ನಟ ಗಣೇಶ್ 
ಸಿನಿಮಾ ಸುದ್ದಿ

ಗೋಲ್ಡನ್ ಸ್ಟಾರ್ ಗಣೇಶ್ ಮುಂದಿನ ಚಿತ್ರ 'ಗೀತಾ'

ಮುಂಗಾರು ಮಳೆ ಖ್ಯಾತಿಯ ನಟ ಗಣೇಶ್ ಹಾಗೂ ವಿಜಯ್ ನಾಗೇಂದ್ರ ಅವರ ಸಹಯೋಗದಲ್ಲಿ ಗೀತಾ ಹೆಸರಿಲ್ಲಿ ಮತ್ತೊಂದು ಚಿತ್ರ ಬರುತ್ತಿದೆ. ಗೋಲ್ಡನ್ ಫಿಲಂ ಅಸೊಸಿಯೇಷನ್ ಯೊಂದಿಗೆ ಸಯ್ಯದ್ ಸಲಾಮ್ ಈ ಚಿತ್ರ ನಿರ್ಮಿಸುತ್ತಿದ್ದಾರೆ ಎಂಬ ಮಾತುಗಳು ಗಾಂಧಿನಗರದಲ್ಲಿ ಕೇಳಿಬರುತ್ತಿದೆ.

ಬೆಂಗಳೂರು:  ನಟ, ನಿರ್ದೇಶಕ, ಶಂಕರ್ ನಾಗ್ ಕನ್ನಡ ಚಿತ್ರರಂಗ ಕಂಡ  ದಿಗ್ಗಜ ನಟರಲ್ಲಿ ಒಬ್ಬರು. ಅವರ ನಿರ್ದೇಶನದಲ್ಲಿ   1981ರಲ್ಲಿ ಮೂಡಿಬಂದ  ಗೀತಾ ಚಿತ್ರ ಅವರಿಗೆ ಮತ್ತಷ್ಟು ಹೆಸರು ತಂದುಕೊಟ್ಟಿತ್ತು.
ಆ ಚಿತ್ರದಲ್ಲಿನ ಅರುಂದತಿ ನಾಗ್ ಸಾಹಿತ್ಯ ರಚನೆಯ  ಕರಾಟೆ ಕಿಂಗ್ ಶಂಕರ್ ನಾಗ್ ನಿರ್ದೇಶನದ  ಇಳಿಯರಾಜ ಸಂಗೀತ ಸಂಯೋಜನೆಯ ಸಂತೋಷಕ್ಕೆ , ಕೇಳದೆ ನಿಮ್ಮಗೀಗಾ, ಯೇನು ಕೇಳು,  ಗೀತೆಗಳು ಇಂದಿಗೂ ಚಿತ್ರಪ್ರೇಮಿಗಳ ಬಾಯಲ್ಲಿ ಗುನುಗುತ್ತಿರುತ್ತದೆ.
 ಈ ಮಧ್ಯೆ ಮುಂಗಾರು ಮಳೆ ಖ್ಯಾತಿಯ ನಟ ಗಣೇಶ್ ಹಾಗೂ ವಿಜಯ್ ನಾಗೇಂದ್ರ ಅವರ ಸಹಯೋಗದಲ್ಲಿ  ಗೀತಾ ಹೆಸರಿಲ್ಲಿ ಮತ್ತೊಂದು ಚಿತ್ರ ಬರುತ್ತಿದೆ. ಗೋಲ್ಡನ್ ಫಿಲಂ ಅಸೊಸಿಯೇಷನ್ ಯೊಂದಿಗೆ ಸಯ್ಯದ್ ಸಲಾಮ್ ಈ   ಚಿತ್ರ ನಿರ್ಮಿಸುತ್ತಿದ್ದಾರೆ ಎಂಬ ಮಾತುಗಳು ಗಾಂಧಿನಗರದಲ್ಲಿ ಕೇಳಿಬರುತ್ತಿದೆ.
ಸಯ್ಯದ್  ಸಲಾಮ್,   ಗಣೇಶ್ ಅವರೊಂದಿಗೆ ಮಾಡುತ್ತಿರುವ ಎರಡನೇ ಚಿತ್ರ ಇದಾಗಿದೆ.  ಯೋಗರಾಜ್ ಭಟ್ ನಿರ್ದೇಶನದ ಮುಂಗಾರು ಮಳೆಯಲ್ಲಿ ಈ ಹಿಂದೆ ಗಣೇಶ್ ಜೊತೆಗೆ ಕೆಲಸ ಮಾಡಿದ್ದರು
 ಮೂಲ ಕಥೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲಾ, ಶಂಕರ್ ನಾಗ್ ವ್ಯಕ್ತಿತ್ವವನ್ನು ರೀಲ್ ಪಾತ್ರದಲ್ಲಿ ಗಣೇಶ್ ನಿರ್ವಹಿಸಲಿದ್ದಾರೆ ಆದರೆ, ಕಥೆ ಹೊಸತನದಿಂದ ಕೂಡಿಗೆ ಎಂದು ಮೂಲಗಳು ತಿಳಿಸಿವೆ.
ವಿಜಯ್ ನಾಗೇಂದ್ರ  ಮಿಸ್ಟರ್ ಅಂಡ್ ಮಿಸಸ್ ರಾಮಚಾರಿ, ಮತ್ತು ರಾಜಕುಮಾರ ಚಿತ್ರದಲ್ಲಿ ಸಹ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.  ಈ ಚಿತ್ರಗಳ ತಂಡವೇ  ಗೀತಾ ಚಿತ್ರದಲ್ಲೂ ಜೊತೆಯಾಗಿದೆ. ಸಂತೋಷ್ ಕಥೆಯಲ್ಲಿ ಮ್ಯಾಜಿಕ್ ಟಚ್ ನೀಡಿದ್ದು, ಈ ಚಿತ್ರ ಈಗಾಗಲೇ ತೀವ್ರ ಕುತೂಹಲ ಕೆರಳಿಸಿದೆ.
ಮಿಸ್ಟರ್ ಅಂಡ್ ಮಿಸಸ್ ರಾಜಕುಮಾರಿ ಚಿತ್ರದಲ್ಲಿ  ಯಶ್ ವಿಷ್ಣುವರ್ಧನ್  ಪ್ರತಿರೂಪದಲ್ಲಿ ಕಾಣಿಸಿಕೊಂಡಿದ್ದರೆ,  ರಾಜಕುಮಾರ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ , ರಾಜ್ ಕುಮಾರ್  ವ್ಯಕ್ತಿತ್ವದ ಬಗ್ಗೆ ಬಿಂಬಿಸಲಾಗಿದೆ. ಇಂತಹದ್ದೇ ಪಾತ್ರವನ್ನು ಗಣೇಶ್ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಪಾರ ಅಭಿಮಾನಿಗಳ ಹೊಂದಿರುವ ಶಂಕರ್ ನಾಗ್  ಗಣೇಶ್ ಪಾತ್ರದ ಮೂಲಕ ಮತ್ತೆ ಮರಳಲಿದ್ದಾರೆ. ನಾಗಣ್ಣ ಹಾಗೂ ಪ್ರಶಾಂತ್ ರಾಜ್ ನಿರ್ದೇಶನದ ಚಿತ್ರಗಳನ್ನು ಗಣೇಶ್ ಒಪ್ಪಿಕೊಂಡಿದ್ದಾರೆ. ಆದರೆ, ಗೀತಾ ಸಿನಿಮಾ ಗಣೇಶ್ ಅವರ ಭವಿಷ್ಯಕ್ಕೆ ಮತ್ತೊಂದು  ಹಂತವಾಗಿರಲಿದೆ ಎಂದು ಚಿತ್ರರಂಗದೊಳಗಿರುವವರು ಹೇಳುತ್ತಿದ್ದಾರೆ.
ಗಣೇಶ್ ಜನ್ಮದಿನ ಜು.12 ರಂದು ಈ ಚಿತ್ರ ಬಿಡುಗಡೆಯ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT