ಜಿಗರ್ ಥಂಡ ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ್ದ ಶಿವ ಗಣೇಶ್ ಇದೀಗ ಕ್ರೇಜಿಸ್ಟಾರ್ ರವಿಚಂದ್ರನ್ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ.
ನಿರ್ಮಾಪಕ ಕೆ ಮಂಜು ನಿರ್ಮಾಣದಲ್ಲಿ ಈ ಚಿತ್ರ ತಯಾರಾಗುತ್ತಿದೆ. ಕೆ ಮಂಜು ಪುತ್ರ ಶ್ರೇಯಸ್ ನಾಯಕನಾಗಿ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡುತ್ತಿರುವ ಪಡ್ಡೆಹುಲಿ ಚಿತ್ರದಲ್ಲಿ ರವಿಚಂದ್ರನ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ತಮಿಳಿನ ಡಿ-16 ಚಿತ್ರದ ಕಥಾವಸ್ತು ಚನ್ನಾಗಿದ್ದು ಇದರಿಂದ ಸ್ಫೂರ್ತಿ ಪಡೆದು ತಮ್ಮ ಎರಡನೇ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದಾಗಿ ಶಿವ ಗಣೇಶ್ ಹೇಳಿದ್ದಾರೆ. ಇದೊಂದು ಥ್ರಿಲ್ಲರ್ ಚಿತ್ರವಾಗಿದ್ದು ಇದಕ್ಕೆ ರವಿಚಂದ್ರನ್ ಅವರು ಹೊಂದುತ್ತಾರೆ. ಚಿತ್ರದ ಅಧಿಕೃತ ಘೋಷಣೆ ಶೀಘ್ರದಲ್ಲೇ ಹೊರಬೀಳಲಿದ್ದು ಮುಂದಿನ ತಿಂಗಳಿಂದ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ.
ಇನ್ನು ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ಮುನಿರತ್ನ ಕುರುಕ್ಷೇತ್ರ ಚಿತ್ರದಲ್ಲಿ ಕೃಷ್ಣನ ಪಾತ್ರದಲ್ಲಿ ರವಿಚಂದ್ರನ್ ಅಭಿನಯಿಸಿದ್ದು ಬಿಡುಗಡೆಯ ಹಂತದಲ್ಲಿದೆ. ಇನ್ನು ರಾಜೇಂದ್ರ ಪೊಣ್ಣಪ್ಪ ಚಿತ್ರದಲ್ಲೂ ರವಿಚಂದ್ರನ್ ಅಭಿನಯಿಸಿದ್ದು ಈ ಎರಡು ಚಿತ್ರಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ.