ಶೃತಿ ಹರಿಹರನ್ 
ಸಿನಿಮಾ ಸುದ್ದಿ

ಕೌಟುಂಬಿಕ ಕಲಹ ವಿರುದ್ಧ ಕಿರುಚಿತ್ರದಲ್ಲಿ ಶೃತಿ ಹರಿಹರನ್ ಧ್ವನಿ

ಮಹಿಳಾ ಕೇಂದ್ರಿತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ನಟಿ ಶೃತಿ ಹರಿಹರನ್ ಅವರ ಮುಂದಿನ ಕಿರುಚಿತ್ರ ರೀಟಾದಲ್ಲಿ ಕೌಟುಂಬಿಕ ಕಲಹ ಪ್ರಕರಣಗಳ ವಿರುದ್ಧ ಧ್ವನಿ ಎತ್ತಿದ್ದಾರೆ. ಕಲಾತ್ಮಕ ಪ್ರೋಡಕ್ಷನ್ ಅಡಿಯಲ್ಲಿ ಶೃತಿ ಹರಿಹರನ್ ನಿರ್ಮಿಸಿರುವ ಎರಡನೇ ಕಿರುಚಿತ್ರ ಇದಾಗಿದೆ.

ಮಹಿಳಾ ಕೇಂದ್ರಿತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ನಟಿ ಶೃತಿ ಹರಿಹರನ್  ಅವರ ಮುಂದಿನ ಕಿರುಚಿತ್ರ ರೀಟಾದಲ್ಲಿ  ಕೌಟುಂಬಿಕ ಕಲಹ ಪ್ರಕರಣಗಳ ವಿರುದ್ಧ ಧ್ವನಿ ಎತ್ತಿದ್ದಾರೆ. ಕಲಾತ್ಮಕ ಪ್ರೋಡಕ್ಷನ್ ಅಡಿಯಲ್ಲಿ ಶೃತಿ ಹರಿಹರನ್  ನಿರ್ಮಿಸಿರುವ   ಎರಡನೇ ಕಿರುಚಿತ್ರ ಇದಾಗಿದೆ.

ಲಾಸ್ಟ್ ಕನ್ನಡಿಗ ನಂತರ  ದಾಂಪತ್ಯದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಅಥವಾ ದೌರ್ಜನ್ಯ ಪ್ರಕರಣ ವಿಷಯವನ್ನಿಟ್ಟುಕೊಂಡು ರೀಟಾ ಕಿರುಚಿತ್ರ ನಿರ್ಮಿಸಿರುವ  ಶೃತಿ ಹರಿಹರನ್ ,ಕಲೆಯಿಂದ ಜೋರಾಗಿ ಮಾತನಾಡಬಹುದು ಹಾಗೂ ಮನರಂಜನೆ ನೀಡಬಹುದು ಎಂಬುದು ನನ್ನ ನಂಬಿಕೆಯಾಗಿದೆ. ಬದಲಾವಣೆ ತರುವಲ್ಲಿ ಕಲೆ  ಒಂದು ಪ್ರಮುಖವಾದ ಪಾತ್ರ ವಹಿಸುತ್ತದೆ ಎನ್ನುತ್ತಾರೆ.
ರಚನ್ ರಾಮಚಂದ್ರನ್  ಈ  ಚಿತ್ರವನ್ನು ನಿರ್ದೇಶಿಸಿದ್ದು, ನಟರಾದ ಅಭಿನವ್ ರಾಜ್, ಶ್ರೇಯ ಅಂಚನ್ ಮತ್ತು  ನಟಿ ರೂಪಾ ನಟರಾಜ್ ಅಭಿನಯಿಸಿದ್ದಾರೆ. ಅನೂಪ್ ಸೀಳನ್ ಸಂಗೀತ ಸಂಯೋಜಿಸಲಿದ್ದು, ಕಾರ್ತಿಕ್ ಬಿ ಮಾಲೂರು ಅವರ ಛಾಯಾಗ್ರಹಣವಿರಲಿದೆ.
ಚಿತ್ರದ ಟ್ರೈಲರ್ ಈಗಾಗಲೇ ಬಿಡುಗಡೆಯಾಗಿದ್ದು, ಈ ತಿಂಗಳ ಅಂತ್ಯದಲ್ಲಿ ಚಿತ್ರ ಬಿಡುಗಡೆ ಮಾಡಲು ಶೃತಿ ಯೋಚಿಸಿದ್ದಾರೆ. ಈ ವರ್ಷದಲ್ಲಿ ನಾನೂ ಸಿನಿಮಾದಲ್ಲಿ ಅಭಿನಯಿಸದಿದ್ದರೂ ಇದು ನನ್ನ ಮೊದಲ ಬಿಡುಗಡೆಯ ಚಿತ್ರವಾಗಿದೆ. ಚಿತ್ರ ನಿರ್ಮಾಣ ಮಾಡುವ ಅವಕಾಶ ನನ್ನಗೆ ದೊರೆತಿದೆ ಎಂದು ಶೃತಿ ಹೇಳಿದ್ದಾರೆ.
ರೀಟಾ ಟ್ರೈಲರ್ ನಲ್ಲಿನ ಕೊನೆಯ ಸಂಭಾಷಣೆ ಅರ್ಥಪೂರ್ಣವಾಗಿದೆ.  ಎಲ್ಲ ಮನುಷ್ಯರು ವೈಯಕ್ತಿಕವಾಗಿ ನೋವು , ದು:ಖ ಅನುಭವಿಸುತ್ತಾರೆ. ಇಂತಹುದೇ ಈ ಚಿತ್ರದ ಪ್ರಮುಖ ಅಂಶವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT