ಜಗ್ಗೇಶ್ 
ಸಿನಿಮಾ ಸುದ್ದಿ

ಕವಿರಾಜ್ ನಿರ್ದೇಶನದ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್ ಎನ್‌‍ಕೌಂಟರ್ ಸ್ಪೆಷಲಿಸ್ಟ್!

ಕನ್ನಡ ಚಿತ್ರರಂಗದ ನವರಸ ನಾಯಕ ಜಗ್ಗೇಶ್ ಅವರಿಗೆ ಇಳಿ ವಯಸ್ಸಿನಲ್ಲೂ ಪ್ರಯೋಗಾತ್ಮಕ ಚಿತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದಾರೆ.

ಕನ್ನಡ ಚಿತ್ರರಂಗದ ನವರಸ ನಾಯಕ ಜಗ್ಗೇಶ್ ಅವರಿಗೆ ಇಳಿ ವಯಸ್ಸಿನಲ್ಲೂ ಪ್ರಯೋಗಾತ್ಮಕ ಚಿತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದಾರೆ.
ನವನಿರ್ದೇಶಕ ಹರಿಕೃಷ್ಣ ನಿರ್ದೇಶನದ 8ಎಂಎಂ ಚಿತ್ರದಲ್ಲಿ ಜಗ್ಗೇಶ್ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ನಂತರ ಕವಿರಾಜ್ ನಿರ್ದೇಶನದಲ್ಲಿ ಚಿತ್ರದಲ್ಲಿ ಜಗ್ಗೇಶ್ ಎನ್‌‍ಕೌಂಟರ್ ಸ್ಪೆಷಲಿಸ್ಟ್ ಆಗಿ ಕಾಣಿಸಿಕೊಳ್ಳಲಿದ್ದಾರೆ. 
ಗೀತರಚನೆಗಾರ ಕವಿರಾಜ್ ಅವರು ಮದುವೆಯ ಮಮತೆಯ ಕರೆಯೋಲೆ ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ್ದರು. ಮೊದಲಿಗೆ ರೋಮ್ಯಾಂಟಿಕ್ ಚಿತ್ರವನ್ನು ನಿರ್ದೇಶಿಸಿದ್ದ ಕವಿರಾಜ್ ಇದೀಗ ಥ್ರಿಲ್ಲರ್ ಕತೆಯನ್ನು ಕೈಗೆತ್ತಿಕೊಂಡಿದ್ದಾರೆ. 
ಚಿತ್ರದ ಒನ್ ಲೈನ್ ಸ್ಟೋರಿ ಕೇಳಿರುವ ಜಗ್ಗೇಶ್ ಚಿತ್ರದಲ್ಲಿ ಅಭಿನಯಿಸುವುದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಅಧಿಕೃತ ಘೋಷಣೆ ಹೊರಬೀಳಲಿದೆ. 
ಏಪ್ರಿಲ್ ಅಥವಾ ಮೇನಲ್ಲಿ ಚಿತ್ರೀಕರಣ ಆರಂಭಿಸಲು ಚಿತ್ರತಂಡ ನಿರ್ಧರಿಸಿದ್ದು ಚಿತ್ರಕ್ಕೆ ಗುರುಕಿರಣ್ ಸಂಗೀತ ಸಂಯೋಜಿಸುತ್ತಿದ್ದು ಎವಿ ಕೃಷ್ಣಕುಮಾರ್ ಅವರ ಛಾಯಾಗ್ರಹಣವಿರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?