ನಿರ್ದೇಶಕ ಸಿ.ವಿ.ರಾಜೇಂದ್ರನ್ 
ಸಿನಿಮಾ ಸುದ್ದಿ

ಖ್ಯಾತ ನಿರ್ದೇಶಕ ಸಿ.ವಿ. ರಾಜೇಂದ್ರನ್ ವಿಧಿವಶ

ಖ್ಯಾತ ನಿರ್ದೇಶಕ ಸಿ.ವಿ.ರಾಜೇಂದ್ರನ್ (81) ಅವರು ಭಾನುವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ...

ಚೆನ್ನೈ: ಖ್ಯಾತ ನಿರ್ದೇಶಕ ಸಿವಿ ರಾಜೇಂದ್ರನ್ (81) ಅವರು ಭಾನುವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ. 
ಕನ್ನಡ ಚಿತ್ರರಂಗದ ಮೇರು ನಟ ಡಾ.ರಾಜ್ ಕುಮಾರ್ ಅಭಿನಯದ ತ್ರಿಮೂರ್ತಿ ಚಿತ್ರದ ಮೂಲಕ ಕನ್ನಡ ಚಿತ್ರರಂಗವನ್ನು ಪ್ರವೇಶಿಸಿದ್ದ ರಾಜೇಂದ್ರನ್ ಅವರು ದೀರ್ಘಾಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಮಿಯಾಟ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಿಗ್ಗೆ 8 ಗಂಟೆಗೆ ಕೊನೆಯುಸಿರೆಳೆದಿದ್ದಾರೆಂದು ವರದಿಗಳು ತಿಳಿಸಿವೆ. 
ರಾಜೇಂದ್ರ ಅವರು ಪತ್ನಿ ಜಾನಕಿ ರಾಜೇಂದ್ರನ್, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪ್ರಸ್ತುತ ರಾಜೇಂದ್ರ ಅವರ ಪುತ್ರ ಅಮೆರಿಕದಲ್ಲಿದ್ದು, ಭಾರತಕ್ಕೆ ಬಂದ ಬಳಿಕ ಅಂತಿಮ ಕಾರ್ಯಗಳು ನಡೆಯಲಿವೆ ಎಂದು ವರದಿಗಳು ತಿಳಿಸಿವೆ. 
ತ್ರಿಮೂರ್ತಿ ಸಿವಿ. ರಾಜೇಂದ್ರನ್ ಅವರು ನಿರ್ದೇಶಿಸಿದ ಕನ್ನಡದ ಮೊದಲ ಸಿನಿಮಾವಾಗಿದೆ. ಇದಾದ ಬಳಿಕ ಡಾ.ವಿಷ್ಣುವರ್ಧನ್, ಗಲಾಟೆ ಸಂಸಾರ, ದ್ವಾರಕೀಶ್ ನಿರ್ಮಾಣದ ಕಿಟ್ಟು-ಪುಟ್ಟು, ಸಿಂಗಾಪುರದಲ್ಲಿ ರಾಜಾಕುಳ್ಳ, ಪ್ರೀತಿ ಮಾಡು ತಮಾಷೆ ನೋಡು, ಘರ್ಜನೆ ಸೇರಿದಂತೆ ವಿವಿಧ ಚಿತ್ರಗಳನ್ನು ನಿರ್ದೇಶಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT