ಬೀರ್‌ಬಲ್ ಟ್ರಯಾಲಜಿ 
ಸಿನಿಮಾ ಸುದ್ದಿ

ಹಲವು ಮೊದಲುಗಳನ್ನು ಸೃಷ್ಟಿಸಲಿರುವ 'ಬೀರ್‌ಬಲ್ ಟ್ರಯಾಲಜಿ'

ಶ್ರೀನಿವಾಸ ಕಲ್ಯಾಣ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡಿದ್ದ ನಿರ್ದೇಶಕ, ನಟ ಎಂಜಿ ಶ್ರೀನಿವಾಸ್ ಇದೀಗ ಬೀರ್‌ಬಲ್ ಟ್ರಯಾಲಜಿ ಚಿತ್ರದ ಮೂಲಕ ಹಲವು...

ಶ್ರೀನಿವಾಸ ಕಲ್ಯಾಣ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡಿದ್ದ ನಿರ್ದೇಶಕ, ನಟ ಎಂಜಿ ಶ್ರೀನಿವಾಸ್ ಇದೀಗ ಬೀರ್‌ಬಲ್ ಟ್ರಯಾಲಜಿ ಚಿತ್ರದ ಮೂಲಕ ಹಲವು ಮೊದಲುಗಳನ್ನು ಸೃಷ್ಟಿಸಲಿದ್ದಾರೆ. 
ಶ್ರೀನಿವಾಸ ಕಲ್ಯಾಣ ಚಿತ್ರ ರೊಮ್ಯಾಂಟಿಕ್-ಕಾಮಿಡಿ ಚಿತ್ರವಾಗಿತ್ತು. ಇದೀಗ ಬೀರ್‌ಬಲ್ ಒಂದೇ ಟೈಟಲ್ ಇಟ್ಟುಕೊಂಡು ಆ ಚಿತ್ರದ ಮೂರು ಸೀಕ್ವೆಲ್ ಗಳನ್ನು ತೆರೆಯ ಮೇಲೆ ತರಲು ಸಜ್ಜಾಗಿದ್ದಾರೆ. ಬೀರ್‌ಬಲ್ ಟ್ರಯಾಲಜಿಯ ಮೊದಲ ಹಂತದ ಕೇಸ್-1 ಫೈಂಡಿಂಗ್ ವಜ್ರಮುನಿ ಚಿತ್ರದ ಮೊದಲ ಹಂತದ ಚಿತ್ರೀಕರಣವನ್ನು ಮೈಸೂರಿನಲ್ಲಿ ಮುಗಿಸಿದ್ದಾರೆ. 
ಬೀರ್‌ಬಲ್ ಟ್ರಯಾಲಜಿಯಲ್ಲಿ ಮೊದಲ ಭಾಗ 'ಫೈಂಡಿಂಗ್ ವಜ್ರಮುನಿ', ಎರಡನೇ ಭಾಗದಲ್ಲಿ 'ಅವ್ರನ್ ಬಿಟ್ಟು ಇವ್ರನ್ ಬಿಟ್ಟು ಅವರ್ಯಾರು' ಮೂರನೇ ಭಾಗಕ್ಕೆ 'ತುರೆಮಣೆ' ಎಂದು ಸಬ್ ಟೈಟಲ್ ಇಡಲಾಗಿದೆ. ಈ ಚಿತ್ರದಲ್ಲಿ ಶ್ರೀನಿವಾಸ್ ಲಾಯರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. 
ಈ ಚಿತ್ರಕ್ಕಾಗಿ ಶ್ರೀನಿವಾಸ್ ಆತ್ಯಾಧುನಿಕ ತಂತ್ರಜ್ಞಾನದ ಕ್ಯಾಮೆರಾವನ್ನು ಬಳಸುತ್ತಿದ್ದಾರೆ. ಇನ್ನು ಚಿತ್ರಕ್ಕೆ ಬಾಲಿವುಡ್ ಸಂಗೀತ ನಿರ್ದೇಶಕ ಕಾಲಾಚರಣ್ ಸಂಗೀತ ಸಂಯೋಜಿಸುತ್ತಿದ್ದಾರೆ. ಜಾನ್ ಸೀನ ಚಿತ್ರಕ್ಕೆ ಬಂಡವಾಳ ಹೂಡಿರುವ ಟಿ ಆರ್ ಚಂದ್ರಶೇಖರ್ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಅಡಿಯಲ್ಲಿ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT