ನಿರ್ದೇಶಕ ಸಿ.ವಿ.ರಾಜೇಂದ್ರನ್ 
ಸಿನಿಮಾ ಸುದ್ದಿ

ಖ್ಯಾತ ನಿರ್ದೇಶಕ ಸಿ.ವಿ. ರಾಜೇಂದ್ರನ್ ವಿಧಿವಶ

ಖ್ಯಾತ ನಿರ್ದೇಶಕ ಸಿ.ವಿ.ರಾಜೇಂದ್ರನ್ (81) ಅವರು ಭಾನುವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ...

ಚೆನ್ನೈ: ಖ್ಯಾತ ನಿರ್ದೇಶಕ ಸಿವಿ ರಾಜೇಂದ್ರನ್ (81) ಅವರು ಭಾನುವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ. 
ಕನ್ನಡ ಚಿತ್ರರಂಗದ ಮೇರು ನಟ ಡಾ.ರಾಜ್ ಕುಮಾರ್ ಅಭಿನಯದ ತ್ರಿಮೂರ್ತಿ ಚಿತ್ರದ ಮೂಲಕ ಕನ್ನಡ ಚಿತ್ರರಂಗವನ್ನು ಪ್ರವೇಶಿಸಿದ್ದ ರಾಜೇಂದ್ರನ್ ಅವರು ದೀರ್ಘಾಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಮಿಯಾಟ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಿಗ್ಗೆ 8 ಗಂಟೆಗೆ ಕೊನೆಯುಸಿರೆಳೆದಿದ್ದಾರೆಂದು ವರದಿಗಳು ತಿಳಿಸಿವೆ. 
ರಾಜೇಂದ್ರ ಅವರು ಪತ್ನಿ ಜಾನಕಿ ರಾಜೇಂದ್ರನ್, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪ್ರಸ್ತುತ ರಾಜೇಂದ್ರ ಅವರ ಪುತ್ರ ಅಮೆರಿಕದಲ್ಲಿದ್ದು, ಭಾರತಕ್ಕೆ ಬಂದ ಬಳಿಕ ಅಂತಿಮ ಕಾರ್ಯಗಳು ನಡೆಯಲಿವೆ ಎಂದು ವರದಿಗಳು ತಿಳಿಸಿವೆ. 
ತ್ರಿಮೂರ್ತಿ ಸಿವಿ. ರಾಜೇಂದ್ರನ್ ಅವರು ನಿರ್ದೇಶಿಸಿದ ಕನ್ನಡದ ಮೊದಲ ಸಿನಿಮಾವಾಗಿದೆ. ಇದಾದ ಬಳಿಕ ಡಾ.ವಿಷ್ಣುವರ್ಧನ್, ಗಲಾಟೆ ಸಂಸಾರ, ದ್ವಾರಕೀಶ್ ನಿರ್ಮಾಣದ ಕಿಟ್ಟು-ಪುಟ್ಟು, ಸಿಂಗಾಪುರದಲ್ಲಿ ರಾಜಾಕುಳ್ಳ, ಪ್ರೀತಿ ಮಾಡು ತಮಾಷೆ ನೋಡು, ಘರ್ಜನೆ ಸೇರಿದಂತೆ ವಿವಿಧ ಚಿತ್ರಗಳನ್ನು ನಿರ್ದೇಶಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT