ಬೆಂಗಳೂರು: ಕಿರಿಕ್ ಪಾರ್ಟಿ ಚಿತ್ರದ ಯಶಸ್ಸಿನ ನಂತರ ರಕ್ಷಿತ್ ಶೆಟ್ಟಿ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ನಟಿಸಲಿದ್ದಾರೆ. ಸದ್ಯ ಎರಡು ಚಿತ್ರಗಳಲ್ಲಿ ಬ್ಯುಸಿಯಾಗಿರುವ ರಕ್ಷಿತ್ ಸಚಿನ್ ನಿರ್ದೇಶನದ ಅವನೇ ಶ್ರೀಮನ್ನಾರಾಯಣ ಮತ್ತು ಕಿರಣ್ ರಾಜ್ ಚೊಚ್ಚಲ ನಿರ್ದೇಶನದ ಚಾರ್ಲಿ ಚಿತ್ರದಲ್ಲಿ ಅಭಿನಯಿಸಲಿದ್ದಾರೆ.
ಅವನೇ ಶ್ರೀಮನ್ನಾರಾಯಣ ಚಿತ್ರದ ಚಿತ್ರೀಕರಣ ಶೇಖಡ ಅರ್ಧಭಾಗದಷ್ಟು ಮುಕ್ತಾಯಗೊಂಡಿದೆ. ಈ ಮಧ್ಯೆ ಜೂನ್ 8ರಂದು ಚಾರ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದ್ದು ಅದಕ್ಕೂ ಮುನ್ನ ಜೂನ್ 6ರಂದು ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದ ದಿನ ಚಿತ್ರದ ಮುಹೂರ್ತ ಕಾರ್ಯಕ್ರಮ ನೆರವೇರಲಿದೆ.
ಅವನೇ ಶ್ರೀಮನ್ನಾರಾಯಣ ಚಿತ್ರಕ್ಕಾಗಿ ಬೃಹತ್ ಸೆಟ್ ಹಾಕಲು ಸಮಯದ ಅವಕಾಶ ಬೇಕಾಗಿರುವುದರಿಂದ ಅಷ್ಟರಲ್ಲಿ ಚಾರ್ಲಿ ಚಿತ್ರದ ಪ್ರಮುಖ ಸನ್ನಿವೇಶಗಳ ಚಿತ್ರೀಕರಣ ಮಾಡಿಕೊಳ್ಳಲು ಚಿತ್ರತಂಡ ತೀರ್ಮಾನಿಸಿದೆ. ಮೈಸೂರಿನಲ್ಲಿ 22 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಈ ಚಿತ್ರವನ್ನು ಪರಂವಾ ಸ್ಟುಡಿಯೋ ಜತೆಗೆ ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಿಸುತ್ತಿದ್ದಾರೆ.
ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದ ದಿನ ಅವನೇ ಶ್ರೀಮನ್ನಾರಾಯಣ ಮತ್ತು ಚಾರ್ಲಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮೂಲಕ ಎರಡು ಚಿತ್ರತಂಡ ರಕ್ಷಿತ್ ಗೆ ವಿಶೇಖ ಗಿಫ್ಟ್ ನೀಡಲು ಮುಂದಾಗಿವೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos