ಜಗ್ಗೇಶ್ 
ಸಿನಿಮಾ ಸುದ್ದಿ

ಕವಿರಾಜ್ ನಿರ್ದೇಶನದ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್ ಎನ್‌‍ಕೌಂಟರ್ ಸ್ಪೆಷಲಿಸ್ಟ್!

ಕನ್ನಡ ಚಿತ್ರರಂಗದ ನವರಸ ನಾಯಕ ಜಗ್ಗೇಶ್ ಅವರಿಗೆ ಇಳಿ ವಯಸ್ಸಿನಲ್ಲೂ ಪ್ರಯೋಗಾತ್ಮಕ ಚಿತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದಾರೆ.

ಕನ್ನಡ ಚಿತ್ರರಂಗದ ನವರಸ ನಾಯಕ ಜಗ್ಗೇಶ್ ಅವರಿಗೆ ಇಳಿ ವಯಸ್ಸಿನಲ್ಲೂ ಪ್ರಯೋಗಾತ್ಮಕ ಚಿತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದಾರೆ.
ನವನಿರ್ದೇಶಕ ಹರಿಕೃಷ್ಣ ನಿರ್ದೇಶನದ 8ಎಂಎಂ ಚಿತ್ರದಲ್ಲಿ ಜಗ್ಗೇಶ್ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ನಂತರ ಕವಿರಾಜ್ ನಿರ್ದೇಶನದಲ್ಲಿ ಚಿತ್ರದಲ್ಲಿ ಜಗ್ಗೇಶ್ ಎನ್‌‍ಕೌಂಟರ್ ಸ್ಪೆಷಲಿಸ್ಟ್ ಆಗಿ ಕಾಣಿಸಿಕೊಳ್ಳಲಿದ್ದಾರೆ. 
ಗೀತರಚನೆಗಾರ ಕವಿರಾಜ್ ಅವರು ಮದುವೆಯ ಮಮತೆಯ ಕರೆಯೋಲೆ ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ್ದರು. ಮೊದಲಿಗೆ ರೋಮ್ಯಾಂಟಿಕ್ ಚಿತ್ರವನ್ನು ನಿರ್ದೇಶಿಸಿದ್ದ ಕವಿರಾಜ್ ಇದೀಗ ಥ್ರಿಲ್ಲರ್ ಕತೆಯನ್ನು ಕೈಗೆತ್ತಿಕೊಂಡಿದ್ದಾರೆ. 
ಚಿತ್ರದ ಒನ್ ಲೈನ್ ಸ್ಟೋರಿ ಕೇಳಿರುವ ಜಗ್ಗೇಶ್ ಚಿತ್ರದಲ್ಲಿ ಅಭಿನಯಿಸುವುದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಅಧಿಕೃತ ಘೋಷಣೆ ಹೊರಬೀಳಲಿದೆ. 
ಏಪ್ರಿಲ್ ಅಥವಾ ಮೇನಲ್ಲಿ ಚಿತ್ರೀಕರಣ ಆರಂಭಿಸಲು ಚಿತ್ರತಂಡ ನಿರ್ಧರಿಸಿದ್ದು ಚಿತ್ರಕ್ಕೆ ಗುರುಕಿರಣ್ ಸಂಗೀತ ಸಂಯೋಜಿಸುತ್ತಿದ್ದು ಎವಿ ಕೃಷ್ಣಕುಮಾರ್ ಅವರ ಛಾಯಾಗ್ರಹಣವಿರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT