ಕಾಳ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

'ಕಾಲಾ' ಚಿತ್ರಕ್ಕೆ ಕರ್ನಾಟಕದಲ್ಲಿ ನಿಷೇಧ ಹೇರಿದ್ದರ ಕಾರಣ ತಿಳಿದಿಲ್ಲ: ರಜನಿಕಾಂತ್

ನನ್ನ ಚಿತ್ರ ಬಿಡುಗಡೆಗೆ ಕರ್ನಾಟಕದಲ್ಲಿ ಏಕೆ ನಿರ್ಬಂಧ ಹೇರಲಾಗಿದೆ ಎಂದು ಕಾರಣ ತಿಳಿದಿಲ್ಲ. ಕರ್ನಾಟಕ ...

ಚೆನ್ನೈ: ನನ್ನ ಚಿತ್ರ ಬಿಡುಗಡೆಗೆ ಕರ್ನಾಟಕದಲ್ಲಿ ಏಕೆ ನಿರ್ಬಂಧ ಹೇರಲಾಗಿದೆ ಎಂದು ಕಾರಣ ತಿಳಿದಿಲ್ಲ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೌತ್ ಇಂಡಿಯನ್ ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ನ ಭಾಗವಾಗಿದ್ದು ಈ ವಿಷಯದಲ್ಲಿ ಅವರು ಮಧ್ಯೆ ಪ್ರವೇಶಿಸಿ ಸೌಹಾರ್ದಯುತ ಪರಿಹಾರಕ್ಕೆ ಬರುತ್ತಾರೆ ಎಂದು ಭಾವಿಸುತ್ತೇನೆ ಎಂದು ನಟ ರಜನಿಕಾಂತ್ ಹೇಳಿದ್ದಾರೆ.

ರಜನಿಕಾಂತ್ ಅವರ ಮುಂಬರುವ ಚಿತ್ರ ಕಾಲಾವನ್ನು ಕರ್ನಾಟಕದಲ್ಲಿ ಬಿಡುಗಡೆಗೆ ನಿಷೇಧ ಹೇರಿ ಕರ್ನಾಟಕ ವಾಣಿಜ್ಯ ಚಲನಚಿತ್ರ ಮಂಡಳಿ ನಿಷೇಧ ಹೇರಿದೆ. ಈ ಬಗ್ಗೆ ರಜನಿಕಾಂತ್ ಪ್ರತಿಕ್ರಿಯಿಸಿದ್ದು, ಕರ್ನಾಟಕದಲ್ಲಿ ಕೂಡ ಚಿತ್ರ ಬಿಡುಗಡೆಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುಮಾರು 10 ಕನ್ನಡಪರ ಸಂಘಟನೆಗಳು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ಸಂಪರ್ಕಿಸಿ ಕಾಲಾ ಚಿತ್ರ ಬಿಡುಗಡೆ ಮಾಡದಂತೆ ಕೋರಿದ್ದವು. ಕಾವೇರಿ ನೀರಿನ ವಿವಾದ ಕುರಿತು ರಜನಿಕಾಂತ್ ಹೇಳಿಕೆಯಿಂದ ಬೇಸರಗೊಂಡು ಚಿತ್ರ ಬಿಡುಗಡೆಗೆ ನಿಷೇಧ ಹೇರುವಂತೆ ಈ ಸಂಘಟನೆಗಳು ಒತ್ತಾಯಿಸಿದ್ದವು.

ರಜನಿಕಾಂತ್ ಅವರ ಈ ಹಿಂದಿನ ಚಿತ್ರ ಕಬಾಲಿ ಕರ್ನಾಟಕದಲ್ಲಿ ಸುಮಾರು 30 ಕೋಟಿ ರೂಪಾಯಿ ಗಳಿಸಿತ್ತು. ಕಾಲಾ ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗದಿದ್ದರೆ ಚಿತ್ರದ ಒಟ್ಟು ಗಳಿಕೆ ಮೇಲೆ ಪರಿಣಾಮ ಬೀರಲಿದೆ.

ಪಾ ರಂಜಿತ್ ನಿರ್ದೇಶನದಲ್ಲಿ ಕಾಲಾ ಚಿತ್ರ ಮೂಡಿಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT