ಮುಂಬಯಿ: ದುಬೈನಲ್ಲಿ ಸಾವನ್ನಪ್ಪಿದ ಹಿರಿಯ ಬಾಲಿವುಡ್ ನಟಿ ಶ್ರೀದೇವಿ ಅವರ ಅಂತ್ಯ ಸಂಸ್ಕಾರವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನಿರ್ದೇಶನದಂತೆ ನಡೆಸಲಾಗಿದೆ ಎಂದು ಆರ್ ಟಿ ಐ ತಿಳಿಸಿದೆ.
ನಟಿ ಶ್ರಿದೇವಿ ಅವರಿಗೆ ರಾಜ್ಯ ಸರ್ಕಾರದ ಗೌರವದೊಂದಿಗೆ ಅಂತ್ಯ ಸಂಸ್ಕಾರ ನಡೆಸಿದ್ದರ ಸಂಬಂಧ ವಿವರಣೆ ಕೋರಿ ಆರ್ ಟಿ ಐ ಕಾರ್ಯಕರ್ತ ಅನಿಲ್ ಗಲಗಲಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಉತ್ತರಿಸಿರುವ ಆರ್ ಟಿಐ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರ ನಿರ್ದೇಶನದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶ್ರೀದೇವಿ ಅಂತ್ಯ ಸಂಸ್ಕಾರ ನೆರವೇರಿದೆ ಎಂದು ತಿಳಿಸಿದೆ,
ಶ್ರೀದೇವಿ ಅವರು ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆಂದು ಅವರಿಗೆ ಸರ್ಕಾರಿ ಗೌರವ ನೀಡಿಲ್ಲ, ರಾಜ್ಯ ಸರ್ಕಾರ ವಿವೇಚನೆಯಿಂದ ಶಿಷ್ಟಾಚಾರ ಪಾಲಿಸಿ ಈ ಗೌರವ ನೀಡಿದೆ ಎಂದು ವಿವರಣೆ ನೀಡಿದೆ.
ಫೆಬ್ರವರಿ 24 ರಂದು ದುಬೈನಲ್ಲಿ ಶ್ರೀದೇವಿ ಮೃತ ಪಟ್ಟಿದ್ದರು. ನಟಿ ಶ್ರೀದೇವಿಗೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಸಿದ್ದನ್ನು ನವನಿರ್ಮಾಣ ಸೇನೆಯ ರಾಜ್ ಠಾಕ್ರೆ ಖಂಡಿಸಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos