ಶ್ರೀದೇವಿ 
ಸಿನಿಮಾ ಸುದ್ದಿ

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನಿರ್ದೇಶನದಂತೆ ಶ್ರೀದೇವಿ ಅಂತ್ಯಕ್ರಿಯೆ ನಡೆದಿದೆ

ದುಬೈನಲ್ಲಿ ಸಾವನ್ನಪ್ಪಿದ ಹಿರಿಯ ಬಾಲಿವುಡ್ ನಟಿ ಶ್ರೀದೇವಿ ಅವರ ಅಂತ್ಯ ಸಂಸ್ಕಾರವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನಿರ್ದೇಶನದಂತೆ...

ಮುಂಬಯಿ: ದುಬೈನಲ್ಲಿ ಸಾವನ್ನಪ್ಪಿದ ಹಿರಿಯ ಬಾಲಿವುಡ್ ನಟಿ ಶ್ರೀದೇವಿ ಅವರ ಅಂತ್ಯ ಸಂಸ್ಕಾರವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನಿರ್ದೇಶನದಂತೆ ನಡೆಸಲಾಗಿದೆ ಎಂದು ಆರ್ ಟಿ ಐ ತಿಳಿಸಿದೆ.
ನಟಿ ಶ್ರಿದೇವಿ ಅವರಿಗೆ ರಾಜ್ಯ ಸರ್ಕಾರದ ಗೌರವದೊಂದಿಗೆ ಅಂತ್ಯ ಸಂಸ್ಕಾರ ನಡೆಸಿದ್ದರ ಸಂಬಂಧ ವಿವರಣೆ ಕೋರಿ  ಆರ್ ಟಿ ಐ ಕಾರ್ಯಕರ್ತ ಅನಿಲ್ ಗಲಗಲಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಉತ್ತರಿಸಿರುವ ಆರ್ ಟಿಐ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರ ನಿರ್ದೇಶನದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶ್ರೀದೇವಿ ಅಂತ್ಯ ಸಂಸ್ಕಾರ ನೆರವೇರಿದೆ ಎಂದು ತಿಳಿಸಿದೆ,
ಶ್ರೀದೇವಿ ಅವರು ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆಂದು ಅವರಿಗೆ ಸರ್ಕಾರಿ ಗೌರವ ನೀಡಿಲ್ಲ, ರಾಜ್ಯ ಸರ್ಕಾರ ವಿವೇಚನೆಯಿಂದ ಶಿಷ್ಟಾಚಾರ ಪಾಲಿಸಿ ಈ ಗೌರವ ನೀಡಿದೆ ಎಂದು ವಿವರಣೆ ನೀಡಿದೆ.
ಫೆಬ್ರವರಿ 24 ರಂದು ದುಬೈನಲ್ಲಿ ಶ್ರೀದೇವಿ ಮೃತ ಪಟ್ಟಿದ್ದರು. ನಟಿ ಶ್ರೀದೇವಿಗೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಸಿದ್ದನ್ನು ನವನಿರ್ಮಾಣ ಸೇನೆಯ ರಾಜ್ ಠಾಕ್ರೆ ಖಂಡಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT