ಪಡ್ಡೆಹುಲಿ ಚಿತ್ರದ ಮುಹೂರ್ತದಲ್ಲಿ ಶ್ರೇಯಸ್ ಮಂಜು, ನಿಶ್ವಿಕಾ ನಾಯ್ಡು, ಕಿಚ್ಚ ಸುದೀಪ್, ಪುನೀತ್ ರಾಜ್ ಕುಮಾರ್ ಮತ್ತು ನಿರ್ದೇಶಕ ಗುರು ದೇಶಪಾಂಡೆ 
ಸಿನಿಮಾ ಸುದ್ದಿ

ಪಡ್ಡೆಹುಲಿಯಲ್ಲಿ ವರ್ಕೌಟ್ ಆದ ಶ್ರೇಯಸ್ ಮಂಜು, ನಿಶ್ವಿಕಾ ನಾಯ್ಡು ಕೆಮಿಸ್ಟ್ರಿ

ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಮಂಜು ಚೊಚ್ಚಲ ಚಿತ್ರ ಪಡ್ಡೆ ಹುಲಿಯಲ್ಲಿ ಶ್ರೇಯಸ್ ಹಾಗೂ ನಿಶ್ವಿಕಾ ನಾಯ್ಡು ಕೆಮೆಸ್ಟ್ರಿ ಅತ್ಯುತ್ತಮವಾಗಿ ಬಂದಿದ್ದು, ಚಿತ್ರತಂಡ ಚಿತ್ರೀಕರಣವನ್ನು ಶೇ.60ರಷ್ಟು ಪೂರ್ಣಗೊಳಿಸಿದೆ...

ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಮಂಜು ಚೊಚ್ಚಲ ಚಿತ್ರ ಪಡ್ಡೆ ಹುಲಿಯಲ್ಲಿ ಶ್ರೇಯಸ್ ಹಾಗೂ ನಿಶ್ವಿಕಾ ನಾಯ್ಡು ಕೆಮೆಸ್ಟ್ರಿ ಉತ್ತಮವಾಗಿ ಬಂದಿದ್ದು, ಚಿತ್ರತಂಡ ಚಿತ್ರೀಕರಣವನ್ನು ಶೇ.60ರಷ್ಟು ಪೂರ್ಣಗೊಳಿಸಿದೆ. 
ಸಿನಿಮಾ ಉತ್ತಮ ರೀತಿಯಲ್ಲಿ ರೂಪವನ್ನು ಪಡೆದುಕೊಳ್ಳುತ್ತಿದ್ದು, ಬಹಳ ಸಂತಸವಿದೆ. ಶ್ರೇಯಸ್ ಮಂಜು ಹಾಗೂ ನಿಶ್ವಿಕಾ ಅವರ ನಟನೆ ತೆರೆ ಮೇಲೆ ಅತ್ಯುತ್ತಮವಾಗಿ ಬಂದಿದೆ ಎಂದು ನಿರ್ದೇಶಕ ಗುರು ದೇಶಪಾಂಡೆ ಹೇಳಿದ್ದಾರೆ. 
ಪಡ್ಡೆ ಹುಲಿ ಶ್ರೇಯಸ್'ಗೆ ಅತ್ಯುತ್ತಮ ಅವಕಾಶವಾಗಿದ್ದು, ಚಿತ್ರದಲ್ಲಿ ಶ್ರೇಯಸ್ ಅವರನ್ನು ಲವರ್ ಬಾಯ್, ಎಮೋಷನ್, ಆ್ಯಕ್ಷನ್ ಸೇರಿದ ಎಲ್ಲಾ ರೀತಿಯಲ್ಲೂ ನೋಡಬಹುದಾಗಿದೆ. ಆಕ್ಷನ್ ಸೀನ್ ಗಳಲ್ಲಿ ಶ್ರೇಯಸ್ ಅತ್ಯುತ್ತಮವಾಗಿ ಕಂಡು ಬರುತ್ತಾರೆ. ಆ್ಯಕ್ಷನ್ ದೃಶ್ಯಾವಳಿಗಳಲ್ಲಿ ಶ್ರೇಯಸ್ ಅವರ ನಟನೆ, ಕೌಶಲ್ಯ ಉತ್ತಮವಾಗಿದ್ದು, ಉತ್ತಮ ಚಿತ್ರಗಳಲ್ಲಿ ನಟಿಸಿದ್ದೇ ಆದರೆ, ಮಾಸ್ ಹೀರಾ ಆಗುವುದರಲ್ಲಿ ಅನುಮಾನವೇ ಇಲ್ಲ ಎಂದು ತಿಳಿಸಿದ್ದಾರೆ. 
ಚಿತ್ರದಲ್ಲಿ ನಿರ್ದೇಶಕ ಗುರು ದೇಶಪಾಂಡೆಯವರು 25 ವರ್ಷಗಳ ಬಳಿಕ ರವಿಚಂದ್ರನ್ ಹಾಗೂ ಸುಧಾರಾಣಿಯವರನ್ನು ಒಟ್ಟಿಗೆ ತೆರೆ ಮೇಲೆ ತರುತ್ತಿದ್ದಾರೆ. 
ಚಿತ್ರವು ಸಂಗೀತ ಆಧಾರಿತ ಚಿತ್ರವಾಗಿದ್ದು, ಉತ್ತಮ ಹಾಡುಗಳನ್ನು ರಚಿಸಲು ಕೆಲಸ ಮಾಡುತ್ತಿದ್ದೇವೆ. ಜು.31ರಂದು ಬೆಂಗಳೂರಿನಲ್ಲಿ ಮುಂದಿನ ಚಿತ್ರೀಕರಣಗಳು ಆರಂಭವಾಗಲಿವೆ ಎಂದಿದ್ದಾರೆ ಗುರು ದೇಶಪಾಂಡೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT