕಾರದಿಂದ ಸಬ್ಸಿಡಿ ಸಿಗುತ್ತಿಲ್ಲ, ಸ್ಯಾಟಲೈಟ್ ಹಕ್ಕುಗಳನ್ನೂ ಪಡೆಯುವುದು ದುಸ್ತರವಾಗಿದೆ ಎಂದು ನಿರ್ದೇಶಕ, ನಿರ್ಮಾಪಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಪ್ರತಿಭಟನೆಯ ನೇತೃತ್ವ ವಹಿಸಿರುವ ಕಾರ್ತಿಕ್ ಚಂದ್ರ ಈ ಬಗ್ಗೆ ಮಾತನಾಡಿದ್ದು, ಕೆಎಫ್ ಸಿಸಿ ಅಧ್ಯಕ್ಷರಿಗೆ ನಮ್ಮ ಸಮಸ್ಯೆಗಳ ಕುರಿತಂತೆ ವಿವರಿಸಿ ಪತ್ರವನ್ನು ನೀಡಿದ್ದೇವೆ. ಸೆನ್ಸಾರ್ ಬೋರ್ಡ್ ನಲ್ಲಿ ನಿರ್ದಿಷ್ಟ ತುಣುಕುಗಳಿಗೆ ಕತ್ತರಿ ಹಾಕುವಂತೆ ಆದೇಶ ನೀಡಲಾಗುತ್ತದೆ. ನಿಯಮಗಳ ಪ್ರಕಾರ ಈ ಬಗ್ಗೆ ನಿರ್ದೇಶಕರು, ನಿರ್ಮಾಪಕರೊಂದಿಗೆ ಚರ್ಚೆ ನಡೆಸಬಹುದು ಆದರೆ ಅದು ಆಗುತ್ತಿಲ್ಲ, ಸೆನ್ಸಾರ್ ಬೋರ್ಡ್ ನ ತೀರ್ಮಾನದಂತೆಯೇ ನಡೆದುಕೊಳ್ಳಲು ಅಪೇಕ್ಷಿಸುತ್ತಾರೆ ಎಂದು ಆರೋಪಿಸಿದ್ದಾರೆ. 
ಚರ್ಚೆಗೆ ಕೂತೊಡನೆಯೇ ಎ ಸರ್ಟಿಫಿಕೇಟ್ ನೀಡುತ್ತೇವೆ ಎಂದು ಬೆದರಿಕೆ ಹಾಕುತ್ತಾರೆ, ಇನ್ನೂ ಹೆಚ್ಚು ಮಾತನಾಡಿದರೆ ಉನ್ನತ ಮಟ್ಟದ ಅಧಿಕಾರಿಗಳಿಗೆ ದೂರು ನೀಡುವುದಾಗಿ ಎಚ್ಚರಿಸುತ್ತಾರೆ. ನಮಗೆ ಬೇರೆ ಆಯ್ಕೆಗಳಿಲ್ಲದೇ ಪ್ರತಿಭಟನೆ ನಡೆಸುತ್ತಿದ್ದೇವೆ. ಹೇಳಿದ್ದಾರೆ. ಪ್ರಾರಂಭದಲ್ಲಿ ನನಗೆ ಮಾತ್ರ ಈ ಸಮಸ್ಯೆ ಕಾಡುತ್ತಿದೆ ಎಂದುಕೊಂಡಿದ್ದೆ, ಆದರೆ ನನ್ನಂತೆಯೇ ಹಲವು ನಿರ್ಮಾಪಕರೂ ಈ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ ಎನ್ನುತ್ತಾರೆ ಕಾರ್ತಿಕ್ ಚಂದ್ರ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT