ರಕ್ಷಿತ್ ಶೆಟ್ಟಿ 
ಸಿನಿಮಾ ಸುದ್ದಿ

ವಿಜಯಪುರಕ್ಕೆ ಹೊರಟ 'ಶ್ರೀಮನ್ನಾರಾಯಣ'

ರಕ್ಷಿತ್ ಶೆಟ್ಟಿ ನಾಯಕನಾಗಿರುವ ’ಅವನೆ ಶ್ರೀಮನ್ನಾರಾಯಣ’ ಚಿತ್ರತಂಡ ಕಡೆ ಕ್ಷಣದಲ್ಲಿ ಚಿತ್ರೀಕರಣ ಸ್ಥಳದಲ್ಲಿ ಬದಲಾವಣೆ ಮಾಡಿಕೊಂಡಿದೆ

ಬೆಂಗಳೂರು: ರಕ್ಷಿತ್ ಶೆಟ್ಟಿ ನಾಯಕನಾಗಿರುವ ’ಅವನೆ ಶ್ರೀಮನ್ನಾರಾಯಣ’ ಚಿತ್ರತಂಡ ಕಡೆ ಕ್ಷಣದಲ್ಲಿ ಚಿತ್ರೀಕರಣ ಸ್ಥಳದಲ್ಲಿ ಬದಲಾವಣೆ ಮಾಡಿಕೊಂಡಿದೆ. ರಾಜಸ್ಥಾನದಲ್ಲಿ ಇದ್ದ ಚಿತ್ರದ ಶೂಟಿಂಗ್ ವಿಜಯಪುರಕ್ಕೆ ಸ್ಥಳಾಂತರಾವಗಿದೆ.
ಸಚಿನ್ ರವಿ ನಿರ್ದೇಶನದ ಈ ಚಿತ್ರ ಇದಾಗಲೇ ಬೆಂಗಳೂರಿನಲ್ಲಿ ಒಂದು ಭಾಗದ ಚಿತ್ರೀಕರಣ ಮುಗಿಸಿದೆ. ಇದೇ ಮೇ 15ಕ್ಕೆ ವಿಜಯಪುರದಲ್ಲಿ ಎರಡನೇ ಹಂತದ ಶೂಟಿಂಗ್ ಪ್ರಾರಂಭವಾಗಲಿದೆ. ಅಲ್ಲಿ ಸುಮಾರು 25 ದಿನಗಳ ಕಾಲ ಶೂಟಿಂಗ್ ನಡೆಯಲಿದೆ.
"ಮೊದಲು ನಾವು ರಾಜಸ್ಥಾನದಲ್ಲಿ ಚಿತ್ರೀಕರಣ ನಡೆಸಲು ನಿರ್ಧರಿಸಿದ್ದು ಸತ್ಯ, ವಿಜಯಪುರವನ್ನೊಮ್ಮೆ ನೋಡಿದಾಗ ಚಿತ್ರಕಥೆಗೆ ಈ ಸ್ಥಲವೇ ಸೂಕ್ತ ಎನಿಸಿದೆ. ಹೀಗಾಗಿ ರಾಜಸ್ಥಾನದ ಬದಲಿಗೆ ವಿಜಯಪುರದಲ್ಲಿ ಶೂಟಿಂಗ್ ನಡೆಸಲು ತೀರ್ಮಾನಿಸಿದ್ದೇವೆ" ರಕ್ಷಿತ್ ಶೆಟ್ಟಿ ಹೇಳಿದಾರು.
"ವಿಜಯಪುರ ಹಾಗು ಬಾದಾಮಿಯಲ್ಲಿನ ಚಿತ್ರೀಕರಣ ಮಾತ್ರ ಚಿತ್ರದಲ್ಲಿನ ಔಟ್ ಡೋರ್ ಶೂಟಿಂಗ್ ಭಾಗವಾಗಿದೆ. ಇನ್ನುಳಿದ ಬಹುತೇಕ ಚಿತ್ರವು ಒಳಾಂಗಣ ಚಿತ್ರೀಕರಣ ಸೆಟ್ ನಲ್ಲಿ ಚಿತ್ರೀಕರಿಸಲ್ಪಟ್ಟಿದೆ" ಇದಕ್ಕಾಗಿ ನಾವು ದೊಡ್ಡ ಸೆಟ್ ಗಳನ್ನು ಹಾಕಿದ್ದೆವು" ಅವರು ಹೇಳಿದರು.
’ಅವನೇ ಶ್ರೀಮನ್ನಾರಾಯಣ’ ಚಿತ್ರದಲ್ಲಿ ಶಾನ್ವಿ ಶ್ರೀವಾಸ್ತವ ನಾಯಕಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಾಲಾಜಿ ಮನೋಹರ್, ಅಚ್ಯುತ್ ರಾವ್ ಸೇರಿ ಅನೇಕರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿದ್ದು ಪುಷ್ಕರ್ ಫಿಲ್ಮ್ಸ್, ಪರಮ್ವತ್ ಸ್ಟುಡಿಯೋಸ್ ಹಾಗೂ ಶ್ರೀದೇವಿ ಎಂಟರ್ಪ್ರೈಸಸ್ ಜಂಟಿ ಸಹಯೋಗದಲ್ಲಿ ಚಿತ್ರವು ನಿರ್ಮಾಣವಾಗುತ್ತಿದೆ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ನಿಡಿದ್ದರೆ ಕರಮ್ ಚಾವ್ಲಾ ಛಾಯಾಗ್ರಹಣ ಮಾಡಿದ್ದಾರೆ.
ಜೂನ್ ಅಂತ್ಯಕ್ಕೆ 777 ಚಾರ್ಲಿ ಚಿತ್ರೀಕರಣ ಪ್ರಾರಂಭ
ಕಿರಣ್ ರಾಜ್ ನಿರ್ದೇಶನದ ರಕ್ಷಿತ್ ಶೆಟ್ಟಿ ನಾಯಕನಾದ ಚಿತ್ರ 777 ಚಾರ್ಲಿ ಚಿತ್ರದ ರಕ್ಷಿತ್ ಭಾಗದ ಚಿತ್ರೀಕರಣ ಜೂನ್ ನಲ್ಲಿ ಪ್ರಾರಂಭವಾಗಲಿದೆ. ಎರಡು ವಾರಗಳಲ್ಲಿ ಚಿತ್ರದ ನಾಯಕಿಯನ್ನು ಅಂತಿಮಗೊಳಿಸುವುದಾಗಿ ಚಿತ್ರತಂಡ ಹೇಳಿದೆ" ರಕ್ಶ್ಃಇತ್ ಶೆಟ್ಟಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT