ಚುಕ್ಕಿ ಚೆಲುವೆ ಮಯೂರಿ 
ಸಿನಿಮಾ ಸುದ್ದಿ

ಶಿವಣ್ಣ ಜೊತೆಗಿನ ನಟನೆ ದೊಡ್ಡ ಮೈಲುಗಲ್ಲಾಗಲಿದೆ: ಚುಕ್ಕಿ ಚೆಲುವೆ ನಟಿ ಮಯೂರಿ

ಸ್ಯಾಂಡಲ್ ವುಡ್ ಚುಕ್ಕಿ ಚೆಲುವೆ ಮಯೂರಿ ಈಗಂತೂ ಸಖತ್ ಬ್ಯುಸಿಯಾಗಿದ್ದಾರೆ. ಸಾಲು ಸಾಲು ಚಿತ್ರಗಳನ್ನು ತಮ್ಮ ಕೈನಲ್ಲಿಟ್ಟುಕೊಂಡಿರುವ ಮಯೂರಿಯವರಿಗೆ ಬೇಡಿಕೆ ಕೂಡ ಹೆಚ್ಚಾಗಿದ್ದು, ಪ್ರಸ್ತುತ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್...

ಸ್ಯಾಂಡಲ್ ವುಡ್ ಚುಕ್ಕಿ ಚೆಲುವೆ ಮಯೂರಿ ಈಗಂತೂ ಸಖತ್ ಬ್ಯುಸಿಯಾಗಿದ್ದಾರೆ. ಸಾಲು ಸಾಲು ಚಿತ್ರಗಳನ್ನು ತಮ್ಮ ಕೈನಲ್ಲಿಟ್ಟುಕೊಂಡಿರುವ ಮಯೂರಿಯವರಿಗೆ ಬೇಡಿಕೆ ಕೂಡ ಹೆಚ್ಚಾಗಿದ್ದು, ಪ್ರಸ್ತುತ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರೊಂದಿಗೆ ನಟಿಸುವ ಅವಕಾಶ ಕೂಡ ಪಡೆದುಕೊಂಡಿದ್ದಾರೆ. 
ದಕ್ಷಿಣ ಭಾರತದಲ್ಲಿ ಗ್ರೇಟ್ ಸ್ಟಂಟ್ ಡೈರೆಕ್ಟರ್ ಎನಿಸಿಕೊಂಡಿರುವ ರವಿವರ್ಮ ಅವರು ನಿರ್ದೇಶನದತ್ತ ಮುಖ ಮಾಡಿದ್ದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗಾಗಿ ರುಸ್ತುಂ ಎನ್ನುವ ರಗಡ್ ಕಥೆ ಮಾಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಚಿತ್ರದ ಚಿತ್ರೀಕರಣ ಆರಂಭವಾಗಲಿದ್ದು, ಚಿತ್ರದಲ್ಲಿ ಶಿವಣ್ಣ ಅವರೊಂದಿಗೆ ಪ್ರಮುಖ ಪಾತ್ರದಲ್ಲಿ ನಟಿ ಮಯೂರಿಯವರು ಕಾಣಿಸಿಕೊಳ್ಳಲಿದ್ದಾರೆ. 
ತಮ್ಮ ಪಾತ್ರದ ಕುರಿತಂತೆ ಮಾತನಾಡಿರುವ ಮಯೂರಿಯವರು, ಚಿತ್ರದ ಹೀರೋ ಆಗಿರುವ ಶಿವಣ್ಣ ಅವರೊಂದಿಗೆ ಪ್ರಮುಖ ಪಾತ್ರದಲ್ಲಿ ನಡೆಸುತ್ತಿದ್ದೇನೆಂದು ಹೇಳಿದ್ದಾರೆ. 
ಚಿತ್ರದ ಕುರಿತಂತೆ ಹೆಚ್ಚಿನ ಮಾಹಿತಿಗಳನ್ನು ಬಹಿರಂಗಪಡಿಸದಂತೆ ತಿಳಿಸಲಾಗಿದೆ. ಆದರೆ, ಸತ್ಯ ಹೇಳಬೇಕೆಂದರೆ ಈ ದೊಡ್ಡ ಬ್ಯಾನ್ ನಲ್ಲಿ ಕೆಲಸ ಮಾಡುವ ನನ್ನ ಕನಸು ನನಸಾಗಿದೆ. ಚಿತ್ರದಲ್ಲಿ ಶಿವಣ್ಣ ಅವರ ಜೊತೆಗಿನ ಕೆಲಸ ದೊಡ್ಡ ಮೈಲುಗಲ್ಲಾಗಲಿದೆ ಎಂದು ಹೇಳಿದ್ದಾರೆ. 
ನನ್ನ ವ್ಯಕ್ತಿತ್ವವನ್ನು ಇಟ್ಟುಕೊಟ್ಟು ನಿರ್ದೇಶಕರು ಪಾತ್ರವನ್ನು ರಚನೆ ಮಾಡಿರುವ ವಿಚಾರ ತಿಳಿದಾಗ ಬಹಳಷ್ಟು ಸಂತೋಷವಾಯಿತು. ಇನ್ನಾವುದೇ ಆಯ್ಕೆಗಳನ್ನು ನೋಡದೇ ಇರುವುದನ್ನು ತಿಳಿದು ನನಗೆ ಅತ್ಯಂತ ಗೌರವ ಎನಿಸಿತು. ನನ್ನ ಮೇಲೆ ಸಾಕಷ್ಟು ನಿರೀಕ್ಷೆಗಳಿರುತ್ತದೆ ಎಂಬುದೂ ಕೂಡ ನನಗೆ ಅರ್ಥವಾಯಿತು. ನನ್ನಿಂದ ಸಾಧ್ಯವಾದಷ್ಟು ಉತ್ತಮವಾದ ಕೆಲಸ ಮಾಡುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. 
ಪ್ರಸ್ತುತ ಮಯೂರಿಯವರು ನಟ ಜಗ್ಗೇಶ್ ಅವರ ನಟಿಸುತ್ತಿರುವ 8ಎಂಎಂ ಚಿತ್ರದ ಚಿತ್ರೀಕರಣದಲ್ಲಿ ಬ್ಯೂಸಿಯಾಗಿದ್ದು, ಚಿತ್ರದ ಚಿತ್ರೀಕರಣ ಗೋವಾದಲ್ಲಿ ನಡೆಯುತ್ತಿದೆ. ಈಗಾಗಲೇ ಸಂಚಾರಿ ವಿಜಯ್ ಅವರೊಂದಿಗೆ ಆಟಕ್ಕುಂಟು ಲೆಕ್ಕಲಿಲ್ಲ ಚಿತ್ರದಲ್ಲಿ ನಟಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT