ಚಿತ್ರರಂಗಕ್ಕೆ ರಿಯಲ್ ಸ್ಟಾರ್ ರೀ ಎಂಟ್ರಿ, ಉಪೇಂದ್ರ ಈಗ ’ಹೋಮ್ ಮಿನಿಸ್ಟರ್' 
ಸಿನಿಮಾ ಸುದ್ದಿ

ಚಿತ್ರರಂಗಕ್ಕೆ ರಿಯಲ್ ಸ್ಟಾರ್ ರೀ ಎಂಟ್ರಿ, ಉಪೇಂದ್ರ ಈಗ ’ಹೋಮ್ ಮಿನಿಸ್ಟರ್'

ಸುಮಾರು ಆರು ತಿಂಗಳ ಬಳಿಕ ರಿಯಲ್ ಸ್ಟಾರ್ ಉಪೇಂದ್ರ ಕ್ಯಾಮರಾ ಮುಂದೆ ನಿಂತಿದ್ದಾರೆ. ರಾಜಕೀಯಕ್ಕೆ ಪ್ರವೇಶಿಸುವ ನಿಟ್ಟಿನಲಿ ಚಿತ್ರರಂಗದಿಂದ ಬ್ರೇಕ್ ಪಡೆದಿದ್ದ ನಟ ಇದೀಗ...

ಬೆಂಗಳೂರು: ಸುಮಾರು ಆರು ತಿಂಗಳ ಬಳಿಕ ರಿಯಲ್ ಸ್ಟಾರ್ ಉಪೇಂದ್ರ ಕ್ಯಾಮರಾ ಮುಂದೆ ನಿಂತಿದ್ದಾರೆ. ರಾಜಕೀಯಕ್ಕೆ ಪ್ರವೇಶಿಸುವ ನಿಟ್ಟಿನಲಿ ಚಿತ್ರರಂಗದಿಂದ ಬ್ರೇಕ್ ಪಡೆದಿದ್ದ ನಟ ಇದೀಗ ’ಹೋಮ್ ಮಿನಿಸ್ಟರ್’ ಮೂಲಕ ಮತ್ತೆ ಚಿತ್ರ ಜಗತ್ತಿಗೆ ಮರಳಿದ್ದಾರೆ. 
ತೆಲುಗು ಹಾಗೂ ಕನ್ನಡ ಎರಡೂ ಭಾಷೆಗಳಲ್ಲಿ ತಯಾರಾಗುತ್ತಿರುವ ಈ ಚಿತ್ರದ ಚಿತ್ರೀಕರಣ ಮಲೇಷಿಯಾದಲ್ಲಿ ನಡೆಯುತ್ತಿದೆ.ವೇದಿಕಾ ಕುಮಾರಂದ, ಲಾಸ್ಯಾ ನಾಗರಾಜ್ ಸೇರಿ ಬಹುತಾರಾಂಗಣವಿರುವ ಈ ಚಿತ್ರದ ಮೂರು ಹಾಡುಗಳು ಹಾಗೂ ಕೆಲವೇ ದೃಶ್ಯಗಳನ್ನು ಪೂರ್ಣಗೊಳಿಸಬೇಕಾಗಿದೆ ಎಂದು ಉಪೇಂದ್ರ ಹೇಳಿದ್ದಾರೆ.
ಸುಜಯ್ ಕೆ. ಶ್ರೀಹರಿ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಮಲೇಷಿಯಾದ ಶಾಪಿಂಗ್ ಮಾಲ್, ಅದ್ದೂರಿ ಬಹುಮಹಡಿ ಕಟ್ಟಡಗಳ ಮುಂದೆ ನಡೆಯುತ್ತಿದ್ದು ಮಲೇಷಿಯಾದ ಸುಂದರ ತಾಣಗಳನ್ನು ಚಿತ್ರದಲ್ಲಿಯೂ ಅಷ್ಟೇ ಚೆನ್ನಾಗಿ ಸೆರೆಹಿಡಿಯಲಾಗುತ್ತಿದೆ.
"ಚಿತ್ರಕಥೆಗೆ ಭಾರತದ ಹೊರಗೆ ಚಿತ್ರೀಕರಣ ಅಗತ್ಯವಾಗಿತ್ತು. ನಾವು ಮಲೇಷಿಯಾವನ್ನು ಆಯ್ಕೆ ಮಾಡಿಕೊಂಡೆವು. ಕಳೆದೊಂದು ವಾರದಿಂಡ ಚಿತ್ರೀಕರಣ ನಡೆಯುತ್ತಿದ್ದು ಮೇ 5ಕ್ಕೆ ಮುಕ್ತಾಯವಾಗುವ ನಿರೀಕ್ಷೆ ಇದೆ" ಚಿತ್ರ ನಿರ್ಮಾಪಕರಾದ ಪೂರ್ಣ ನಾಯ್ಡು ಹೇಳಿದ್ದಾರೆ.
ನಿರ್ಮಾಪಕರು ಹೇಳುವಂತೆ ಸದ್ಯವೇ ಚಿತ್ರೀಕರಣ ಸಂಪೂರ್ಣಗೊಂಡು ಚಿತ್ರವು ಪೋಸ್ಟ್ ಪ್ರೊಡಕ್ಷನ್ ಗೆ ಹೋಗಲಿದೆ. "ಚಿತ್ರ ಚೆನ್ನಾಗಿ ಮೂಡಿಬರಲಿದೆ. ಪ್ರೇಕ್ಷಕರ ನಿರೀಕ್ಷೆಯ ಮಟ್ಟಕ್ಕೆ ತಲುಪಲಿದೆ ಎಂದು ನಾನು ಭಾವಿಸುತ್ತೇನೆ" ಪೂರ್ಣ ಹೇಳಿದ್ದಾರೆ. ಚಿತ್ರ ಬಿಡುಗಡೆಗೆ ಮುನ್ನ ಅವರು ಚಿತ್ರದ ಆಡಿಯೋ ಬಿಡುಗಡೆ ಸಮಾರಂಬವನ್ನು ಅದ್ದೂರಿಯಾಗಿ ಏರ್ಪಡಿಸಲು ಯೋಜನೆ ಹಾಕಿಕೊಂಡಿದ್ದಾರೆ.
’ಹೋಮ್ ಮಿನಿಸ್ಟರ್’ ಚಿತ್ರದಲ್ಲಿ ತಾನ್ಯ ಹೋಪ್ ಸಹ ನಟಿಸುತ್ತಿದ್ದು ಚಿತ್ರಕ್ಕೆ ಗಿಬ್ರಾನ್ ಸಂಗೀತವಿದೆ. ಕುಂಜುನ್ನಿ ಕುಮಾರ್ ಚಿತ್ರದ ಛಾಯಾಗ್ರಾಹಕರಾಗಿದ್ದು ಭಾನು ಹಾಗೂ ಜಾನಿ ನೃತ್ಯ ಸಂಯೋಜನೆ ನೆರವೇರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT