ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಆಸ್ಕರ್ಸ್ ಪ್ರಶಸ್ತಿ ಪ್ರದಾನ ವೇಳೆ ಶ್ರೀದೇವಿ, ಶಶಿ ಕಪೂರ್ ಗೆ ಗೌರವ

ವಿಶ್ವ ಸಿನಿಮಾ ರಂಗ ಅತ್ಯುನ್ನತ ಪ್ರಶಸ್ತಿ ಆಸ್ಕರ್ಸ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ವೇಳೆ ಬಾಲಿವುಡ್ ನ ದಿವಂಗತ ನಟರಾದ ನಟ ಶಶಿಕಪೂರ್ ಮತ್ತು ನಟಿ ಶ್ರೀದೇವಿ ಅವರನ್ನು ನೆನಪಿಸಿಕೊಂಡು ಗೌರವ ಸಲ್ಲಿಕೆ ಮಾಡಲಾಯಿತು.

ಹಾಲಿವುಡ್: ವಿಶ್ವ ಸಿನಿಮಾ ರಂಗ ಅತ್ಯುನ್ನತ ಪ್ರಶಸ್ತಿ ಆಸ್ಕರ್ಸ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ವೇಳೆ ಬಾಲಿವುಡ್ ನ ದಿವಂಗತ ನಟರಾದ ನಟ ಶಶಿಕಪೂರ್ ಮತ್ತು ನಟಿ ಶ್ರೀದೇವಿ ಅವರನ್ನು ನೆನಪಿಸಿಕೊಂಡು ಗೌರವ ಸಲ್ಲಿಕೆ ಮಾಡಲಾಯಿತು.
ಹಾಲಿವುಡ್ ನ ಡಾಲ್ಬಿ ಥಿಯೇಟರ್ ನಲ್ಲಿ 2018ನೇ ಸಾಲಿನ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದು, ವಿಶ್ವ ಚಿತ್ರರಂಗ ಖ್ಯಾತನಾಮ ನಟ ನಟಿಯರು, ನಿರ್ದೇಶಕರು ಹಾಗೂ ನಿರ್ಮಾಪಕರು ಮತ್ತು ತಂತ್ರಜ್ಞರು ಪಾಲ್ಗೊಂಡಿದ್ದು, ಇಂದು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಜಯಿಸಿದ ಸಿನಿಮಾ ರಂಗದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. 
ವಿಶ್ವದ ಅತ್ಯಂತ ಪ್ರತಿಷ್ಠಿತ ಆಸ್ಕರ್ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಹಾಲಿವುಡ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಆರಂಭವಾಗಿದ್ದು, ಹಾಸ್ಯ ನಟ ಜಿಮ್ಮಿ ಕಿಮ್ಮೆಲ್ ನಿರೂಪಕರಾಗಿರುವ ಕಾರ್ಯಕ್ರಮಕ್ಕೆ ಬಾಲಿವುಡ್ ದಿಗ್ಗಜರು ಮೆರುಗು ನೀಡಿದ್ದಾರೆ. ಇದು 90ನೆ ಅಕಾಡಮಿ ಪ್ರಶಸ್ತಿ ಪ್ರದಾನ ಸಮಾರಂಭವಾಗಿದೆ.
ಇನ್ನು ಈ ಅತ್ಯುನ್ನತ ಸಮಾರಂಭದಲ್ಲಿ ಈ ವರ್ಷ ನಿಧನರಾದ ಗಣ್ಯ ತಾರೆಯರಿಗೆ ನಮನ ಸಲ್ಲಿಕೆ ಮಾಡಲಾಗಿದ್ದು, ಅಂತೆಯೇ ಇತ್ತೀಚೆಗೆ ನಮ್ಮನ್ನಗಲಿದ ಬಾಲಿವುಡ್ ನ ಶಶಿಕಪೂರ್ ಹಾಗೂ ನಟಿ ಶ್ರೀದೇವಿ ಅವರಿಗೆ ಗೌರವ ಸಲ್ಲಿಕೆ ಮಾಡಲಾಯಿತು. ನಟ ಶಶಿಕಪೂರ್ ಅವರು 2017 ಡಿಸೆಂಬರ್ ನಲ್ಲಿ ನಿಧನರಾದರೆ, ನಟಿ ಶ್ರೀದೇವಿ ಇದೇ ಫೆಬ್ರವರಿಯಲ್ಲಿ ದುಬೈನಲ್ಲಿ ನಿಧನರಾಗಿದ್ದರು. ತಮ್ಮ ಕುಟುಂಬದ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಟಿ ಶ್ರೀದೇವಿ ಆಕಸ್ಮಿಕವಾಗಿ ಬಾತ್ ರೂಂ ಟಬ್ ನಲ್ಲಿ ಬಿದ್ದು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT