ಪ್ರತ್ಯಕ್ಷ ರಾಮಕೃಷ್ಣ 
ಸಿನಿಮಾ ಸುದ್ದಿ

ಸ್ವಚ್ಛ ಭಾರತ್ ಅಭಿಯಾನಕ್ಕೆ ಸಿನಿಮಾ ಮೂಲಕ ಹಣ ಒದಗಿಸಿದ ಬಾಲ ಕಲಾವಿದೆ

ಕನ್ನಡ ಸಿನಿಮಾ ಸಂದಾಸ್ ಮಕ್ಕಳ ಸಿನಿಮಾದಲ್ಲಿ ನಟಿಸಿರುವ 14 ವರ್ಷದ ಬಾಲ ಕಲಾವಿದೆ ಪ್ರತ್ಯಕ್ಷ ...

ಬೆಂಗಳೂರು: ಕನ್ನಡ ಸಿನಿಮಾ ಸಂದಾಸ್ ಮಕ್ಕಳ ಸಿನಿಮಾದಲ್ಲಿ ನಟಿಸಿರುವ 14 ವರ್ಷದ ಬಾಲ ಕಲಾವಿದೆ ಪ್ರತ್ಯಕ್ಷ ರಾಮಕೃಷ್ಣ ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ಸಾಮಾಜಿಕ ಜವಾಬ್ದಾರಿಗಳನ್ನು ತೋರಿಸುತ್ತಾಳೆ.

ಈ ಚಿತ್ರದ ನಿರ್ದೇಶಕ ಅಜಯ್ ಕುಮಾರ್ ಎ.ಜೆ. ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಪ್ರತ್ಯಕ್ಷ ಚಿತ್ರಕ್ಕಾಗಿ ತಯಾರಿ ನಡೆಸಲು ದಾನಾಪುರ ಎಂಬ ಗ್ರಾಮಕ್ಕೆ ಎರಡು ತಿಂಗಳು ಹೋಗಿ ತಯಾರಿ ನಡೆಸುತ್ತಿದ್ದಳು. ಚಿತ್ರದಲ್ಲಿ ಮಲ್ಲಮ್ಮ ಎಂಬ ಹುಡುಗಿ ತನ್ನ ಗ್ರಾಮದಲ್ಲಿ ಶೌಚಾಲಯವಿಲ್ಲವೆಂದು ಸತತ ಮೂರು ದಿನಗಳ ಕಾಲ ಊಟ ತಿಂಡಿಯಿಲ್ಲದೆ ಹೋರಾಟ ನಡೆಸುವ ಕಥೆ ಹೊಂದಿದೆ. ಪ್ರತ್ಯಕ್ಷ ಚಿತ್ರದಲ್ಲಿ ಮುಖ್ಯ ಪಾತ್ರ ವಹಿಸಿದ್ದಾಳೆ.

ಚಿತ್ರದ ಶೂಟಿಂಗ್ ಮಾಡಬೇಕಾದರೆ ಗ್ರಾಮದಲ್ಲಿನ ಅನೇಕ ಮಂದಿ ಬಯಲಿನಲ್ಲಿ ಶೌಚ ಮಾಡುತ್ತಿದ್ದುದನ್ನು ಪ್ರತ್ಯಕ್ಷ ಗಮನಿಸಿದ್ದಾಳೆ. ತುಮಕೂರು ಜಿಲ್ಲೆಯ ಜಾಲಡಿಗೆರೆ ಗ್ರಾಮದಿಂದ ಕೃಷಿ ಕುಟುಂಬದಿಂದ ಬಂದಿರುವ ಪ್ರತ್ಯಕ್ಷ ಸಿನಿಮಾದಲ್ಲಿ ಸಂಪಾದಿಸುವ ಸ್ವಲ್ಪ ಹಣವನ್ನು ತಮ್ಮ ಗ್ರಾಮದ ಜನರ ಉಪಯೋಗಕ್ಕೆ ವಿನಿಯೋಗಿಸಲು ಮುಂದಾಗಿದ್ದಾಳೆ. ಚಿತ್ರದ ನಿರ್ಮಾಪಕರ ಬಳಿ ಮಾತನಾಡಿ 1 ಲಕ್ಷ ರೂಪಾಯಿಗಳನ್ನು ಗ್ರಾಮದ ಸ್ವಚ್ಛ ಭಾರತ ಅಭಿಯಾನಕ್ಕೆ ಕಳುಹಿಸಿದ್ದಾಳೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT