ಬೆಂಗಳೂರು; ಮಾಸ್ತಿಗುಡಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಸುಂದರ್ ಪಿ ಗೌಡ ಅವರು ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪ ಹಿನ್ನೆಲೆಯಲ್ಲಿ ನಟ ದುನಿಯಾ ವಿಜಯ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಗುರುವಾರ ತಿಳಿದುಬಂದಿದೆ.
ಮಾಸ್ತಿ ಗುಡಿ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ಖಳನಟರಾದ ಉದಯ್ ಮತ್ತು ಅನಿಲ್ ಅವರು ನೀರಿನಲ್ಲಿ ಮುಳುಗಿ ದುರಂತ ಸಾವನ್ನಪ್ಪಿದ್ದರು.
ಪ್ರಕರಣ ಸಂಬಂಧ ನಿರ್ಮಾಪಕ ಸುಂದರ್ ಗೌಡ ವಿರುದ್ಧ ರಾಮನಗರ ಜೆಎಂಎಫ್'ಸಿ ನ್ಯಾಯಾಲಯ ಬಂಧನ ವಾರೆಂಟ್ ಜಾರಿ ಮಾಡಿತ್ತು.
ಇದರಂತೆ ಸುಂದರ್ ಅವರನ್ನು ಬಂಧನಕ್ಕೊಳಪಡಿಸಲು ಪೊಲೀಸರು ಸುಂದರ್ ಅವರ ಮನೆಗೆ ಹೋದಾಗ ಅಲ್ಲಿಯೇ ಇದ್ದ ದುನಿಯಾ ವಿಜಯ್ ಅವರು ಪೊಲೀಸರನ್ನು ತಡೆದಿದ್ದಾರೆ. ಅಲ್ಲದೆ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದೂ ಅಲ್ಲದೆ, ಸುಂದರ್ ಅವರು ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದವು.
ಪ್ರಕರಣ ಕುರಿತು ಪೊಲೀಸರು ಇದೀಗ ವಿಜಯ್ ವಿರುದ್ಧ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮತ್ತು ಅನುಚಿತ ವರ್ತನೆ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos