ಪುನೀತ್ ಫಿಟ್‍ನೆಸ್ ಚಾಲೆಂಜ್ ವೀಡಿಯೋ ವೈರಲ್ 
ಸಿನಿಮಾ ಸುದ್ದಿ

ಚಾಲೆಂಜ್ ಮಾಡಿದವರಿಗೆ ಸರಿಯಾಗೇ ಉತ್ತರ ಕೊಟ್ಟ ಪವರ್ ಸ್ಟಾರ್, ಪುನೀತ್ ಫಿಟ್‍ನೆಸ್ ಚಾಲೆಂಜ್ ವೀಡಿಯೋ ವೈರಲ್

ಕೇಂದ್ರ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಮೇ ೨೨ರ್ಂದು ನಿಡಿದ್ದ #HumFitToIndiaFit ಚಾಲೆಂಜ್ ದೇಶಾದ್ಯಂತದ ಸೆಲೆಬ್ರೆಟಿಗಳನ್ನು ಆಕರ್ಷಿಸುತ್ತಿದ್ದು.....

ಬೆಂಗಳೂರು: ಕೇಂದ್ರ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಮೇ 22ರಂದು ನಿಡಿದ್ದ #HumFitToIndiaFit ಚಾಲೆಂಜ್ ದೇಶಾದ್ಯಂತದ ಸೆಲೆಬ್ರೆಟಿಗಳನ್ನು ಆಕರ್ಷಿಸುತ್ತಿದ್ದು ಇದೀಗ ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಹ ಈ ಚಾಲೆಂಜ್ ನ್ನು ಒಪ್ಪಿಕೊಂಡಿದ್ದಾರೆ.
ಯಾರೇ ಆಗಲಿ ಫಿಟ್ ಹಾಗೂ ಆರೋಗ್ಯವಾಗಿರುವುದು ಮುಖ್ಯ ಎನ್ನುವ ಉದ್ದೇಶದೊಂದಿಗೆ ಪ್ರಾರಂಭವಾದ ಈ ಅಭಿಯಾನದಲ್ಲಿ ಇದಾಗಲೇ ಕಿಚ್ಚ ಸುದೀಪ್, ಯಶ್ ಸೇರಿ ಹಲವರು ಭಾಗವಹಿಸಿದ್ದಾರೆ ಇತ್ತೀಚೆಗೆ ಬಿಜೆಪಿಯ ಶಾಸಕರಾದ ಡಾ. ಅಶ್ವತ್ಥ್ ನಾರಾಯಣ ಹಾಗೂ ಹೇಮಂತ್ ಮುದ್ದಪ್ಪ ಪುನೀತ್ ರಾಜ್ ಕುಮಾರ್ ಅವರಿಗೆ ಚಾಲೆಂಜ್ ಮಾಡಿದ್ದರು.
ಈ ಚಾಲೆಂಜ್ ಸ್ವೀಕರಿಸಿದ ಪವರ್ ಸ್ಟಾರ್ ಪುನೀತ್  ತಮ್ಮ ಫೇಸ್‍ಬುಕ್‌ನಲ್ಲಿ ಬರೆದುಕೊಂಡಿದ್ದಾರೆ "ಡಾ. ಅಶ್ವತ್ಥ್ ನಾರಾಯಣ ಹಾಗೂ ಹೇಮಂತ್ ಮುದ್ದಪ್ಪ ಅವರು ನೀಡಿರುವ ಚಾಲೆಂಜ್ ನ್ನು ಸ್ವೀಕರಿಸಿದ್ದೇನೆ. ಆರೋಗ್ಯವಾಗಿ ಮತ್ತು ಫಿಟ್ ಆಗಿರುವುದು ಅತ್ಯಂತ ಮುಖ್ಯ. ನಾನು ಈ ಚಾಲೆಂಜ್ ನ್ನು ರಕ್ಷಿತ್ ಶೆಟ್ಟಿ, ಧ್ರುವ ಸರ್ಜಾ, ದಾನಿಶ್ ಸೇಠ್ ಮತ್ತು ಶ್ರೀಮುರಳಿ ಅವರಿಗೆ ನೀಡುತ್ತಿದ್ದೇನೆ" 
ಪುನೀತ್ ರಾಜ್ ಕುಮಾರ್ ಸಧ್ಯ ’ನಟಸಾರ್ವಭೌಮ’ ಚಿತ್ರದ ಚಿತ್ರೀಕರಣದಲ್ಲಿದ್ದು ಅದೇ ಸೆಟ್ ನಲ್ಲಿ ತಾವು ಚಾಲೆಂಜ್ ಪೂರೈಸಿರುವ ವೀಡಿಯೋವನ್ನೂ ಅವರು ಹಂಚಿಕೊಂಡಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. 19 ಗಂಟೆಗಳಲ್ಲಿ 8 ಸಾವಿರಕ್ಕೆ ಹೆಚ್ಚಿನ ಜನ ಇದನ್ನು ವೀಕ್ಷಿಸಿದ್ದು 1700ಕ್ಕೂ ಹೆಚ್ಚಿನ ಜನ ಷೇರ್ ಮಾಡಿಕೊಂಡಿದ್ದಾರೆ.
ಅಪ್ಪು ಅಭಿಮಾನಿಗಳು ನಟನ ಫಿಟ್ ನೆಸ್ ಕಂಡು ಖುಷಿಯಾಗಿದ್ದಾರೆ. ಇನ್ನು ರಕ್ಷಿತ್ ಶೆಟ್ಟಿ, ಧ್ರುವ ಸರ್ಜಾ, ದಾನಿಶ್ ಸೇಠ್ ಮತ್ತು ಶ್ರೀಮುರಳಿ ಅವರ ವೀಡಿಯೋವನ್ನು ಎಲ್ಲರೂ ಎದುರು ನೋಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT